BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಬಂಧಿತರಾಗಿದ್ದಂತ ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ದುರಂತ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯ ಪೊಲೀಸರಿಂದ ಮುನಿರಾಜು ರೆಡ್ಡಿ, ಭುವನ್ ರೆಡ್ಡಿ ಹಾಗೂ ಮುನಿಯಪ್ಪ ಎಂಬುವರನ್ನು ಬಂಧಿಸಲಾಗಿತ್ತು. ಇಂದು ಬಂಧಿತ ಆರೋಪಿಗಳನ್ನು ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಮೂವರು ಆರೋಪಿಗಳಿಗೆ … Continue reading BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ