ಬೆಂಗಳೂರು: ಆರ್ ಸಿ ಬಿ ಐಪಿಎಲ್ ಮ್ಯಾಚ್ ಗೆದ್ದಿದ್ದಕ್ಕೆ ಬೆಂಗಳೂರಲ್ಲಿ ತರಾತುರಿಯಲ್ಲಿ ಸಂಭ್ರಮಾಚರಣೆಗೆ ತಯಾರಿ ನಡೆಸಿ 11 ಅಭಿಮಾನಿಗಳ ಸಾವಿಗೆ ಕಾರಣವಾಗಿತ್ತು. ಈ ದುರಂತದ ಕಾರಣ ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತೆಗೆದು ಹಾಕಲಾಗಿದೆ.
ಈ ಬಗ್ಗೆ ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದರು. ತರಾತುರಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಮಾಡಿದ್ದಕ್ಕೆ ಅಧಿಕಾರಿಗಳು, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೇಲೂ ಸಿಟ್ಟಾಗಿದ್ದರು.
ಈ ಬೆನ್ನಲ್ಲೇ ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ತೆಗೆದು ಹಾಕಿ ಸರ್ಕಾರ ಆದೇಶಿಸಿದೆ. ಈ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರಿಗೆ ಕೋಕ್ ನೀಡಲಾಗಿದೆ.