ಬೆಂಗಳೂರು: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಜಮೀನು ವ್ಯಾಜ್ಯ ಇತ್ಯರ್ಥ ಪಡಿಸೋದಕ್ಕಾಗಿ 5 ಲಕ್ಷ ರೂ ಲಂಚ ಪಡೆದ ಪ್ರಕರಣ ಸಂಬಂಧ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದರು. ಅಲ್ಲದೇ ಅವರಿಗೆ ಬಂಧನದ ಭೀತಿ ಕೂಡ ಎದುರಾಗಿತ್ತು.
ರಾಜ್ಯದಲ್ಲಿ ರೈತರಿಗೆ ಅಗತ್ಯಕ್ಕನುಗುಣವಾಗಿ ರಾಸಾಯನಿಕ ಗೊಬ್ಬರ ಪೂರೈಕೆ – ಕೇಂದ್ರ ಸಚಿವ ಭಗವಂತ ಖೂಬಾ
ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಂತ ಜಿ ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಬೆಂಗಳೂರು ನಗರ ಸಿಇಓ ಸಂಗಪ್ಪ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಇನ್ನೂ ಜಿ ಮಂಜುನಾಥ್ ಅವರನ್ನು ಇಂಟ್ರಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂನ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.