ಬೆಂಗಳೂರಿನ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಅ.21ರಂದು ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ‘ಆದಷ್ಟು ಬೇಗ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವಂತೆ ಇದೇ 21ರಂದು ಬೆಂಗಳೂರಿನ ಶಾಸಕರು, ಮಾಜಿ ಮಹಾಪೌರರು ಹಾಗೂ ಪಾಲಿಕೆ ಸದಸ್ಯರು ಬೆಳಗ್ಗೆ 11 ಗಂಟೆಗೆ ಆನಂದರಾವ್ ವೃತ್ತದಿಂದ ಮುಖ್ಯಮಂತ್ರಿಗಳ ಮನೆವರೆಗೂ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಮನವಿ ಮಾಡಲಿದ್ದೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿವೆ. ಹೈಕೋರ್ಟ್ ಕೂಡ ಕಳೆದ ಒಂದೂವರೆ ವರ್ಷಗಳಿಂದ ರಸ್ತೆಗುಂಡಿಗಳ ವಿಚಾರವಾಗಿ ಚಾಟಿ ಬೀಸುತ್ತಲೇ ಇದೆ. … Continue reading ಬೆಂಗಳೂರಿನ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಅ.21ರಂದು ಪ್ರತಿಭಟನಾ ಮೆರವಣಿಗೆ