ಬೆಂಗಳೂರು: ನಗರದಲ್ಲಿ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಈ ಮಳೆಯ ಪರಿಣಾಮ ವಿದ್ಯುತ್ ಕಂಬವೊಂದು ಬಿಎಂಟಿಸಿ ಬಸ್ಸಿನ ಮೇಲೆಯೇ ಮುರಿದು ಬಿದ್ದಿದೆ. ಈ ವೇಳೆಯಲ್ಲಿ ಪ್ರಯಾಣಿಕರನ್ನು ಕೂಡಲೇ ಕೆಳಗೆ ಇಳಿಸಿದ್ದರಿಂದ ಮುಂದಾಗಲಿದ್ದಂತ ಭಾರೀ ಅನಾಹುತವೊಂದು ತಪ್ಪಿದೆ.
ಬೆಂಗಳೂರಿನ ಹೊಸಕೋಟೆ ಬಳಿಯ ಕಂಬಳಿಪುರ ಗ್ರಾಮದಲ್ಲಿ ಚಲಿಸುತ್ತಿದ್ದಂತ ಬಿಎಂಟಿಸಿ ಬಸ್ ಮೇಲೆಯೇ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಈ ವೇಳೆ ಬಸ್ ನಿಲ್ಲಿಸಿದಂತ ಚಾಲಕ, ಪ್ರಯಾಣಿಕರನ್ನು ತಕ್ಷಣವೇ ಇಳಿಸಿದ್ದಾನೆ. ಹೀಗಾಗಿ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಂಗಳೂರಿನ ಹೆಬ್ಬಾಳ, ಮೇಖ್ರಿ ಸರ್ಕಲ್, ಯಲಹಂಕ ಸೇರಿದಂತೆ ವಿವಿಧೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಅಲ್ಲಲ್ಲಿ ರಸ್ತೆಗೆ ನೀರು ನುಗ್ಗಿದ ಪರಿಣಾಮ, ವಾಹನ ಸಂಚಾರ ದಟ್ಟಣೆ ಉಂಟಾಗಿ ಸವಾರರು ಹೈರಾಣಾಗುವಂತೆ ಆಯ್ತು.
ಥಿಯೇಟರ್ನಲ್ಲಿ IPL ಪಂದ್ಯಗಳ ಪ್ರಸಾರಕ್ಕೆ BCCIನೊಂದಿಗೆ ಪಿವಿಆರ್ ಐನಾಕ್ಸ್ ಒಪ್ಪಂದ | PVR-INOX