ಬೆಂಗಳೂರು : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಅಪಾರ್ಟ್ಮೆಂಟ್ ನ 16ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ನಿಕ್ಷೇಪ ಬಂಗೇರ (26) ಎಂದು ತಿಳಿದುಬಂದಿದೆ. ಮಂಗಳೂರು ಮೂಲದ ವಿದ್ಯಾರ್ಥಿ ನಿಕ್ಷೇಪ ಬಂಗೇರ ಬಾಗಲಗುಂಟೆ ಪ್ರಿನ್ಸ್ ಅಪಾರ್ಟ್ಮೆಂಟಲ್ಲಿ ವಾಸವಿದ್ದ.ತಂದೆ ತಾಯಿ ಜೊತೆಗೆ ವಾಸವಿದ್ದ ನಿಕ್ಷೇಪ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಾಥಮಿಕ ವರದಿಯ ಪ್ರಕಾರ ಈತ ಅನಾರೋಗ್ಯದಿಂದ ಬಳಲುತ್ತಿದ್ದ ಅದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.








