Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧ: ಹಾಕಿದವರ ವಿರುದ್ಧ ಕೇಸ್, ದಂಡ ಫಿಕ್ಸ್ | BBMP News
KARNATAKA

BREAKING: ಬೆಂಗಳೂರಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧ: ಹಾಕಿದವರ ವಿರುದ್ಧ ಕೇಸ್, ದಂಡ ಫಿಕ್ಸ್ | BBMP News

By kannadanewsnow0930/07/2024 6:09 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಬಿಬಿಎಂಪಿ ನಿಷೇಧ ಏರಿದೆ. ಒಂದು ವೇಳೆ ನಿಯಮ ಮೀರಿ ಹಾಕಿದ್ರೇ ಅಂತವರ ವಿರುದ್ಧ ಕೇಸ್, ದಂಡ ವಿಧಿಸಲಿದೆ.

ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಫ್ಲೆಕ್ಸ್/ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಎಸ್.ಒ.ಪಿ ಹೊರಡಿಸಲಾಗುವುದೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್‌ಗಳ ನಿಯಂತ್ರಣಕ್ಕಾಗಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಜೊತೆ ಇಂದು ಪೊಲೀಸ್ ಅಧಿಕಾರಿ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಗರದಲ್ಲಿ ಅನಧಿಕೃವಾಗಿ ಅಳವಡಿಸುವ ಫ್ಲೆಕ್ಸ್, ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸೂಕ್ತವಾದ ಪ್ರಮಾಣಿತ ಕಾರ್ಯಾಚರಣೆಯ ವಿಧಾನ(SOP)ವನ್ನು ಹೊರಡಿಸಲಾಗುವುದು. ಅದರಂತೆ ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಅನಧಿಕೃತ ಜಾಹೀರಾತುಗಳು ಅಳವಡಿಸುವುದನ್ನು ಪರಣಾವಕಾರಿಯಾಗಿ ನಿಯಂತ್ರಿಸಲು ನಿರ್ದೇಶನ ನೀಡಿದರು.

ಫ್ಲೆಕ್ಸ್/ಬ್ಯಾನರ್ ಫ್ರಿಂಟಿಂಗ್ ಯುನಿಟ್ಸ್ ಗಳಿಗೆ ಎಚ್ಚರಿಕೆ:

ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಫ್ರಿಂಟಿಂಗ್ ಯುನಿಟ್ಸ್ ಗಳ ಪಟ್ಟಿ ಮಾಡಿಕೊಂಡು ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಸಹಯೋಗದೊಂದಿಗೆ ಎಲ್ಲಾ ಫ್ರಿಂಟಿಂಗ್ ಯುನಿಟ್ಸ್ ಗಳಿಗೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಅನಧಿಕೃತ ಜಾಹೀರಾತುಗಳನ್ನು ಮುದ್ರಿಸದಂತೆ ಎಚ್ಚರಿಕೆ ನೀಡಬೇಕು. ಪಾಲಿಕೆಯಿಂದ ಅನುಮತಿಯಿಲ್ಲದೆ ಯಾವದೇ ಅನಧಿಕೃತ ಜಾಹೀರಾತುಗಳನ್ನು ಮುದ್ರಿಸಿದಲ್ಲಿ ಅದನ್ನು ವಶಪಡಿಸಿಕೊಂಡು, ದಂಡ ವಿಧಿಸುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ರಾತ್ರಿ ವೇಳೆ ಗಸ್ತು ತಿರುಗುವ ಮೂಲಕ ನಿಗಾ:

ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಮೇಲೆ ನಿಗಾ ವಹಿಸಲು ವಲಯಕ್ಕೊಂದು ಪ್ರಹರಿ ವಾಹನವನ್ನು ನಿಯೋಜಿಸಲಾಗುತ್ತಿದೆ. ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳೂ ರಾತ್ರಿ ವೇಳೆ ಗಸ್ತು ತಿರುಗಲಿದ್ದು, ಈ ವೇಳೆ ಪೊಲೀಸ್ ಇಲಾಖೆಯಿಂದಲೂ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುವ ಮೇಲೆ ನಿಗಾವಹಿಸಲು ಮನವಿ ಮಾಡಿದರು.

ಪೊಲೀಸ್ ಠಾಣಾವಾರು ನೋಡಲ್ ಅಧಿಕಾರಿ ನಿಯೋಜನೆ:

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣಾವಾರು ಪಾಲಿಕೆಯಿಂದ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನಿಯೋಜಿಸಬೇಕು. ಇದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಾಧಿಸಲು ಅನುಕೂಲವಾಗಲಿದೆ. ಆದ್ದರಿಂದ ಕೂಡಲೆ ಪೊಲೀಸ್ ಠಾಣಾವಾರು ಒಬ್ಬ ನೋಡಲ್ ಅಧಿಕಾರಿಯನ್ನು ನಿಯೋಜನೆ ಮಾಡಲು ವಲಯ ಆಯುಕ್ತರಿಗೆ ಸೂಚನೆ ನೀಡಲಾಯಿತು.

1533ಗೆ ಕರೆ ಮಾಡಿ ಮಾಹಿತಿ ಕೊಡಿ:

ನಗರದಲ್ಲಿ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುವುದು ಕಂಡುಬಂದರೆ ಪಾಲಿಕೆಯ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಮಾಹಿತಿ ನೀಡಬಹುದೆಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಫ್ಲೆಕ್ಸ್, ಬ್ಯಾನರ್ ಗಳಿಗಾಗಿ ಅಫ್ಲಿಕೆಷನ್:

ನಗರದಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆ ವತಿಯಿಂದ ಅಫ್ಲಿಕೇಷನ್ ಅನ್ನು ಸಿದ್ದಪಡಿಸಲು ಚಿಂತನೆ ನಡೆಸಲಾಗಿದೆಯೆಂದು ಕಂದಾಯ ವಿಭಾಗದ ವಿಶೇಷ ಆಯುಕ್ತರು ಸಭೆಯಲ್ಲಿ ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ದಯಾನಂದ್ ರವರು ಮಾತನಾಡಿ, ನಗರದ ಸಾರ್ವಜನಿಕ ಸ್ಥಳ, ಪ್ರಮುಖ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಗಳಿಂದ ಸಾಕಷ್ಟು ಸಮಸ್ಯೆಗಳಾಗುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆಯ ಜೊತೆ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದೆಂದು ತಿಳಿಸಿದರು.

ಕರ್ನಾಟಕ ತೆರೆದ ಸ್ಥಳಗಳು ಕಾಯಿದೆ(ಕೆಒಪಿಡಿ) ಜೊತೆಗೆ ಇತರೆ ಕಾಯಿದೆ ಅಡಿಯಲ್ಲಿಯೂ ಅನಧಿಕೃತವಾಗಿ ಫ್ಲೆಕ್ಸ್ ಬ್ಯಾನರ್ ಗಳನ್ನು ಅಳವಡಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುವ ಮೂಲಕ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕಲು ಪಾಲಿಕೆ ಜೊತೆ ಕೈ ಜೋಡಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ನಗರದಲ್ಲಿ 1ನೇ ಜುಲೈ 2024 ರಿಂದ ನಗರದಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳ ಮೇಲೆ ನಿಗಾವಹಿಸಲಾಗುತ್ತಿದ್ದು, 8500ಕ್ಕೂ ಹೆಚ್ಚು ಫ್ಲೆಕ್ಸ್/ಬ್ಯಾನರ್ ಗಳನ್ನು ತೆರವುಗೊಳಿಸಿ 180ಕ್ಕೂ ಹೆಚ್ಚು ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಬಹುತೇಖವಾಗಿ ಅಳವಡಿಸಲಾಗುವ ಫೆಕ್ಸ್/ಬ್ಯಾನರ್ ಗಳು ಪರಿಸರ ಸಂರಕ್ಷಣಾ ಕಾಯಿದೆ 1986 ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿರುವ ಮಾರ್ಗಸೂಚಿಗಳ ವಿರುದ್ಧವಿದ್ದು, ಇದು ಕಾನೂನು ಉಲ್ಲಂಘನೆಯಾಗಿರುತ್ತದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಜಾಹೀರಾತು ಅಳವಡಿಸಲು ಪಾಲಿಕೆ ಕಾಯಿದೆ ಕಲಂ 158ರ ಅಡಿ ಪಾಲಿಕೆ ಅನುಮತಿಯು ಕಡ್ಡಾಯವಾಗಿದ್ದರೂ ಸಹ ಸಾರ್ವಜನಿಕರು ಸಾರ್ವಜನಿಕ ಸ್ಥಳಗಳು, ಮೈದಾನ, ಪಾರ್ಕ್ಸ್, ರಸ್ತೆ ಮೀಡಿಯನ್ಸ್, ಪಾದಚಾರಿ ಮಾರ್ಗ, ಮೇಲುಸೇತುವೆ, ವಿದ್ಯುತ್ ಕಂಬಗಳ ಮೇಲೆ ಯಾವುದೇ ಅನುಮತಿಯಿಲ್ಲದೆ ಪ್ರದರ್ಶಿಸುತ್ತಿರುವುದರಿಂದ ಪಾಲಿಕೆ ಆದೇಶವನ್ನು ಉಲ್ಲಂಘನೆಯೆಂದು ಪರಿಗಣಿಸಿ ಪಾಲಿಕೆ ಕಾಯಿದೆ 326ರಡಿ ಪ್ರಕಣರಣವನ್ನು ದಾಖಲಿಸಲಗುವುದು ಎಂದು ತಿಳಿಸಿದರು.

ಈ ವೇಳೆ ವಲಯ ಆಯುಕ್ತರುಗಳಾದ ಡಾ. ಆರ್.ಎಲ್ ದೀಪಕ್, ರಮೇಶ್, ಶಿವಾನಂದ್ ಕಪಾಶಿ, ರಮ್ಯಾ, ಸ್ನೇಹಲ್, ವಿನೋತ್ ಪ್ರಿಯಾ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ, ಎಸಿಪಿಗಳು, ಡಿಸಿಪಿಗಳು, ಜಾಹೀರಾತು ವಿಭಾಗದ ಉಪ ಆಯುಕ್ತರು, ಸಹಾಯಕ ಆಯುಕ್ತರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘400 ಪಶು ವೈದ್ಯಾಧಿಕಾರಿ’ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯನಾಡ್ ಭೂಕುಸಿತ: ಕೇರಳದಲ್ಲಿ 2 ದಿನಗಳ ಶೋಕಾಚರಣೆ ಘೋಷಣೆ | Wayanad landslide

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.