Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಡ್ರಗ್ಸ್ ನೀಡಿ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಯುವತಿ ಸಾವು.!

20/12/2025 10:42 AM

BIG NEWS : ಜೀವ ಬೆದರಿಕೆ ಹಿನ್ನೆಲೆ : ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು ಸಲ್ಲಿಕೆ

20/12/2025 10:36 AM

BREAKING : ಚಾಮರಾಜನಗರದಲ್ಲಿ ಒಂದೇ ದಿನ 5 ಹುಲಿಗಳ ಓಡಾಟ : ಬೆಚ್ಚಿಬಿದ್ದ ಗ್ರಾಮಸ್ಥರು!

20/12/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದಲ್ಲಿ ಶಿಷ್ಟಾಚಾರ ದುರ್ಬಳಕ: ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ
KARNATAKA

BREAKING: ‘ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದಲ್ಲಿ ಶಿಷ್ಟಾಚಾರ ದುರ್ಬಳಕ: ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ

By kannadanewsnow0911/03/2025 4:03 PM

ಬೆಂಗಳೂರು: ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಕೇಸ್ ಪ್ರಕರಣದ ನಂತ್ರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ದುರ್ಬಳಕೆಯ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶಿಸಲಾಗಿದೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕಳೆದ ವಾರದಿಂದ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರನ್ಯರಾವ್ ಎಂಬ ಚಿತ್ರನಟಿಯವರು ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ಶ್ರೀಮತಿ ರನ್ಯರಾವ್ ಇವರು ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಈ ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾಗಿರುತ್ತದೆ.

ಅಲ್ಲದೇ, ಉನ್ನತ ಅಧಿಕಾರಿಗಳಿಗೆ ವಿಮಾನ ನಿಲ್ದಾಣಗಳಲ್ಲಿ ನೀಡಲಾಗುವ ಶಿಷ್ಟಾಚಾರಗಳನ್ನು ತಮ್ಮ ತಂದೆಯವರ ರಾಜ್ಯ ಐಪಿಎಸ್ ವೃಂದದ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್‌ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಕೆ. ರಾಮಚಂದ್ರರಾವ್, ಐ.ಪಿ.ಎಸ್., ಇವರ ಹೆಸರನ್ನು ಬಳಕೆ ಮಾಡಿಕೊಂಡು ಮತ್ತು ಅವರಿಗೆ ನೀಡುವ ಶಿಷ್ಟಾಚಾರ ಸೇವೆಗಳನ್ನು ರನ್ಯರಾವ್ ಇವರು ದುರ್ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗಳನ್ನು ತಪ್ಪಿಸಿಕೊಂಡು ಅಕ್ರಮ ಕೃತ್ಯಗಳನ್ನು ನಡೆಸಿರುವ ಬಗ್ಗೆ ವರದಿಯಾಗಿರುತ್ತದೆ. ಆದ್ದರಿಂದ, ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಸಂಗತಿಗಳು ಹಾಗೂ ಸಂದರ್ಭಗಳು ಮತ್ತು ಈ ಪ್ರಕರಣದಲ್ಲಿ ರಾಜ್ಯ ಐಪಿಎಸ್ ವೃಂದದ ಪೊಲೀಸ್‌ ಮಹಾ ನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರ ರಾವ್, ಐಪಿಎಸ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸುತ್ತದೆ. ಅದರಂತೆ, ಈ ಕೆಳಕಂಡ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗೌರವ್ ಗುಪ್ತ, ಭಾ.ಆ.ಸೇ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ ಬೆಂಗಳೂರು ಇವರನ್ನು ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಸಂಗತಿಗಳು ಹಾಗೂ ಸಂದರ್ಭಗಳು ಮತ್ತು ಈ ಪ್ರಕರಣದಲ್ಲಿ ರಾಜ್ಯ ಐ.ಪಿ.ಎಸ್ ವೃಂದದ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್‌ ಗ್ರಹ ನಿರ್ಮಾಣ ಮತ್ತು ಮೂಲ ಸೌಕರ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ  ರಾಮಚಂದ್ರ ರಾವ್, ಐಪಿಎಸ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ತನಿಖಾಧಿಕಾರಿಗಳು ತನಿಖೆಯನ್ನು ತಕ್ಷಣ ಪ್ರಾರಂಭಿಸಿ, ತನಿಖಾ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವುದು.

ಸದರಿ ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ಎಲ್ಲಾ ರೀತಿಯ ನೆರವನ್ನು ನೀಡಲು ಪೊಲೀಸ್‌ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರು(ಪೊಲೀಸ್‌ ಪಡೆಗಳ ಮುಖ್ಯಸ್ಥರು), ಕರ್ನಾಟಕ ರಾಜ್ಯ ಮತ್ತು ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇವರು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.

BREAKING NEWS: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಡಿವೈಎಸ್ಪಿ ಅರೆಸ್ಟ್

BREAKING NEWS: ರಾಜ್ಯ ಸರ್ಕಾರದಿಂದ ‘ರೆಸಾರ್ಟ್, ಹೋಂ ಸ್ಟೇ’ಗಳಿಗೆ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ

Share. Facebook Twitter LinkedIn WhatsApp Email

Related Posts

BIG NEWS : ಜೀವ ಬೆದರಿಕೆ ಹಿನ್ನೆಲೆ : ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು ಸಲ್ಲಿಕೆ

20/12/2025 10:36 AM1 Min Read

BREAKING : ಚಾಮರಾಜನಗರದಲ್ಲಿ ಒಂದೇ ದಿನ 5 ಹುಲಿಗಳ ಓಡಾಟ : ಬೆಚ್ಚಿಬಿದ್ದ ಗ್ರಾಮಸ್ಥರು!

20/12/2025 10:30 AM1 Min Read

BREAKING : ಅಲಯನ್ಸ್ ವಿವಿಯಲ್ಲಿ ಲಕ್ಷಾಂತರ ದುಡ್ಡು ಪಡೆದು ಹಾಜರಾತಿ ಕಳ್ಳಾಟ : ಸಿಬ್ಬಂದಿ, ವಿದ್ಯಾರ್ಥಿಗಳ ವಿರುದ್ಧ ‘FIR’

20/12/2025 10:16 AM1 Min Read
Recent News

SHOCKING : ದೇಶದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಡ್ರಗ್ಸ್ ನೀಡಿ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಯುವತಿ ಸಾವು.!

20/12/2025 10:42 AM

BIG NEWS : ಜೀವ ಬೆದರಿಕೆ ಹಿನ್ನೆಲೆ : ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು ಸಲ್ಲಿಕೆ

20/12/2025 10:36 AM

BREAKING : ಚಾಮರಾಜನಗರದಲ್ಲಿ ಒಂದೇ ದಿನ 5 ಹುಲಿಗಳ ಓಡಾಟ : ಬೆಚ್ಚಿಬಿದ್ದ ಗ್ರಾಮಸ್ಥರು!

20/12/2025 10:30 AM

BREAKING : ಮಲಯಾಳಂ ಖ್ಯಾತ ನಟ, ನಿರ್ದೇಶಕ `ಶ್ರೀನಿವಾಸನ್’ ನಿಧನ | Srinivasan passes away

20/12/2025 10:23 AM
State News
KARNATAKA

BIG NEWS : ಜೀವ ಬೆದರಿಕೆ ಹಿನ್ನೆಲೆ : ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು ಸಲ್ಲಿಕೆ

By kannadanewsnow0520/12/2025 10:36 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳ ವಿರುದ್ಧ ಷಡ್ಯಂತರ ಹಾಗೂ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಆರೋಪಿ…

BREAKING : ಚಾಮರಾಜನಗರದಲ್ಲಿ ಒಂದೇ ದಿನ 5 ಹುಲಿಗಳ ಓಡಾಟ : ಬೆಚ್ಚಿಬಿದ್ದ ಗ್ರಾಮಸ್ಥರು!

20/12/2025 10:30 AM

BREAKING : ಅಲಯನ್ಸ್ ವಿವಿಯಲ್ಲಿ ಲಕ್ಷಾಂತರ ದುಡ್ಡು ಪಡೆದು ಹಾಜರಾತಿ ಕಳ್ಳಾಟ : ಸಿಬ್ಬಂದಿ, ವಿದ್ಯಾರ್ಥಿಗಳ ವಿರುದ್ಧ ‘FIR’

20/12/2025 10:16 AM

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : 25,000 ರೂ. ದಂಡ ವಿಧಿಸಿದ ಕೋರ್ಟ್

20/12/2025 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.