ಬೆಂಗಳೂರು : ಸಂಸಾರದಲ್ಲಿ ಸಹಜವಾಗಿ ಗಂಡ ಕುಡಿದು ಬಂದು ಹೆಂಡತಿಗೆ ಕಿರುಕುಳ ನೀಡುವುದನ್ನ ನೋಡುತ್ತೇವೆ. ಇದರಿಂದ ಬೇಸತ್ತ ಮಹಿಳೆಯರು ಗಂಡನ ಚಟ ಬಿಡಿಸಲು ಏನೇನು ಹರಸಾಹಸ ಮಾಡುತ್ತಾರೆ. ಆದರೆ ಬೆಂಗಳೂರಿನಲ್ಲಿ ಇದರ ತದ್ವಿರುದ್ಧವಾಗಿ ಹೆಂಡತಿಯ ಕುಡಿತದ ಚಟಕ್ಕೆ ಬೇಸತ್ತು ಗಂಡ ರಿಹ್ಯಾಬ್ ಕೇಂದ್ರಕ್ಕೆ ಸೇರಿಸಿದ್ದಾನೆ. ಆದರೆ ಆತನ ದುರಾದೃಷ್ಟವೋ ಏನೋ ಎಂಬಂತೆ, ಹೆಂಡತಿ ಅಲ್ಲಿನ ಸಿಬ್ಬಂದಿಯೊಂದಿಗೆ ಪರಾರಿಯಾಗಿದ್ದಾಳೆ.
ಹೌದು ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿದ್ದಾಳೆ. ಹೌದು, ಈ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಕೆಲಸ ಮಾಡುತ್ತಿದ್ದ ಸುನೀಲ್ ಎಂಬಾತನ ಜೊತೆ ಪರಾರಿಯಾಗಿದ್ದಾರೆ ಎಂದು ಪತಿ ಗಂಗರಾಜು ಆರೋಪಿಸಿದ್ದು, ನನ್ನ ಪತ್ನಿಯನ್ನು ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನೆಲಮಂಗಲ ತಾಲ್ಲೂಕಿನ ದಿಣ್ಣೆಪಾಳ್ಯ ಗ್ರಾಮದ ದಂಪತಿಯಾದ ಇವರು, 13 ವರ್ಷಗಳ ಹಿಂದೆ ಮದುವೆಯಾಗಿದ್ದ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥ ನಗರದಲ್ಲಿರು. ಇದೀಗ 11 ವರ್ಷದ ಮಗನನ್ನ ಬಿಟ್ಟು ಹೋಗಿದ್ದಾಳೆ ಎಂದು ಪತಿ ಗಂಗರಾಜು ಆರೋಪಿಸಿ ದೂರು ನೀಡಿದ್ದಾರೆ.
ವಿಪರೀತ ಕುಡಿತ ಹಿನ್ನೆಲೆ ಬಿಡಿಸುವ ಸಲುವಾಗಿ ಶ್ರೀ ಸಾಯಿ ಫೌಂಡೇಶನ್ ಹೆಸರಿನ ರಿಹ್ಯಾಬ್ ಕೇಂದ್ರಕ್ಕೆ ಮೇ4 ರಂದು ಸೇರಿಸಿದ್ದ ಪತಿ, ಬಳಿಕ ಆಗಸ್ಟ್ 10ನೇ ತಾರೀಖು ಮನೆಗೆ ಪತ್ನಿಯನ್ನ ಕರೆದುಕೊಂಡು ಬಂದಿದ್ದ. ನಂತರ 22ನೇ ತಾರೀಖು ಮಗನ ಪಿಜಿಯಲ್ಲಿ ಇರುವುದಾಗಿ ಹೇಳಿ ಹೋದವಳು ನಾಪತ್ತೆಯಾಗಿದ್ದಾಳೆ.