ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದೆ. ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ವ್ಯಕ್ತಿಯೊಬ್ಬರ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ.
ಬೆಂಗಳೂರಿನ ರಾಮಗೊಂಡನಹಳ್ಳಿಯ ಖಾಸಗಿ ಶಾಲೆಯ ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ. ಬಿಹಾರ ಮೂಲದ ಜಿತೇಂದ್ರ ಪಾಂಡೆ ಆಲಿಯಾಸ್ ಬಬ್ಲು ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕುಡಿದ ಮತ್ತಿನಲ್ಲಿ ಬಿಹಾರ ಮೂಲದ ಕಾರ್ಮಿಕ ಸೀತಾರಾಮ್ ಪಾಂಡೆ ಎಂಬಾತನಿಂದ ಈ ಕೃತ್ಯ ಎಸಗಲಾಗಿದೆ. ಬೆಂಗಳೂರಲ್ಲಿ ಟೈಲ್ಸ್ ಕೆಲಸವನ್ನು ಜಿತೇಂದ್ರ, ಸೀತಾರಾಮ್ ಮಾಡುತ್ತಿದ್ದರು.
ಜುಲೈ.28ರ ರಾತ್ರಿ ಮದ್ಯ ಸೇವಿಸಿ ನಶೆಯಲ್ಲಿ ಗಲಾಟೆಯನ್ನು ಜಿತೇಂದ್ರ ಹಾಗೂ ಸೀತಾರಾಮ್ ಮಾಡಿಕೊಂಡಿದ್ದಾರೆ. ಈ ಗಲಾಟೆ ತಾರಕ್ಕೇರಿದಂತ ಸಂದರ್ಭದಲ್ಲಿ ಜಿತೇಂದ್ರನ ತಲೆಗೆ ಸುತ್ತಿಗೆಯಿಂದ ಹೊಡೆದು ಸೀತಾರಾಮ್ ಹತ್ಯೆಗೈದಿದ್ದಾನೆ.
BREAKING: ಅಲಾಸ್ಕಾ, ಹವಾಯಿಯಲ್ಲಿ ಸುನಾಮಿ: 10 ಅಡಿ ಎತ್ತರದ ಅಲೆಗಳ ಅಬ್ಬರ !
ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ