Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

20/05/2025 9:55 PM

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.31ರಂದು ಬೆಂಗಳೂರಲ್ಲಿ ಮುಂಜಾನೆ 2.40ರವರೆಗೆ ‘ನಮ್ಮ ಮೆಟ್ರೋ ರೈಲು ಸಂಚಾರ’ ವಿಸ್ತರಣೆ | Namma Metro
KARNATAKA

ಡಿ.31ರಂದು ಬೆಂಗಳೂರಲ್ಲಿ ಮುಂಜಾನೆ 2.40ರವರೆಗೆ ‘ನಮ್ಮ ಮೆಟ್ರೋ ರೈಲು ಸಂಚಾರ’ ವಿಸ್ತರಣೆ | Namma Metro

By kannadanewsnow0927/12/2024 5:10 PM

ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರಂದು ಮುಂಜಾನೆ 2.40ರವರೆಗೆ ನಮ್ಮ ಮೆಟ್ರೋ ಸಂಚಾರದ ( Namma Metro Train Service ) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ಹೊಸ ವರ್ಷಾಚರಣೆಯಲ್ಲಿ ತೊಡಗೋರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ( Bangalore Metro Rail Corporation Limited-BMRCL ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025ರ ಹೊಸ ವರ್ಷದ ಮುನ್ನಾದಿನದಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸುತ್ತಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 02:00 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದ್ದು, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತವೆ ಎಂದಿದೆ.

ರೈಲುಗಳು 31 ಡಿಸೆಂಬರ್ 2024ರ ರಾತ್ರಿ 11.00 ರಿಂದ ದಿನದ ವಿಸ್ತೃತ ಸೇವಾ ಅವಧಿಯವರೆಗೆ 10 ನಿಮಿಷಗಳ ಮಧ್ಯಂತರದಲ್ಲಿ ಕಾರ್ಯನಿರ್ವಹಿಸುತ್ತವೆ. ಆದಾಗ್ಯೂ, ಎಂ.ಜಿ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಡಿಸೆಂಬರ್ 31, 2024 ರಂದು ರಾತ್ರಿ 11:00 ಗಂಟೆಯಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ರೈಲುಗಳು ನಿಲ್ಲುತ್ತವೆ.

ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಗಮ್ಯಸ್ಥಾನಕ್ಕೆ ರಾತ್ರಿ 11:00 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು ₹ 50 ಬೆಲೆಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಅನ್ನು ಬಳಸಲು ಸೂಚಿಸಲಾಗಿದೆ. ಈ ಕಾಗದದ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ 2024ರ ಬೆಳಗ್ಗೆ 8:00 ರಿಂದ ಮುಂಗಡವಾಗಿ ಖರೀದಿಸಲು ಲಭ್ಯವಿರುತ್ತದೆ. ಸಾಮಾನ್ಯ QR ಕೋಡ್ ಟಿಕೆಟ್‌ಗಳು ಮತ್ತು ಕಾರ್ಡ್‌ಗಳು ಈ ನಿಲ್ದಾಣಗಳಿಂದ ಪ್ರಯಾಣಿಸಲು ಸಹ ಮಾನ್ಯವಾಗಿರುತ್ತವೆ.

ಯಾವುದೇ ನಿರ್ದಿಷ್ಟ ನಿಲ್ದಾಣದಲ್ಲಿ ಜನಸಂದಣಿಯನ್ನು ತಪ್ಪಿಸಲು, ಪ್ರಯಾಣಿಕರು ವೈಟ್‌ಫೀಲ್ಡ್ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ಕಡೆಗೆ ಹೋಗುವವರು ಪ್ರಯಾಣಕ್ಕಾಗಿ ಟ್ರಿನಿಟಿ ಮೆಟ್ರೋ ನಿಲ್ದಾಣವನ್ನು ಬಳಸಬಹುದು ಮತ್ತು ಚಲ್ಲಘಟ್ಟ ಹಾಗೂ ಮಾದಾವರ ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸಿಕೊಳ್ಳಬಹುದು. ನಿಗಮವು ಸಾರ್ವಜನಿಕರು ತಮ್ಮ ಪ್ರಯಾಣವನ್ನು ತಮಗೆ ಅನುಗುಣವಾಗಿ ಯೋಜಿಸಲು ಮತ್ತು ಸುರಕ್ಷಿತ ಹಾಗೂ ಸುಗಮ ಪ್ರಯಾಣಕ್ಕಾಗಿ ನಿಮ್ಮ ಸಹಕಾರವನ್ನು ನೀಡುವಂತೆ ಕೋರಿದೆ.

SHOCKING: LIC ಹಣಕ್ಕಾಗಿ ತಂದೆಯನ್ನೇ ಕೊಂದ ಮಗ: ಅಪ್ಪನ ಸಾವಿನ ಸುದ್ದಿ ತಿಳಿದು ಇನ್ನೊಬ್ಬ ಪುತ್ರ ಆತ್ಮಹತ್ಯೆ

BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು, ಮೃತ ಸಂಖ್ಯೆ 4ಕ್ಕೆ ಏರಿಕೆ

BREAKING : ‘ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ರಾಷ್ಟ್ರಪತಿ ‘ದ್ರೌಪದಿ ಮುರ್ಮು’.!

Share. Facebook Twitter LinkedIn WhatsApp Email

Related Posts

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

20/05/2025 9:55 PM1 Min Read

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM1 Min Read

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM1 Min Read
Recent News

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

20/05/2025 9:55 PM

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM
State News
KARNATAKA

ಮೇ.24ರಂದು ‘ಸೇಡಂ’ ತಾಲ್ಲೂಕಿನಲ್ಲಿ ಬಿಜೆಪಿಯಿಂದ ‘ಬೃಹತ್ ತಿರಂಗ ಯಾತ್ರೆ’

By kannadanewsnow0920/05/2025 9:55 PM KARNATAKA 1 Min Read

ಸೇಡಂ: ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವಿನ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಅಭೂತ ಪೂರ್ವ ಸಾಧನೆಗೈದಿತ್ತು. ಈ ಹಿನ್ನಲೆಯಲ್ಲಿ…

5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಗೊತ್ತೇ? ಇಲ್ಲಿದೆ ಸಿಎಂ ಸಿದ್ಧರಾಮಯ್ಯ ಕೊಟ್ಟ ವಿವರ

20/05/2025 9:47 PM

ವಾಸಿಸುವವನೇ ನೆಲದ ಒಡೆಯ, ಇದು ನಮ್ಮ ಸಂಕಲ್ಪ: ಸಿಎಂ ಸಿದ್ಧರಾಮಯ್ಯ

20/05/2025 9:40 PM

BREAKING : ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ!

20/05/2025 9:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.