Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅವಕಾಶ ಕೊಟ್ರೆ ನಾನು ಮಂತ್ರಿ ಆಗುತ್ತೇನೆ : ಸಚಿವ ಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

28/10/2025 11:26 AM

ನವೆಂಬರ್ ನಲ್ಲಿ ಕ್ರಾಂತಿ ಆದರೆ ಅದು ಬಿಜೆಪಿಯಲ್ಲಿ ಆಗಬಹುದು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪೋಟಕ ಹೇಳಿಕೆ!

28/10/2025 11:23 AM

BREAKING : ‘ಮೊಂಥಾ’ ಸೈಕ್ಲೋನ್ ಎಫೆಕ್ಟ್ : ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಭಾರೀ ಮಳೆ | WATCH VIDEO

28/10/2025 11:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ HMT ಅರಣ್ಯ ಭೂಮಿಯಲ್ಲಿ ಮರ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ
KARNATAKA

ಬೆಂಗಳೂರಿನ HMT ಅರಣ್ಯ ಭೂಮಿಯಲ್ಲಿ ಮರ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ

By kannadanewsnow0929/10/2024 4:51 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹೆಚ್ ಎಂ ಟಿ ವಶಪಡಿಸಿಕೊಂಡಿದ್ದಂತ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಇನ್ನೂ ಅರಣ್ಯಭೂಮಿ ಇದ್ದು, ಅದರಲ್ಲಿನ ಮರಗಳನ್ನು ಅನುಮತಿಯಿಲ್ಲದೇ ಅಕ್ರಮವಾಗಿ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.

ಈ ಕುರಿತಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದು, ಇದನ್ನು 1960ರ ದಶಕದಲ್ಲಿ ಡಿನೋಟಿಫಿಕೇಷನ್ ಮಾಡದೆ ಕಾನೂನು ಬಾಹಿರವಾಗಿ ಎಚ್.ಎಂ.ಟಿ. ಸಂಸ್ಥೆಗೆ ದಾನ, ಮಂಜೂರು ಹೆಸರಲ್ಲಿ ಹಸ್ತಾಂತರಿಸಲಾಗಿರುತ್ತದೆ. ಸುಪ್ರೀಂಕೋರ್ಟ್ ‘Once a forest is always a forest unless de-notified’ ಎಂದು ಹೇಳಿದ್ದು, ಡಿ ನೋಟಿಫಿಕೇಷನ್ ಆಗದ ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯವೇ ಆಗಿರುತ್ತದ. ಜೊತೆಗೆ ತನ್ನ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದು, ಇಲ್ಲಿ ಅರಣ್ಯತರ ಚಟುವಟಿಕೆ ನಡೆಯುತ್ತಿರುತ್ತದೆ. ಈ ಅರಣ್ಯ ಪ್ರದೇಶದಲ್ಲಿ ಮರ ಗಿಡಗಳನ್ನು ಕಡಿದಿರುವುದು ಉಪಗ್ರಹ ಚಿತ್ರದಿಂದ ಗೋಚರಿಸುತ್ತಿದೆ ಎಂದಿದ್ದಾರೆ.

ಎಚ್.ಎಂ.ಟಿ. ತನ್ನ ವಶದಲ್ಲಿರುವ ಅರಣ್ಯ ಭೂಮಿನ್ನು ಸಿನಿಮಾ ಚಿತ್ರೀಕರಣಕ್ಕೆ ಮತ್ತು ಖಾಲಿ ಜಾಗವನ್ನು ದಿನದ ಆಧಾರದ ಮೇಲೆ ಬಾಡಿಗೆಗೆ ನೀಡುತ್ತಿರುವುದನ್ನೂ ಗಮನಿಸಲಾಗಿದೆ. ಇನ್ನು ಕೆನರಾ ಬ್ಯಾಂಕ್ ಗೆ ಎಚ್.ಎಂ.ಟಿ. ಮಾರಾಟ ಮಾಡಿದ ಎನ್ನಲಾದ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್‌’ ಎಂಬ ಹೆಸರಿನ ಚಲನಚಿತ್ರಕ್ಕಾಗಿ ಹಲವು ತಿಂಗಳಿನಿಂದ ಚಿತ್ರೀಕರಣ ನಡೆಯುತ್ತಿದ್ದು, ಬೃಹತ್ ಸೆಟ್ ಹಾಕಿರುತ್ತದೆ. ಇದಕ್ಕಾಗಿ ಇಲ್ಲಿದ್ದ ನೂರಾರು ಮರ ಗಿಡ ಕಡಿಯಲಾಗಿದೆ. ನಿಯಮಾನುಸಾರ ಅನುಮತಿ ಇಲ್ಲದೆ ಇಲ್ಲದೆ ಮರ ಕಡಿಯುವುದು ಅದರಲ್ಲೂ ಅರಣ್ಯ ಭೂಮಿಯಲ್ಲಿ ಮರ ಗಿಡಗಳ ಅಕ್ರಮ ಕಡಿತಲೆ ದಂಡನೀಯ ಅಪರಾಧ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದಿಂದ ಹಿಂದಿನ ಮತ್ತು ಇಂದಿನ ಉಪಗ್ರಹ ಚಿತ್ರಗಳನ್ನು ಪಡೆದು, ಎಷ್ಟು ಮರ ಕಡಿಯಲಾಗಿದೆ? ಇದಕ್ಕೆ ನಿಯಮಾನುಸಾರ ಅನುಮತಿ ಪಡೆಯಲಾಗಿದೆಯೇ.. ಅನುಮತಿ ಕೊಟ್ಟಿದ್ದರೆ ಅರಣ್ಯ ಭೂಮಿಯಲ್ಲಿ ಮರ ಕಡಿತಲೆಗೆ ಅನುಮತಿ ನೀಡಿದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು, ಅನುಮತಿ ಇಲ್ಲದೆ ಮರ ಕಡಿತಲೆ ಮಾಡಿದ್ದಲ್ಲಿ ಅದಕ್ಕೆ ಕಾರಣರಾದ ಎಲ್ಲರ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಈ ಮೂಲಕ ಸೂಚಿಸಿದ್ದಾರೆ.

ಸಂಡೂರು ವಿಧಾನಸಭಾ ಉಪ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ- ಡಿಸಿ

GOOD NEWS: ರಾಜ್ಯದ ಕಲಾವಿದರ ‘ಮಾಸಾಶನ ಮೊತ್ತ 3,000’ಕ್ಕೆ ಹೆಚ್ಚಳ: ಸಚಿವ ಶಿವರಾಜ ತಂಡರಗಿ ಘೋಷಣೆ

Share. Facebook Twitter LinkedIn WhatsApp Email

Related Posts

BIG NEWS : ಅವಕಾಶ ಕೊಟ್ರೆ ನಾನು ಮಂತ್ರಿ ಆಗುತ್ತೇನೆ : ಸಚಿವ ಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

28/10/2025 11:26 AM1 Min Read

ನವೆಂಬರ್ ನಲ್ಲಿ ಕ್ರಾಂತಿ ಆದರೆ ಅದು ಬಿಜೆಪಿಯಲ್ಲಿ ಆಗಬಹುದು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪೋಟಕ ಹೇಳಿಕೆ!

28/10/2025 11:23 AM1 Min Read

ಸಿಎಂ ಸ್ಥಾನದ ಪ್ರಶ್ನೆ ಎಲ್ಲೂ ಉದ್ಭವ ಆಗಿಲ್ಲ, ಹೈಕಮಾಂಡ್ ಸಹ ಏನು ಹೇಳಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

28/10/2025 11:16 AM1 Min Read
Recent News

BIG NEWS : ಅವಕಾಶ ಕೊಟ್ರೆ ನಾನು ಮಂತ್ರಿ ಆಗುತ್ತೇನೆ : ಸಚಿವ ಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

28/10/2025 11:26 AM

ನವೆಂಬರ್ ನಲ್ಲಿ ಕ್ರಾಂತಿ ಆದರೆ ಅದು ಬಿಜೆಪಿಯಲ್ಲಿ ಆಗಬಹುದು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪೋಟಕ ಹೇಳಿಕೆ!

28/10/2025 11:23 AM

BREAKING : ‘ಮೊಂಥಾ’ ಸೈಕ್ಲೋನ್ ಎಫೆಕ್ಟ್ : ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಭಾರೀ ಮಳೆ | WATCH VIDEO

28/10/2025 11:20 AM

ಸಿಎಂ ಸ್ಥಾನದ ಪ್ರಶ್ನೆ ಎಲ್ಲೂ ಉದ್ಭವ ಆಗಿಲ್ಲ, ಹೈಕಮಾಂಡ್ ಸಹ ಏನು ಹೇಳಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

28/10/2025 11:16 AM
State News
KARNATAKA

BIG NEWS : ಅವಕಾಶ ಕೊಟ್ರೆ ನಾನು ಮಂತ್ರಿ ಆಗುತ್ತೇನೆ : ಸಚಿವ ಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

By kannadanewsnow0528/10/2025 11:26 AM KARNATAKA 1 Min Read

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿದೆ. ಅಲ್ಲದೆ…

ನವೆಂಬರ್ ನಲ್ಲಿ ಕ್ರಾಂತಿ ಆದರೆ ಅದು ಬಿಜೆಪಿಯಲ್ಲಿ ಆಗಬಹುದು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪೋಟಕ ಹೇಳಿಕೆ!

28/10/2025 11:23 AM

ಸಿಎಂ ಸ್ಥಾನದ ಪ್ರಶ್ನೆ ಎಲ್ಲೂ ಉದ್ಭವ ಆಗಿಲ್ಲ, ಹೈಕಮಾಂಡ್ ಸಹ ಏನು ಹೇಳಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

28/10/2025 11:16 AM

BIG NEWS : ಮುಂದಿನ 5 ವರ್ಷ ನಾನೇ ‘CM’ ಎಂದ ಸಿದ್ದರಾಮಯ್ಯ : ಗೃಹ ಸಚಿವ ಜಿ.ಪರಮೇಶ್ವರ್ ಅಚ್ಚರಿ ಹೇಳಿಕೆ

28/10/2025 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.