Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈಂಗಿಕತೆ ನಿರಾಕರಿಸಿದ ‘ಪತ್ನಿ’ಯಿಂದ ವಿಚ್ಛೇದನ ಪಡೆಯ್ಬೋದು : ಹೈಕೋರ್ಟ್ ಮಹತ್ವದ ಆದೇಶ

18/07/2025 3:18 PM

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ

18/07/2025 3:04 PM

‘ಕೆಲ್ವಿನೇಟರ್’ ಸ್ವಾಧೀನದ ಪಡಿಸಿಕೊಂಡ ‘ರಿಲಯನ್ಸ್ ರೀಟೇಲ್’

18/07/2025 2:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ
KARNATAKA

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ

By kannadanewsnow0918/07/2025 3:04 PM

ಮೈಸೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು ಮತ್ತು ಮಹಾದೇವಪ್ಪ. ಈಗ ಯಾರೋ ಬಂದು ಅದರ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಆತನ ಹೆಸರು ಕೂಡ ನಾನು ಇಲ್ಲಿ ಹೇಳಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸಿದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಮಾತನಾಡಿದರು.

ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ದವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ತಮಗಿದೆ ಎಂದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿದೆ. ಈ ಪಕ್ಷಕ್ಕೂ ಸರಿಯಾದ ಸಿದ್ಧಾಂತ ಇಲ್ಲ ಎಂದರು.

ಮಂಡಲ್ ಕಮಿಷನ್ ವರದಿಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು ಇದೇ ಕಮಂಡಲವಾದಿಗಳು ಮತ್ತು ಮನುವಾದಿಗಳು. ಇವರ ಈ ಜನವಿರೋಧಿ ಇತಿಹಾಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೆನಪಿಡಬೇಕು ಎಂದರು.

ಮಹಿಳಾ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ರಾಜೀವ್ ಗಾಂಧಿ ಯವರು ಸಂವಿಧಾನಕ್ಕೆ ತಿದ್ದುಪಡಿ ತಂದು 35% ಮಹಿಳಾ ಮೀಸಲಾತಿ ತಂದರು. ಈ ಮೀಸಲಾತಿಯನ್ನು 50% ಗೆ ಹೆಚ್ಚಿಸಲು ಹೋರಾಟ ಮಾಡಿದ್ದು ಸೋನಿಯಾಗಾಂಧಿ. ಇದನ್ನು ನೆನಪಿಡಬೇಕು ಎಂದರು.

ಭಾಷಣದ ಇತರೆ ಹೈಲೈಟ್ಸ್…

*ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದ ಯುವ ಕಾಂಗ್ರೆಸ್ಸಿನ ಜಾತ್ಯತೀತ ಸೇನಾನಿಗಳು ಸೈದ್ಧಾಂತಿಕ ಹೋರಾಟ ಮುಂದುವರೆಸುತ್ತಾರೆ, ಸೈದ್ಧಾಂತಿಕವಾಗಿ ಯುವ ಸಂಘಟನೆಯನ್ನು ಬಲಗೊಳಿಸುತ್ತಾರೆ ಎನ್ನುವ ಭರವಸೆ ಇದೆ ಎಂದರು.

*ಕಾಂಗ್ರೆಸ್ ಭಾರತ ದೇಶವನ್ನು ಬ್ರಿಟೀಷರ ಗುಲಾಮಗಿರಿಯಿಂದ ಸ್ವಾತಂತ್ರ್ಯ ಕೊಡಿಸಿತು.

ಆದರೆ ಸಂಘ ಪರಿವಾರದ ಬಿಜೆಪಿ ಬ್ರಿಟೀಷರ ಜೊತೆ ಶಾಮೀಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿತು‌ ಎನ್ನುವುದು ಇತಿಹಾಸ

*RSS 1925 ರಲ್ಲೇ ಆರಂಭವಾದರೂ ಯಾವತ್ತೂ ಕೂಡ ಹೆಡಗೇವಾರ್ ಆಗಲಿ, ಗುರುಜಿ ಹೆಸರಿನವರಾಗಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ. ಇದನ್ನು ಯುವ‌ಮಿತ್ರರು ಅರ್ಥ ಮಾಡಿಕೊಳ್ಳಬೇಕು.

*RSSನ‌ ಮುಖವಾಣಿ ರಾಜಕೀಯ ಪಕ್ಷ ಜನಸಂಘ ಆರಂಭವಾಯಿತು. ಬಳಿಕ ಬಿಜೆಪಿ ಆಯಿತು. ಇವರು ದೇಶಭಕ್ತಿ ಬಗ್ಗೆ ಭಯಾನಕವಾಗಿ ಮಾತನಾಡ್ತಾರೆ. ಆದರೆ ದೇಶದ ಸ್ವಾತಂತ್ರ್ಯ ಹೋರಾಟದಿಂದ ದೂರ ಉಳಿದಿದ್ದರು. ದೇಶದ ಪರವಾಗಿ ಇವರು ಬರಲೇ ಇಲ್ಲ ಎಂದರು.

*ಭಾರತೀಯ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಯತ್ನವನ್ನು ಇವರು ಮಾಡುವುದೇ ಇಲ್ಲ. ಮೋದಿಯವರು ಬಾಯಲ್ಲಿ “ಸಬ್ ಕಾ ಸಾಥ್” ಅಂತ ಡೈಲಾಗ್ ಹೊಡಿತಾರೆ. ಆದರೆ, ಬಿಜೆಪಿಯಲ್ಲಿ 240 ಮಂದಿ MP ಗಳಲ್ಲಿ ಒಬ್ಬರೂ ಅಲ್ಪ ಸಂಖ್ಯಾತರಿಲ್ಲ. ಇವರು ಯಾವತ್ತೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸುವುದಿಲ್ಲ. ಇವರು ಕೊಟ್ಟ ಸಂವಿಧಾನವನ್ನು ಗೌರವಿಸುವುದಿಲ್ಲ ಎಂದರು.

*ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು RSS ನ ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ಪತ್ರ ಬರೆದಿದ್ದಾರೆ. ಇದನ್ನು ಯುವ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ಅರ್ಥ ಮಾಡಿಸುವ ಕೆಲಸವನ್ನು ಯುವ ಕಾಂಗ್ರೆಸ್ ಸೇನಾನಿಗಳು ಮಾಡಬೇಕು ಎಂದರು.

ಸಂವಿಧಾನದ ಆಶಯ ಮತ್ತು ಮೌಲ್ಯಗಳ ಬಗ್ಗೆ ಬದ್ಧತೆ ಇರುವ ಏಕೈಕ ಪಕ್ಷ ಕಾಂಗ್ರೆಸ್

ಯುವ ಕಾಂಗ್ರೆಸ್ ಚುನಾವಣೆ ಮುಗಿದ ಮೇಲೆ ಮುಗಿಯಿತು. ಗೆದ್ದವರು, ಸೋತವರೆಲ್ಲಾ ಒಟ್ಟಾಗಿ ಹೋಗಬೇಕು

ಗುಂಪುಗಾರಿಕೆ ಬೇಡ, ಒಬ್ಬ ನಾಯಕರ ಹಿಂದೆ ಹೋಗಬಾರದು. ಸಿದ್ಧಾಂತವೇ ನಾಯಕತ್ವ. ಸಿದ್ಧಾಂತದ ಜೊತೆಗೆ ನೀವೆಲ್ಲಾ ಇರಬೇಕು

*ಬಾವಿಯಲ್ಲಿ ಕಸ ಸೇರಿದಂತೆ ಜಾತಿ ಸೇರಿಕೊಳ್ಳುತ್ತದೆ. ದುರ್ಬಲ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ಬಂದಾಗ ಮಾತ್ರ ನಮಗೆ ಸಿಕ್ಕ ಸ್ವಾತಂತ್ರ್ಯಕ್ಕೆ ಬೆಲೆ ಬರುತ್ತದೆ ಎಂದರು.

*ನೀವೆಲ್ಲರೂ ನಮ್ಮ ಸಂವಿಧಾನವನ್ನು ಮತ್ತು ಸಂವಿಧಾನ ಜಾರಿ ಸಭೆಯ ಚರ್ಚೆಯನ್ನು ತಪ್ಪದೇ ಓದಬೇಕು ಎಂದರು.

*ಮಕ್ಕಳಿಗೆ ಅನ್ನಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಬಂದು ನಿಂತ ತಾಯಂದಿರನ್ನು ನಾನು ಕಂಡಿದ್ದೆ. ಈ ಪರಿಸ್ಥಿತಿ ಹೋಗಬೇಕು ಎನ್ನುವ ಕಾರಣಕ್ಕೆ ನಾನು ಅನ್ನಭಾಗ್ಯ ಜಾರಿ ತಂದೆ, ಅನ್ನಕ್ಕಾಗಿ ಯಾರೂ ಯಾರನ್ನೂ ಬೇಡುವ ಅಗತ್ಯವಿಲ್ಲದ ಪರಿಸ್ಥಿತಿ ತಂದೆ ಎಂದರು.

*ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ಎನ್ನುವುದನ್ನು ಮರೆಯಬಾರದು.

*ಮೋದಿ ಮುಖ್ಯಮಂತ್ರಿ ಆಗಿದ್ದಾಗ ಏನೇನು ಹೇಳಿದ್ದರೋ ಅದಕ್ಕೆ ವಿರುದಗಧವಾಗಿ ಪ್ರಧಾನಿ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಯವರು ಮೈಸೂರಿಗೆ ಏನಾದ್ರೂ ಮಾಡಿದ್ರಾ ? ಬಿಜೆಪಿ ಬರೀ ಬುರುಡೆ ಬಿಡತ್ತೆ

ಬಿಜೆಪಿ ಯವರು ಮೈಸೂರಿಗೆ ಏನಾದ್ರೂ ಮಾಡಿದ್ರಾ ? ಇಲ್ಲಿರುವ ಮಹಾರಾಣಿ ಕಾಲೇಜು, ಆಸ್ಪತ್ರೆ, ಜಯದೇವ ಆಸ್ಪತ್ರೆ ಸೇರಿ ಇಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೆಲ್ಲಾ ನಮ್ಮಿಂದ ಆಗಿದ್ದು. ನಾನು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿ ಮಾಡಿದ್ದೇ ಹೊರತು ಬುರುಡೆ ಬಿಜೆಪಿ‌ ಮಾಡಿದ್ದೇನೂ ಇಲ್ಲ ಎಂದು ವಿವರಿಸಿದರು.

ಒಂದೇ ವೆದಿಕೆಗೆ ಬನ್ನಿ: ಸಿ.ಎಂ ಸವಾಲು

ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನಮ್ಮ ಜೊತೆ ಒಂದೇ ವೇದಿಕೆಯಲ್ಲಿ‌ಬಹಿರಂಗ ಚರ್ಚೆಗೆ ಬರಲಿ. ನಾನೇ ಬರುತ್ತೇನೆ. ಈ ಸವಾಲನ್ನು‌ ಬಿಜೆಪಿ‌ ಸ್ವೀಕರಿಸಲು ಸಿದ್ದವಿಲ್ಲ ಏಕೆ ಎಂದು ಪ್ರಶ್ನಿಸಿದರು.

ಬಿಜೆಪಿ ಏನೂ ಕೆಲಸ ಮಾಡದೆ ಕೇವಲ ಬರೀ ಬುರುಡೆ ಬಿಡತ್ತೆ. ಬಿಜೆಪಿ ಯವರು ಕೆಲಸ ಮಾಡಿದ ಸಾಕ್ಷಿ ಗುಡ್ಡೆ ತೋರಿಸಿ ಎಂದರು.

‘ಕೆಲ್ವಿನೇಟರ್’ ಸ್ವಾಧೀನದ ಪಡಿಸಿಕೊಂಡ ‘ರಿಲಯನ್ಸ್ ರೀಟೇಲ್’

ಸರ್ಕಾರದ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ. ಸಾಲ : ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಬಿಎಂಟಿಸಿಗೆ ಸಾರ್ವಜನಿಕ ಸಾರಿಗೆ ಕ್ಷೇತ್ರದ ಮಹತ್ತರ ಸೇವೆಗೆ ‘ಮೋಸ್ಟ್ ವ್ಯಾಲ್ಯೂಬಲ್ ಪಾರ್ಟ್ನರ್’ ಪ್ರಶಸ್ತಿ

18/07/2025 2:39 PM1 Min Read

ಮೈಸೂರು ಸಮಾವೇಶ-ಸರ್ಕಾರದ ಜನಪರ ಕೆಲಸ ಜನರ ಮುಂದಿಡುವ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

18/07/2025 2:17 PM2 Mins Read

ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

18/07/2025 2:15 PM1 Min Read
Recent News

ಲೈಂಗಿಕತೆ ನಿರಾಕರಿಸಿದ ‘ಪತ್ನಿ’ಯಿಂದ ವಿಚ್ಛೇದನ ಪಡೆಯ್ಬೋದು : ಹೈಕೋರ್ಟ್ ಮಹತ್ವದ ಆದೇಶ

18/07/2025 3:18 PM

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ

18/07/2025 3:04 PM

‘ಕೆಲ್ವಿನೇಟರ್’ ಸ್ವಾಧೀನದ ಪಡಿಸಿಕೊಂಡ ‘ರಿಲಯನ್ಸ್ ರೀಟೇಲ್’

18/07/2025 2:59 PM

BREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ JeM ಮುಖ್ಯಸ್ಥ ‘ಮಸೂದ್ ಅಜರ್’ ಪತ್ತೆ ; ವರದಿ

18/07/2025 2:54 PM
State News
KARNATAKA

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ

By kannadanewsnow0918/07/2025 3:04 PM KARNATAKA 3 Mins Read

ಮೈಸೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು ಮತ್ತು ಮಹಾದೇವಪ್ಪ. ಈಗ ಯಾರೋ ಬಂದು ಅದರ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಆತನ…

ಬಿಎಂಟಿಸಿಗೆ ಸಾರ್ವಜನಿಕ ಸಾರಿಗೆ ಕ್ಷೇತ್ರದ ಮಹತ್ತರ ಸೇವೆಗೆ ‘ಮೋಸ್ಟ್ ವ್ಯಾಲ್ಯೂಬಲ್ ಪಾರ್ಟ್ನರ್’ ಪ್ರಶಸ್ತಿ

18/07/2025 2:39 PM

ಮೈಸೂರು ಸಮಾವೇಶ-ಸರ್ಕಾರದ ಜನಪರ ಕೆಲಸ ಜನರ ಮುಂದಿಡುವ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

18/07/2025 2:17 PM

ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

18/07/2025 2:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.