Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

ಟ್ವಿಶಾ ಶರ್ಮಾ ನಿಗೂಢ ಸಾವು: ಕುಣಿಕೆ, ಬೆಲ್ಟ್ ಹಾಗೂ 80 ಕೆಜಿ ತೂಕದ ಡಮ್ಮಿ ಬಳಸಿ ಮರುಸೃಷ್ಟಿಸಿದ CBI!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ; ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ – HDK
KARNATAKA

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ; ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ – HDK

By ವಸಂತ ಬಿ ಈಶ್ವರಗೆರೆ

ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ರೈತ ಭವನದ ಬಳಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು.

ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆಯನ್ನು ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನು ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಇದಾಗಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರ್ಕಾರ. 30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ಏರಬೇಕಿದೆ. ಎ ಖಾತಾ ದಂಧೆಯ ಮೂಲಕ ರಾಜ್ಯ ಸರ್ಕಾರ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡೋದು ಎಂದರೆ ಹೀಗೆನಾ? ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ಕೊಡಲು ಹೊರಟಿದ್ದಾರೆ. ಈ ಸರ್ಕಾರ ಬಂದ ಮೇಲೆ ನಿರಂತರವಾಗಿ ಸುಲಿಗೆ ಮಾಡುತ್ತಿದೆ. ಕೇವಲ ಹಣ ಮಾಡುವುದಕ್ಕೆ ಸರ್ಕಾರ ಹೊರಟಿದೆ. ಪ್ರತಿಯೊಂದರಲ್ಲಿ ದುಡ್ಡು ಮಾಡುವ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದೆ ಎಂದು ಕಟುವಾಗಿ ಟೀಕಿಸಿದರು.

ಈ ಸರ್ಕಾರದಲ್ಲಿ ಹಣ ಇಲ್ಲ. ಅದಕ್ಕೆ ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ. ಬೆಂಗಳೂರಿನ ಗುಂಡಿ ಮುಚ್ಚೋದು ಇರಲಿ. ರಾಜ್ಯದಲ್ಲಿರುವ ಗುಂಡಿಗಳನ್ನೂ ಮುಚ್ಚೋಕೆ ಇವರಿಂದ ಆಗುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಸಚಿವರು; ಜೆಡಿಎಸ್ ಕೊಡುಗೆ ಏನು ಎಂದು ಹಾಸನದಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನನ್ನ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ದೆಹಲಿಗೆ ಬಂದಿದ್ದರು. 2018ರಲ್ಲಿ ನೀವು ಕೊಟ್ಟ 500 ಕೋಟಿ ರೂಪಾಯಿ ಅನುದಾನದಲ್ಲಿಯೇ ಇನ್ನೂ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳುತ್ತಾರೆ. ಅನುದಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ನಾನು ಅಧಿಕಾರದಲ್ಲಿ ಇದ್ದ ಎಷ್ಟು ಕೊಟ್ಟಿದ್ದೇನೆ, ಇವರು ಎಷ್ಟು ಕೊಟ್ಟಿದ್ದಾರೆ ಎಂಬ ಬಗ್ಗೆ ಜನರ ಮುಂದೆ ದಾಖಲೆ ಇಡಲಿ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸುಸಜ್ಜಿತ ಆಟೋ ನಿಲ್ದಾಣ ಲೋಕಾರ್ಪಣೆ:

ಮಂಡ್ಯದ ಸಂಜಯ ನಗರ ವೃತ್ತದಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಸುಸಜ್ಜಿಯ ಆಟೋ ನಿಲ್ದಾಣವನ್ನು ಇದೇ ಸಂದರ್ಭದಲ್ಲೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟನೆ ಮಾಡಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವರ ಸಂಸತ್ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ಆಟೋ ನಿಲ್ದಾಣ ನಿರ್ಮಾಣ ಮಾಡಿದ್ದೇವೆ. ಇದು ಸುಸಜ್ಜಿತ, ವಿಶಾಲ ಆಟೋ ನಿಲ್ದಾಣ ಆಗಿದ್ದು, ಆಟೋ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಇಲ್ಲಿ ಸುಸಜ್ಜಿತ ಆಟೋ ನಿಲ್ದಾಣ ಬೇಕು ಎನ್ನುವುದು ಬಹಳ ದಿನಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಈಡೇರಿಸುವ ಕೆಲಸ ಆಗಿದೆ. ಅಲ್ಪ ಕಾಲದಲ್ಲಿಯೇ ನಿಲ್ದಾಣ ನಿರ್ಮಾಣ ಆಗಿದೆ ಎಂದು ಸಚಿವರು ಹೇಳಿದರು.

ನಗರದಲ್ಲಿ ಆಟೋ ವ್ಯವಸ್ಥೆ ಜನತೆಯ ಸಂಚಾರಕ್ಕೆ ಬಹಳ ಅನುಕೂಲವಾಗಿದೆ. ಆದರೆ, ಆಟೋ ಚಾಲಕರು ಮಳೆ, ಬಿಸಿಲಿನಲ್ಲಿ ಕಷ್ಟ ಅನುಭವಿಸುತ್ತಿದ್ದರು. ನಮಗೊಂದು ಸುಸಜ್ಜಿತ ನಿಲ್ದಾಣ ಮಾಡಿಕೊಡಿ ಎಂದು ಕೇಳಿದ್ದರು. ತಕ್ಷಣವೇ ಅದಕ್ಕೆ ಕ್ರಮ ವಹಿಸಿದ್ದೇವೆ. ದೇವೇಗೌಡರ ಸಂಸತ್ ನಿಧಿ ಹಾಗೂ ನನ್ನ ಪಾಲಿನ ಸಂಸತ್ ನಿಧಿಯ ಅನುದಾನದಿಂದ ಕಾಮಗಾರಿ ಕೈಗೆತ್ತಿಗೊಂಡಿದ್ದೆವು. ಈ ಸಂದರ್ಭದಲ್ಲಿ ಅನುದಾನ ನೀಡಿದ ದೇವೇಗೌಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮಂತ್ರಿ ಸಿ ಎಸ್ ಪುಟ್ಟರಾಜು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮುಖಂಡರಾದ ರಾಮಚಂದ್ರ, ನಗರ ಸಭಾಧ್ಯಕ್ಷ ಪ್ರಕಾಶ್ ಮೊದಲಾದವರು ಇದ್ದರು.

ನಾವು ಹಿಂದುಳಿದ ಯಾವ ಜಾತಿಗೂ ಸೇರುವವರಲ್ಲ: ಸಮೀಕ್ಷೆ ನಿರಾಕರಿಸಿದ ಇನ್ಫೋಸಿಸ್ ಸುಧಾ, ನಾರಾಯಣಮೂರ್ತಿ

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

ಟ್ವಿಶಾ ಶರ್ಮಾ ನಿಗೂಢ ಸಾವು: ಕುಣಿಕೆ, ಬೆಲ್ಟ್ ಹಾಗೂ 80 ಕೆಜಿ ತೂಕದ ಡಮ್ಮಿ ಬಳಸಿ ಮರುಸೃಷ್ಟಿಸಿದ CBI!

ವಿಮಾನ ನಿಲ್ದಾಣಗಳಲ್ಲಿ ರೀಲ್ಸ್ ಮಾಡಿದರೆ ಎಚ್ಚರ: ಭಾರಿ ದಂಡದ ಜೊತೆಗೆ ವಿಮಾನಯಾನ ನಿಷೇಧದ ಭೀತಿ!

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.