Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1,725 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Crime News: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಓರ್ವ ಮನೆಗಳ್ಳ ಅರೆಸ್ಟ್, ಚಿನ್ನಾಭರಣ ಸೀಜ್
KARNATAKA

Crime News: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಓರ್ವ ಮನೆಗಳ್ಳ ಅರೆಸ್ಟ್, ಚಿನ್ನಾಭರಣ ಸೀಜ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಮನೆ ಕಳವು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 556 ಗ್ರಾಂ ಚಿನ್ನಾಭರಣ, 1 ಕೆಜಿ 200 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 39.62 ಲಕ್ಷ ಎಂಬುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಳ್ಳಕೆರೆಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:20/07/2024 ರಂದು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:20/07/2024 ರಂದು ಬೆಳಗ್ಗೆ ಪಿರಾದುದಾರರು ಹಾಗೂ ಅವರ ತಾಯಿ ಇಬ್ಬರು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿರುತ್ತಾರೆ. ಸಂಜೆ ವಾಪಸ್ ಬಂದು ನೋಡಲಾಗಿ ಯಾರೋ ಅಪರಿಚಿತರು ಮನೆಯ ಮುಂಬಾಗಿಲಿನ ಬೀಗವನ್ನು ಮುರಿದು, ಒಳ ಪ್ರವೇಶಿಸಿ, ಕೊಠಡಿಯ ಬೀರುವಿನಲ್ಲಿಟ್ಟಿದ್ದ 20 ಗ್ರಾಂ ಚಿನ್ನಾಭರಣ, 200 ಗ್ರಾಂ ಬೆಳ್ಳಿ ಹಾಗೂ ಕ್ಷ 30,000/- ನಗದನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ ಎಂದಿದ್ದಾರೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:08/12/2024 ರಂದು ಹೆಚ್‌ಬಿಆರ್ ಲೇಔಟ್‌ನ 4ನೇ ಬ್ಲಾಕ್ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯು ಹೊಂದಿದ್ದ ಬ್ಯಾಗ್‌ನ್ನು ಪರೀಶಿಲಿಸಲಾಗಿ, ಅದರಲ್ಲಿ ಒಂದು ಸ್ಕೂ ಡ್ರೈವ್, ಚಿಕ್ಕದಾದ ಕಬ್ಬಿಣದ ರಾಡ್, ಹಾಗೂ ಕಟ್ಟಿಂಗ್ ಪ್ಲೇಯ‌ ಇದ್ದವು. ಆತನನ್ನು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಬೆಂಗಳೂರು ನಗರ ಹಾಗೂ ವಿವಿಧ ರಾಜ್ಯಗಳಲ್ಲೂ ಸಹ ಮನೆ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ ಎಂದು ತಿಳಿಸಿದ್ದಾರೆ.

ದಿನಾಂಕ:09/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 11 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಕಳವು ಮಾಡಿದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕುಣಿಗಲ್‌ನಲ್ಲಿರುವ ಆತನ ಸ್ನೇಹಿತನಿಗೆ ನೀಡಿರುವುದಾಗಿ ತಿಳಿಸಿರುತ್ತಾನೆ. ತನಿಖೆಯನ್ನು ಮುಂದುವರೆಸಿ, ಕುಣಿಗಲ್‌ನಲ್ಲಿರುವ ಸ್ನೇಹಿತನನ್ನು ವಿಚಾರಣೆ ಮಾಡಲಾಗಿ, ಆತನು ಚಿನ್ನಾಭರಣಗಳನ್ನು ಚಿಕ್ಕಪೇಟೆಯ ಜ್ಯೂವೆಲರಿ ಅಂಗಡಿಯ ಆತನ ಸ್ನೇಹಿತನಿಗೆ ಮಾರಾಟ ಮಾಡುವ ಸಲುವಾಗಿ ನೀಡಿರುವುದಾಗಿ ತಿಳಿಸಿರುತ್ತಾನೆ. ಈ ಕುರಿತು ಚಿಕ್ಕಪೇಟೆಯ ಜ್ಯೂವೆಲರಿ ಶಾಪ್‌ನ ಮಾಲೀಕನಿಗೆ ದಿನಾಂಕ:14/12/2024 ರಂದು ನೋಟಿಸ್‌ನ್ನು ಜಾರಿ ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.

ದಿನಾಂಕ:14/12/2024 ರಂದು ಚಿಕ್ಕಪೇಟೆಯ ಜ್ಯೂವೆಲರಿ ಶಾಪ್‌ನ ಮಾಲೀಕನು 556 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ 200 ಗ್ರಾಂ ಬೆಳ್ಳಿ ವಸ್ತುಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 139,62,000/- (ಮೂವತ್ತೊಂಬತ್ತು ಲಕ್ಷದ ಅರವತ್ತೆರಡು ಸಾವಿರ ರೂಪಾಯಿ.)
ಈ ಪ್ರಕರಣದ ಆರೋಪಿಯ ಬಂಧನದಿಂದ ಹೆಣ್ಣೂರು ಪೊಲೀಸ್ ಠಾಣೆಯ ಒಟ್ಟು 11 ಮನೆ ಕಳವು ಪ್ರಕರಣಗಳು ಬೆಳಕಿಗೆ ಬಂದಿರುತ್ತದೆ ಎಂದಿದ್ದಾರೆ.

ದಿನಾಂಕ 16/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ ಎಂದು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್  ಡಿ.ದೇವರಾಜ್ ಐ.ಪಿ.ಎಸ್‌ ಅವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಉಮಾಶಂಕರ್ ಎಂ.ಎಚ್ ಅವರ ಮಾರ್ಗದರ್ಶನದಲ್ಲಿ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಎಲ್ ಅವರ ಅಧಿಕಾರಿ/ಸಿಬ್ಬಂದಿಯವರುಗಳು ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

BREAKING: ಬೆಂಗಳೂರಲ್ಲಿ ಹಾಡಹಗಲೇ ಹೋಟೆಲ್ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಒಂದು ಕೈ ಕಟ್

ವಿವಸ್ತ್ರಗೊಳಿಸಿ, ಥಳಿಸಿ, ಮೂತ್ರ ವಿಸರ್ಜನೆ: ದಲಿತ ಯುವಕ ಆತ್ಮಹತ್ಯೆ | Dalit Teen

Share. Facebook Twitter LinkedIn WhatsApp Email

Related Posts

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1,725 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

2 Mins Read

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

2 Mins Read

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

1 Min Read
Recent News

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1,725 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

State News
KARNATAKA

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1,725 ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2024-25 ರಿಂದ 2025-26ರ (ಅಕ್ಟೋಬರ್ 2025) ಅವಧಿಯವರೆಗೆ ಖಾಲಿ…

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.