Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಜನ್ ಕ್ಲಬ್ಬಿಂಗ್’ ಹೊಗಳಿದ ಪ್ರಧಾನಿ ಮೋದಿ ; ‘ಜಾಗತಿಕ ಸಂಗೀತ ಕಚೇರಿಗಳಿಗಿಂತ ಕಮ್ಮಿಯಿಲ್ಲ’ ಎಂದು ಶ್ಲಾಘನೆ!

26/01/2026 10:11 PM

BREAKING: ಅಮೆರಿಕದಲ್ಲಿ ಹಿಮಬಿರುಗಾಳಿಗೆ ಸಿಲುಕಿ ಜೆಟ್ ಪಥನ: 7 ಜನರು ಸಾವು, ಓರ್ವನಿಗೆ ಗಾಯ | Jet crashes in US

26/01/2026 10:08 PM

BREAKING : ‘ICC’ ಆಹ್ವಾನಕ್ಕೆ ‘ಸ್ಕಾಟ್ಲೆಂಡ್’ ಫುಲ್ ಖುಷ್ ; ‘ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್!

26/01/2026 9:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಮದ್ಯ ಮಾರಾಟ’ ನಿಷೇಧ: ನಗರ ಪೊಲೀಸ್ ಆಯುಕ್ತರ ಆದೇಶ | Liquor Sale Ban
KARNATAKA

BREAKING: ಬೆಂಗಳೂರಲ್ಲಿ ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಮದ್ಯ ಮಾರಾಟ’ ನಿಷೇಧ: ನಗರ ಪೊಲೀಸ್ ಆಯುಕ್ತರ ಆದೇಶ | Liquor Sale Ban

By kannadanewsnow0913/09/2024 3:47 PM

ಬೆಂಗಳೂರು: 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಮೆರವಣಿಯ ಹಿನ್ನಲೆಯಲ್ಲಿ ದಿನಾಂಕ 14-09-2024ರ ನಾಳೆ ಹಾಗೂ ದಿನಾಂಕ 15-09-2024ರ ನಾಡಿದ್ದು ಕೆಲ ಏರಿಯಾಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗಗಳ ಕೆಲವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್‌ & ರೆಸ್ಟೋರೆಂಟ್‌ ಮತ್ತು ವೈನ್ ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗಗಳ ಉಪ ಪೊಲೀಸ್ ಆಯುಕ್ತರುಗಳು ಉಲ್ಲೇಖಿತ ಪತ್ರಗಳಲ್ಲಿ ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ನಾನು ಸ್ವತಃ ಪರಿಶೀಲಿಸಲಾಗಿ ಹಾಗೂ ಗುಪ್ತವಾರ್ತಾ ವಿಭಾಗದಿಂದ ಸಂಗ್ರಹಿಸಿದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆ ಎಂದು ತಿಳಿದುಬಂದಿರುತ್ತದೆ. 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗದಂತೆ ಅಹಿತಕರ ಘಟನೆಗಳನ್ನು ತಡೆಯುವ ಅವಶ್ಯಕತೆ ಇರುವುದರಿಂದ ಈ ಕೆಳಕಂಡ ವಿಭಾಗಗಳ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡಿರುತ್ತೇನೆ. ದಿನಾಂಕ: 06-09-2024 ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಾಡಿಸಿ ಈ ಕೆಳಕಂಡಂತೆ ಪರಿಷ್ಕತ ಆದೇಶವನ್ನು
ಹೊರಡಿಸಲಾಗಿದೆ ಎಂದಿದ್ದಾರೆ.

ಈ ದಿಸೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ. 163 ರ ಉಪ ಕಲಂ (1) ಮತ್ತು (3) ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬಿ.ದಯಾನಂದ, ಭಾ.ಪೊ.ಸೇ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ, ನಾನು ಬೆಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ CL-4 & CL6A ಪರವಾನಗಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಬಾರ್ & ರೆಸ್ಟೋರೆಂಟ್‌ಗಳು, ವೈನ್ ಶಾಪ್‌ಗಳು, ಪಬ್‌ಗಳು, ಎಂ.ಎಸ್.ಐ.ಎಲ್. ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ. ( ರೆಸ್ಟೋರೆಂಟ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ಏನಾಯಿತಿ ನೀಡಲಾಗಿರುತ್ತದೆ) ಎಂದು ಹೇಳಿದ್ದಾರೆ.

ಈ ಏರಿಯಾಗಳಲ್ಲಿ ನಾಳೆ, ನಾಡಿದ್ದು ಎಣ್ಣೆ ಸಿಗಲ್ಲ

  • ಬೆಂಗಳೂರು ಉತ್ತರ ವಿಭಾಗ – ಜೆಸಿ ನಗರ, ಆರ್ ಟಿ ನಗರ, ಹೆಬ್ಬಾಳ, ಸಂಜಯನಗರ ವ್ಯಾಪ್ತಿಯಲ್ಲಿ ದಿನಾಂಕ 14-09-2024ರಂದು ಬೆಳಿಗ್ಗೆ 6 ರಿಂದ ದಿನಾಂಕ 15-09-2024ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
  • ಬೆಂಗಳೂರು ಪೂರ್ವ ವಿಭಾಗ – ಡಿಜೆ ಹಳ್ಳಿ, ಭಾರತಿ ನಗರ, ಪುಲಕೇಶಿನಗರ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ ಹಾಗೂ ಹಲಸೂರು ವ್ಯಾಪ್ತಿಯಲ್ಲಿ ದಿನಾಂಕ 15-09-2024ರಂದು ಬೆಳಿಗ್ಗೆ 6 ರಿಂದ ದಿನಾಂಕ 16-09-24ರ ಬೆಳಿಗ್ಗೆ 6 ಗಂಟೆಯವರೆಗೆ ಎಣ್ಣೆ ಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ.
  • ಬೆಂಗಳೂರು ಈಶಾನ್ಯ ವಿಭಾಗ – ಯಲಹಂಕ ಉಪನಗರ, ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ದಿನಾಂಕ 15-09-2024ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 16-09-2024ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BIG NEWS: ‘CM ಸಿದ್ಧರಾಮಯ್ಯ’ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ‘ಖಾಸಗಿ ದೂರು’ ದಾಖಲು | CM Siddaramaiah

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike

Share. Facebook Twitter LinkedIn WhatsApp Email

Related Posts

ಧಮ್ಕಿ ಹಾಕಿದ ರಾಜೀವ್ ಗೌಡ ಅರೆಸ್ಟ್: ಇದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಫಸ್ಟ್ ರಿಯಾಕ್ಷನ್

26/01/2026 9:10 PM1 Min Read

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

26/01/2026 8:51 PM1 Min Read

BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು

26/01/2026 8:45 PM1 Min Read
Recent News

‘ಭಜನ್ ಕ್ಲಬ್ಬಿಂಗ್’ ಹೊಗಳಿದ ಪ್ರಧಾನಿ ಮೋದಿ ; ‘ಜಾಗತಿಕ ಸಂಗೀತ ಕಚೇರಿಗಳಿಗಿಂತ ಕಮ್ಮಿಯಿಲ್ಲ’ ಎಂದು ಶ್ಲಾಘನೆ!

26/01/2026 10:11 PM

BREAKING: ಅಮೆರಿಕದಲ್ಲಿ ಹಿಮಬಿರುಗಾಳಿಗೆ ಸಿಲುಕಿ ಜೆಟ್ ಪಥನ: 7 ಜನರು ಸಾವು, ಓರ್ವನಿಗೆ ಗಾಯ | Jet crashes in US

26/01/2026 10:08 PM

BREAKING : ‘ICC’ ಆಹ್ವಾನಕ್ಕೆ ‘ಸ್ಕಾಟ್ಲೆಂಡ್’ ಫುಲ್ ಖುಷ್ ; ‘ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್!

26/01/2026 9:43 PM

ಅಕ್ಕಿ, ಬೇಳೆಯಲ್ಲಿ ಹುಳುಗಳಿವ್ಯಾ? ಒಂದು ಪೈಸೆಯೂ ಖರ್ಚು ಮಾಡದೆ ಈ ಸಿಂಪಲ್ ಟಿಪ್ಸ್’ನಿಂದ ತೊಡೆದುಹಾಕಿ!

26/01/2026 9:33 PM
State News
KARNATAKA

ಧಮ್ಕಿ ಹಾಕಿದ ರಾಜೀವ್ ಗೌಡ ಅರೆಸ್ಟ್: ಇದು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಫಸ್ಟ್ ರಿಯಾಕ್ಷನ್

By kannadanewsnow0926/01/2026 9:10 PM KARNATAKA 1 Min Read

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದಂತ ರಾಜೀವ್ ಗೌಡನನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದರು. ಈ ಬಂಧನದ ಬಳಿಕ…

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

26/01/2026 8:51 PM

BREAKING: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಮೇಲೆ ಕಲ್ಲೆಸೆತ: ಬಸವರಾಜ ಮಡಿವಾಳರ ವಿರುದ್ಧ ಕೇಸ್ ದಾಖಲು

26/01/2026 8:45 PM

ನಾಳೆ ರಾಜ್ಯಪಾಲರಿಗೆ ಮಾಡಿದ ಅವಮಾನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

26/01/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.