ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ನಿಷೇಧಿಸಿದ್ದಾರೆ.
ಅರಮನೆ ರಸ್ತೆ, ಎಂ.ವಿ.ಜಯರಾಂ ರಸ್ತೆ, ವಸಂತನಗರ ರಸ್ತೆ, ಜಯಮಹಲ್ ರಸ್ತೆ, ಸಿ.ವಿ.ರಾಮನ್ ರಸ್ತೆ, ಬಳ್ಳಾರಿ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿದುರ್ಗ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆ, ಸಿ.ವಿ.ರಾಮನ್ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಮಧ್ಯಾಹ್ನ 12 ರಿಂದ ರಾತ್ರಿ 9 ರವರೆಗೆ ಭಾರಿ ಸರಕು ವಾಹನಗಳು ನಗರವನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಸಿಎಂಟಿಐ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಬಿಎಚ್ಇಎಲ್ ಅಂಡರ್ಪಾಸ್, ಬಸವೇಶ್ವರ ವೃತ್ತ, ಹಳೆ ಉದಯ ಟಿವಿ ಜಂಕ್ಷನ್, ಹಜ್ ಕ್ಯಾಂಪ್, ನಂದಿದುರ್ಗ ರಸ್ತೆ, ಯಶವಂತಪುರದ ಗೋವರ್ಧನ್ ಚಿತ್ರಮಂದಿರದಲ್ಲಿ ಮಾರ್ಗ ಬದಲಿಸಲಾಗುವುದು.