Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

11/03/2026 8:58 AM

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

11/03/2026 8:55 AM

ಯುದ್ಧದ ನಡುವೆಯೂ ಭಾರತದ ಇಂಧನ ಕೋಟೆ ಭದ್ರ: 40 ದೇಶಗಳಿಂದ ತೈಲ ಆಮದು; ಇರಾನ್ ಸಂಘರ್ಷಕ್ಕೆ ಬಗ್ಗದ ಮೋದಿ ಸರ್ಕಾರ!

11/03/2026 8:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಳ್ಳತನ ಸೇರಿದಂತೆ 42 ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು!
KARNATAKA

ಕಳ್ಳತನ ಸೇರಿದಂತೆ 42 ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು!

By kannadanewsnow0723/04/2024 4:10 PM

ಬೆಂಗಳೂರು:42 ಸುಲಿಗೆ ಹಾಗೂ ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ಶೀಟರ್‌ನ ಬಂಧನ ಮಾಡಲಾಗಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ವಿರುದ್ಧ ನ್ಯಾಯಾಲಯವು ಹೊರಡಿಸಿರುವ ವಾರೆಂಟ್ ಮತ್ತು ಮೊಕ್ಷಮೇಷನ್ ವ್ಯಕ್ತಿಗಳ ವಿರುದ್ಧ ಕಾರ್ಯ ಪ್ರವೃತ್ತರಾದ ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಓರ್ವ ಬಾಣಸವಾಡಿಯ ರೌಡಿ ಶೀಟರ್‌ನ ಕುರಿತು ಮಾಹಿತಿಯನ್ನು ಸಂಗ್ರಹಿಸಿರುತ್ತಾರೆ.ಬಾಣಸವಾಡಿ ಠಾಣೆಯ ರೌಡಿಶೀಟರ್ ‘ಅಜೀಜ್ ಆಸೀಫ್’ ಬಂಧಿತ ಆರೋಪಿಯಾಗಿದ್ದಾನೆ.

ಈ ರೌಡಿ ಟರ್‌ನ ವಿರುದ್ದ 2015 ರಿಂದ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿರುತ್ತವೆ. ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 07 ಪಕರಣಗಳು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 02 ಪ್ರಕರಣಗಳು ದಾಖಲಾಗಿರುತ್ತದೆ. ಗೋವಾ ರಾಜ್ಯದಲ್ಲಿಯೂ ಸಹ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಬೇಕಾಗಿರುತ್ತದೆ.

ಸಿ.ಸಿ.ಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ದಿನಾಂಕ 21/04/2024 ರಂದು ಮದ್ಯಾಹ್ನ 02-00 ಗಂಟೆ ಸಮಯದಲ್ಲಿ ಭಾರತಿನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಆರ್ಮ್‌ ಸ್ಟ್ರಾಂಗ್ ರಸ್ತೆಯಲ್ಲಿ ಈ ರೌಡಿ ವ್ಯಕ್ತಿಯನ್ನು ಬೈಕ್ ಸಮೇತ ವಶಕ್ಕೆ ಪಡೆದುಕೊಂಡಿರುತ್ತಾರೆ. ಆತನನ್ನು ಶೋಧನೆಗೊಳಪಡಿಸಿದಾಗ ಆತನ ಬಳಿ ಒಂದು ಆಪಲ್ ಐಫೋನ ಒಂದು ಸ್ಯಾಮ್‌ಸಾಂಗ್ ಮೊಬೈಲ್ ಫೋನ್ ಸೇರಿದಂತೆ ವಿವಿಧ ಕಂಪನಿಯ ಒಟ್ಟು 12 ಮೊಬೈಲ್ ಫೋನ್‌ಗಳು, 4 ಚಿನ್ನದ ಕಾಸಿನ ತಾಳಿಗಳು 1 ತಮಿಳು ಸಮಾಜ ಮಾಂಗಲ್ಯ 2 ಚಿನ್ನದ ಗುಂಡುಗಳು, ಕೊಳವೆ ಆಕಾರದ ಗುಂಡುಗಳು ಪತ್ತೆಯಾಗಿರುತ್ತವೆ. ಇವುಗಳನ್ನು ಮುಂದಿನ ಕ್ರಮಕ್ಕಾಗಿ ವರದಿಯೊಂದಿಗೆ ಭಾರತೀನಗರ ಪೊಲೀಸ್ ಠಾಣೆಯ ವರಕ್ಕೆ ನೀಡಿರುತ್ತದೆ.

ಈ ರೌಡಿ ವ್ಯಕ್ತಿಯನ್ನು ಸುದೀರ್ಘವಾಗಿ ವಿಚಾರ ಮಾಡಲಾಗಿ, ಈವನು  ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಮತ್ತು ಮನಃ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದತಿಳಿದುಬಂದಿರುತ್ತದೆ ಹಾಗೂ ಈತನ ವಿರುದ್ಧ ಬಾಕಿ ಇರುವ ಎನ್.ಬಿ.ಡಬ್ಲ್ಯೂ ಪ್ರಕರಣಗಳಲ್ಲಿ ಕಲಂ, 229 (ಎ) ಐಪಿಸಿಅಡಿಯಲ್ಲಿ ಕ್ರಮ ಕೈಗೊಳ್ಳಲು ಬಾಣಸವಾಡಿ ಪೊಲೀಸ್ ಠಾಣೆಗೆ ವರದಿಯನ್ನು ಸಲ್ಲಿಸಲಾಗಿರುತ್ತದೆ.

ಈ ರೌಡಿ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪಕರಣಗಳಲ್ಲಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ-01 ಕಳುವು ಪಕರಣ, ಯಲಹಂಕ ಪೊಲೀಸ್ ಠಾಣೆಯಲ್ಲಿ 01 ಕಳುವು ಪ್ರಕರಣ ಮತ್ತು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ-02 ರಾಬರಿ ಪಕರಣಗಳು ವಸ್ತುತ ತನಿಖಾ ಹಂತದಲ್ಲಿರುತ್ತದೆ. ತುಮಕೂರು ಜಿಲ್ಲೆಯ ತಿಲ‌ಕ್‌ ನಗರ ಪೊಲೀಸ್ ಠಾಣೆಯಲ್ಲಿ-01 ದ್ವಿ-ಚಕ್ರ ವಾಹನ ಕಳುವು ಪ್ರಕರಣ ಮತ್ತು ತುಮಕೂರು ಟೌನ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ-02 ರಾಬರಿ ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿರುತ್ತದೆ.

ಈತನ ವಿರುದ್ಧ ಬೆಂಗಳೂರು ನಗರದ ವಿವಿಧ ಘನ ನ್ಯಾಯಾಲಯಗಳಿಂದ 19 ಪಕರಣಗಳಲ್ಲಿ ಹಾಗೂ ತುಮಕೂರು ಜಿಲ್ಲೆಯ 05 ಪ್ರಕರಣಗಳಲ್ಲಿ ಘನ ನ್ಯಾಯಾಲಯವು ಎನ್.ಬಿ.ಡಬ್ಲೂ ಹೊರಡಿಸಿರುತ್ತದೆ. ಬೆಂಗಳೂರು ನಗರ, ಕೇಂದ್ರ ಅಪರಾಧ ವಿಭಾಗದ ಮಹಿಳಾ ಸುರಕ್ಷಣಾ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Bengaluru: The CCB police have arrested an absconding accused in 42 cases including theft.
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

11/03/2026 8:58 AM1 Min Read

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

11/03/2026 8:55 AM2 Mins Read

BREAKING : ಗ್ಯಾಸ್ ಸಿಲಿಂಡರ್ ಅಭಾವ : ಬೆಂಗಳೂರಿನ ಪ್ರಸಿದ್ದ ಬನಶಂಕರಿ ದೇಗುಲದಲ್ಲಿ ಅನ್ನಪ್ರಸಾದ ವಿತರಣೆ ಬಂದ್ !

11/03/2026 8:44 AM1 Min Read
Recent News

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

11/03/2026 8:58 AM

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

11/03/2026 8:55 AM

ಯುದ್ಧದ ನಡುವೆಯೂ ಭಾರತದ ಇಂಧನ ಕೋಟೆ ಭದ್ರ: 40 ದೇಶಗಳಿಂದ ತೈಲ ಆಮದು; ಇರಾನ್ ಸಂಘರ್ಷಕ್ಕೆ ಬಗ್ಗದ ಮೋದಿ ಸರ್ಕಾರ!

11/03/2026 8:45 AM

BREAKING : ಗ್ಯಾಸ್ ಸಿಲಿಂಡರ್ ಅಭಾವ : ಬೆಂಗಳೂರಿನ ಪ್ರಸಿದ್ದ ಬನಶಂಕರಿ ದೇಗುಲದಲ್ಲಿ ಅನ್ನಪ್ರಸಾದ ವಿತರಣೆ ಬಂದ್ !

11/03/2026 8:44 AM
State News
KARNATAKA

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

By kannadanewsnow5711/03/2026 8:58 AM KARNATAKA 1 Min Read

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ವೇಷದಲ್ಲಿ ಬಂದು ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ…

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

11/03/2026 8:55 AM

BREAKING : ಗ್ಯಾಸ್ ಸಿಲಿಂಡರ್ ಅಭಾವ : ಬೆಂಗಳೂರಿನ ಪ್ರಸಿದ್ದ ಬನಶಂಕರಿ ದೇಗುಲದಲ್ಲಿ ಅನ್ನಪ್ರಸಾದ ವಿತರಣೆ ಬಂದ್ !

11/03/2026 8:44 AM

ALERT : ಎದ್ದು ನಿಂತ ತಕ್ಷಣ ಕಣ್ಣು ಕತ್ತಲೆಯಾಗಿ ತಲೆ ಸುತ್ತುತ್ತಿದೆಯೇ? ಎಚ್ಚರ, ಇದು ಸಣ್ಣ ಸಮಸ್ಯೆಯಲ್ಲ !

11/03/2026 8:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.