Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

25/05/2025 5:40 PM

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್
KARNATAKA

ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್

By kannadanewsnow0924/08/2024 5:21 PM

ಬೆಂಗಳೂರು: ನಗರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆ ಅನುಮತಿ ಪತ್ರವನ್ನು ಇಲಾಖೆಯಿಂದ ಏಕಗವಾಕ್ಷಿ ಪದ್ದತಿಯಡಿ ಪಡೆಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ 63 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ವವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೆ ತೆರದು, ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ ಬಳಿಕ ಅಧಿಕಾರಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಅನುಮತಿ ಕೋರಿ ಬರುವವರಿಗೆ ಕಾಲಮಿತಿಯೊಳಗಾಗಿ ಅನುಮತಿ ಸಿಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.

ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಸಂಪೂರ್ಣ ಸ್ವಚ್ಚತೆ ಮಾಡಬೇಕು, ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡುವುದರ ಜೊತೆಗೆ ಬ್ಯಾರಿಕೇಡಿಂಗ್, ಸಿಸಿ ಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಬೇಕೆಂದು ಸೂಚಿಸಿದರು.

ಬೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ತಂತಿಗಳ ಪರಿಶೀಲನೆ

ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಬೆಸ್ಕಾಂನ ಅಧಿಕಾರಿ/ಸಿಬ್ಬಂದಿಗಳು ಮೆರವಣಿಗೆ ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳನ್ನು ಪರಿಶೀಲಿಸಿ, ಎಲ್ಲಿಯೂ ಯಾವುದೇ ರೀತಿಯ ಅನಾಹುತಗಳಾಗಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು.

ವಿದ್ಯುತ್ ದೀಪ ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚಿ

ರಸ್ತೆ ಬದಿಯ ವಿದ್ಯುತ್ ಕಂಬಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಯಾಗಿರುವಂತೆ ಪಾಲಿಕೆ ವಿದ್ಯುತ್ ವಿಭಾಗದ ಅಧಿಕಾರಿಗಳು ನೋಡಿಕೊಳ್ಳಬೇಕು. ಮೆರವಣಿಗೆ ಸಾಗುವ ರಸ್ತೆಗಳಲ್ಲಿ ರಸ್ತೆ ಹಾಳಾಗಿದ್ದಲ್ಲಿ ಅಥವಾ ರಸ್ತೆ ಗುಂಡಿಗಳು ಬಿದ್ದಿದ್ದಲ್ಲಿ ಸ್ಥಳ ಪರಿಶೀಲಿಸಿ ಕೂಡಲೆ ಸರಿಪಡಿಸುವ ಕೆಲಸ ಮಾಡಬೇಕೆಂದು ಸೂಚಿಸಿದರು.

ಕಲ್ಯಾಣಿಗಳ ಬಳಿ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳ ವ್ಯವಸ್ಥೆ

ಗಣೇಶ ವಿಸರ್ಜನೆ ಮಾಡುವ ಕಲ್ಯಾಣಿಗಳ ಬಳಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಏನಾದರು ಅವಘಡಗಳು ನಡೆದರೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸಲುವಾಗಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ‌ ವಾಹನಗಳ ವ್ಯವಸ್ಥೆ ಮಾಡಿಕೊಂಡಿರಲು ಸೂಚಿಸಲಾಯಿತು.

ಡ್ರೆಸ್ ಕೋಡ್ ವ್ಯವಸ್ಥೆ ಹಾಗೂ ಹೋಮ್ ಗಾರ್ಡ್ಗಳ ನಿಯೋಜನೆ

ಕೆರೆಗಳ ಬಳಿಯಿರುವ ಕಲ್ಯಾಣಿಗಳ ಬಳಿ ಗಣೇಶ ವಿಸರ್ಜನೆ ಮಾಡುವ ವೇಳೆ ಇಲಾಖಾ ವಾರು ನಿಯೋಜನೆ ಮಾಡಿರುವ ಸಿಬ್ಬಂದಿಗೆ ಡ್ರೆಸ್ ಕೋಡ್ ನೀಡಬೇಕು. ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಪೊಲೀಸ್ ಇಲಾಖೆಯಿಂದ ಹೋಮ್ ಗಾರ್ಡ್ಗಳನ್ನು ನಿಯೋಜನೆ ಮಾಡಲು ಸೂಚಿಸಲಾಯಿತು.

ಅವಶ್ಯಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಿ

ಪಾಲಿಕೆ ವ್ಯಾಪ್ತಿಯಲ್ಲಿ ಮನೆಗಳಲ್ಲಿ ಪ್ರತಿಷ್ಠಾಪನೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಆಯಾ ವಲಯಗಳ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಿದರು.

ಪಿಓಪಿ ತಯಾರಿಕಾ ಘಟಕಗಳ ಪರಿಶೀಲನೆ ನಡೆಸಿ

ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಪಿಓಪಿ (ಬಣ್ಣದ ಗಣೇಶ)ಗಣೇಶ ಮೂರ್ತಿಗಳ ತಯಾರಿಕೆಯನ್ನು ನಿಷೇಧಿಸಲಾಗಿದ್ದು, ಗಣೇಶ ಮೂರ್ತಿ ತಯಾರಿಕಾ ಘಟಕಗಳಿಗೆ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದಲ್ಲಿ ಅವುಗಳನ್ನು ಸೀಜ್ ಮಾಡಿ ಅಂತಹವರ ಮೇಲೆ ದಂಡ ವಿಧಿಸುವುದರ ಜೊತೆಗೆ ಕಾನೂನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಯಿತು.

BIG UPDATE: ಬೆಂಗಳೂರಲ್ಲಿ ‘ನಮ್ಮ ಮೆಟ್ರೋ ಹಸಿರು ಮಾರ್ಗ’ದಲ್ಲಿನ ತಾಂತ್ರಿಕ ಸಮಸ್ಯೆ ಕ್ಲಿಯರ್: ಮತ್ತೆ ರೈಲು ಸಂಚಾರ ಪುನರಾರಂಭ | Namma Metro

SSC ಸಿಜಿಎಲ್ 2024 ಶ್ರೇಣಿ-1ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ | SSC CGL 2024 Tier 1 admit card

BREAKING : ಹುಬ್ಬಳ್ಳಿ : ಗಿರೀಶ್ ನಿಂದ ಅಂಜಲಿ ದೂರವಾಗಿದಕ್ಕೆ ಹತ್ಯೆ :ಕೋರ್ಟಿಗೆ ಸಲ್ಲಿಸಿದ ‘ಚಾರ್ಜ್ ಶೀಟ್’ ನಲ್ಲಿ ಉಲ್ಲೇಖ!

Share. Facebook Twitter LinkedIn WhatsApp Email

Related Posts

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

25/05/2025 5:40 PM1 Min Read

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM1 Min Read

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM2 Mins Read
Recent News

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

25/05/2025 5:40 PM

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM

Wtch Video: ಹಿಮಾಚಲ ಪ್ರದೇಶದ ಮೇಘ ಸ್ಫೋಟ: ಪ್ರವಾಹದಲ್ಲಿ ಕೊಚ್ಚಿ ಹೋದ 5-6 ವಾಹನಗಳು | Himachal Pradesh Cloud Burst

25/05/2025 5:11 PM
State News
KARNATAKA

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

By kannadanewsnow0925/05/2025 5:40 PM KARNATAKA 1 Min Read

ಬೆಂಗಳೂರು: ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ ಕಾರಣದಿಂದ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್…

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM

ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ | Rain Alert

25/05/2025 4:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.