ಬೆಂಗಳೂರು : ಬೆಂಗಳೂರಲ್ಲಿ ಇಂದಿನಿಂದ ಮೂರು ದಿನ ಕಾವೇರಿ ನೀರು ಸರಬರಾಜು ಬಂದ್ ಆಗಲಿದೆ. ಸೆಪ್ಟೆಂಬರ್ 15 ರ ಇಂದಿನಿಂದ ಸೆ. 17ರವರೆಗೆ ಕಾವೇರಿ ನೀರು ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ. ಸುಮಾರು 68 ಗಂಟೆಗಳ ಕಾಲ ನೀರು ಸರಬರಾಜು ಬಂದ್ ಮಾಡಲಾಗುತ್ತಿದೆ.
ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಹಾಗೂ 17ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ.
ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳಲ್ಲಿ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಹಾಗೂ 17ರಂದು ಸ್ಥಗಿತಗೊಳಿಸಲಾಗುತ್ತದೆ.
ಕಾವೇರಿ 5ನೇ ಹಂತ ಸೆಪ್ಟೆಂಬರ್.15ರಿಂದ ಬೆಳಿಗ್ಗೆ 1 ರಿಂದ ಸೆಪ್ಟೆಂಬರ್.17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳ ಕಾಲ ಕಾವೇರಿ 1, 2, 3, 4,ರಲ್ಲಿ ಸೆಪ್ಟೆಂಬರ್ 16ರ ಬೆಳಿಗ್ಗೆ 6ರಿಂದ ಸೆಪ್ಟೆಂಬರ್ 17ರ ಬೆಳಿಗ್ಗೆ 6ರವರೆಗೆ ಒಟ್ಟು 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ. ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ.
ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲ ವ್ಯತ್ಯಯ
ಕಾವೇರಿ 5ನೇ ಹಂತ – ಸೆಪ್ಟೆಂಬರ್ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು.
ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.
3 ದಿನ ಕಾವೇರಿ ನೀರು ವ್ಯತ್ಯಯದ ಹಿನ್ನೆಲೆಯಲ್ಲಿ ನೀರನ್ನು ಸಂಗ್ರಹಿಸಲು ನಾಗರಿಕರಿಗೆ ಸೂಚನೆ ನೀಡಲಾಗಿದ್ದು, ನಿವಾಸಿಗಳು ಮುಂಚಿತವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ.