Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಡಿ.27, 28ರಂದು KPCL 622 ಹುದ್ದೆಗೆ ಮರು ಪರೀಕ್ಷೆ

26/12/2025 6:53 PM

BREAKING : ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ ; 8 ಮಂದಿ ದುರ್ಮರಣ, ಹಲವರಿಗೆ ಗಾಯ

26/12/2025 6:53 PM

ಆಪರೇಷನ್ ಸಿಂಧೂರ್ ಸಮಯದಲ್ಲಿ ಸೈನಿಕರಿಗೆ ಚಹಾ, ಲಸ್ಸಿ ವಿತರಿಸಿದ 10 ವರ್ಷದ ಬಾಲಕನಿಗೆ ‘ಬಾಲ ಪುರಸ್ಕಾರ’!

26/12/2025 6:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಕಾಲೋನಿ ಜೀವವೈವಿಧ್ಯ ತಾಣ: ಸಚಿವ ಈಶ್ವರ್ ಖಂಡ್ರೆ ಘೋಷಣೆ
KARNATAKA

ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಕಾಲೋನಿ ಜೀವವೈವಿಧ್ಯ ತಾಣ: ಸಚಿವ ಈಶ್ವರ್ ಖಂಡ್ರೆ ಘೋಷಣೆ

By kannadanewsnow0910/09/2025 7:24 PM

ಬೆಂಗಳೂರು : ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜೀವ ವೈವಿಧ್ಯ ಮಂಡಳಿಯ ಸಭೆಯಲ್ಲಿ ಇತಿಹಾಸ ಪ್ರಸಿದ್ಧ ಮತ್ತು ಸಸ್ಯ ಶ್ರೀಮಂತಿಕೆಯಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ ಸರ್ವೆ ನಂ. 1028 ಮತ್ತು 1047 ರಲ್ಲಿರುವ 8.61 ಎಕರೆ ಪ್ರದೇಶವನ್ನು ಜೈವಿಕ ವೈವಿಧ್ಯ ಕಾಯ್ದೆ, 2002ರ ಸೆಕ್ಷನ್ 37ರ ಅಡಿಯಲ್ಲಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸುವ ನಿರ್ಣಯ ಕೈಗೊಂಡಿದ್ದಾಗಿ ತಿಳಿಸಿದರು.

ರಾಜಧಾನಿಯ ಹೃದಯ ಭಾಗದಲ್ಲಿರುವ 34,843 ಚದರಡಿಯ ಪ್ರದೇಶ ಸಸ್ಯ ಸಂಕುಲ, ಪಕ್ಷಿ ಸಂಕುಲ ಮತ್ತು ಕೀಟ ಸಂಕುಲದ ತಾಣವಷ್ಟೇ ಅಲ್ಲದೆ ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣವಾಗಿದೆ ಎಂದೂ ಅವರು ಹೇಳಿದರು.

50-60 ವರ್ಷಗಳಿಂದ ಬೆಳೆದ ಬೃಹತ್ ಮರಗಳಿರುವ ಈ ಸುಂದರ ಪ್ರದೇಶವನ್ನು ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ನಿಧಿ ಸಂಗ್ರಹಿಸುವ ಉದ್ದೇಶದಿಂದ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರ ಖಾಸಗಿ ಸಂಸ್ಥೆಯೊಂದಕ್ಕೆ 60 ವರ್ಷಗಳ ದೀರ್ಘಾವಧಿಗೆ ಗುತ್ತಿಗೆ ನೀಡಿತ್ತು. ಗುತ್ತಿಗೆ ಪಡೆದ ಸಂಸ್ಥೆ ಇಲ್ಲಿರುವ 368 ಮರಗಳನ್ನು ಕಡಿಯಲು ಅನುಮತಿ ಕೋರಿತ್ತು. ಮರಗಳ ಹನನಕ್ಕೆ ಸ್ಥಳೀಯರು ಸೇರಿದಂತೆ ಪರಿಸರ ಪ್ರೇಮಿಗಳು, ವೃಕ್ಷ ಪ್ರೇಮಿಗಳು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು ಎಂದು ತಿಳಿಸಿದರು.

ಸಾರ್ವಜನಿಕರ ಮನವಿ ಹಿನ್ನೆಲೆಯಲ್ಲಿ ಕಳೆದ ಜೂನ್ 20ರಂದು ಸ್ಥಳಕ್ಕೆ ಖುದ್ದು ಭೇಟಿ ನೀಡಿದ್ದ ತಮಗೆ, ಈ ಪ್ರದೇಶ ಐತಿಹಾಸಿಕವಾಗಿಯೂ ಮಹತ್ವ ಪಡೆದಿದೆ. 1920ರಲ್ಲಿ ಮಹಾತ್ಮಾ ಗಾಂಧೀ ಅವರು ಇಲ್ಲಿ ಸ್ವಾತಂತ್ರ್ಯ ಚಳವಳಿಗಾರರೊಂದಿಗೆ ಸಂವಾದ ನಡೆಸಿದ್ದರು ಎಂದು ತಿಳಿಸಲಾಯಿತು. ವೃಕ್ಷ ಸಮೃದ್ಧವಾದ ಈ ಪ್ರದೇಶ ಇಂಗಾಲದ ಡೈ ಆಕ್ಸೈಡ್ ನಿಯಂತ್ರಿಸಿ, ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇದರ ಸಂರಕ್ಷಣೆಗೆ ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸುವ ಸಂಬಂಧ ಸಲಹೆ, ಸೂಚನೆ ಮತ್ತು ಆಕ್ಷೇಪಣೆ ಸಲ್ಲಿಸುವಂತೆ ಸಾರ್ವಜನಿಕರನ್ನು ಕೋರಲಾಗಿತ್ತು ಎಂದರು.

ಸುಮಾರು 15 ಸಾವಿರ ಜನರಿಂದ ವೃಕ್ಷ ರಕ್ಷಣೆಗೆ ಮನವಿ:

ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿರುವ ಈ ಮರ ಕಡಿದು ವಾಣಿಜ್ಯ ಚಟುವಟಿಕೆ ನಡೆಸದಂತೆ ನಡೆದ ಆನ್ ಲೈನ್ ಸಹಿ ಸಂಗ್ರಹ ಅಭಿಯಾನದಲ್ಲಿ 3081 ಜನರು ಬೆಂಬಲ ನೀಡಿದ್ದರು, 368 ವೃಕ್ಷಗಳ ಹನನ ಮಾಡದಂತೆ ನಡೆದ ಮತ್ತೊಂದು ಡಿಜಿಟಲ್ ಅಭಿಯಾನದಲ್ಲಿ 10670 ಜನರು ಈ ಪ್ರದೇಶದ ಸಂರಕ್ಷಣೆ ಮಾಡುವಂತೆ ಮತ್ತು ಮರ ಕಡಿಯದಂತೆ ಸೂಚಿಸಿದ್ದರು.

ಇದರ ಜೊತೆಗೆ 972 ಪರಿಸರ ಪ್ರೇಮಿಗಳು, ಸಾರ್ವಜನಿಕರು ಇ-ಮೇಲ್ ಮೂಲಕ 368 ಮರಗಳ ಸಂರಕ್ಷಣೆಗೆ ಮತ್ತು ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದರು. ಇದಲ್ಲದೆ ನೂರಾರು ಜನರ ಸಹಿ ಇರುವ ಹಲವು ಮನವಿಗಳೂ ಬಂದಿದ್ದವು. ಒಟ್ಟಾರೆ 15 ಸಾವಿರಕ್ಕೂ ಹೆಚ್ಚು ಜನರು ಮರ ಕಡಿಯದಂತೆ ಮತ್ತು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಸಂರಕ್ಷಿಸುವಂತೆ ಮತ್ತು 368 ಮರ ಕಡಿಯದಂತೆ ಮನವಿ ಮಾಡಿದ್ದರು. ಇಲ್ಲಿ ಸಮೀಕ್ಷೆ ನಡೆಸಿದಾಗ 371 ಮರಗಳಿರುವುದು ದೃಢಪಟ್ಟಿತು ಎಂದರು.

ಕಂಟೋನ್ಮೆಂಟ್ ಕಾಲೋನಿಯ ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವ ಸರ್ಕಾರದ ನಿರ್ಧಾರದ ವಿರುದ್ಧ ಕೇವಲ 2 ಮನವಿಗಳು ಮಾತ್ರ ಬಂದಿದ್ದವು ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ಸಾರ್ವಜನಿಕರ ಕಳಕಳಿ, ಅಭಿಪ್ರಾಯಕ್ಕೆ ಮನ್ನಣೆ ನೀಡಿ, ಈ ತಾಣದ ಸೌಂದರ್ಯ, ಐತಿಹಾಸಿಕ ಮಹತ್ವ, ವೃಕ್ಷ ಸಮೃದ್ಧತೆ ಮತ್ತು ಜೀವ ವೈವಿಧ್ಯ ಸಂರಕ್ಷಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತು ವಲಸೆ ಹಕ್ಕಿಗಳೂ ಸೇರಿದಂತೆ ನೂರಾರು ಪಕ್ಷಿಗಳ ಆವಾಸಸ್ಥಾನ ಮತ್ತು ಸಂತಾನೋತ್ಪತ್ತಿಯ ತಾಣವಾದ ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸಲು ಇಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾಗಿ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರೂ ಆದ ಸಚಿವ ಈಶ್ವರ ಖಂಡ್ರೆ ವಿವರಿಸಿದರು.

ಬೆಂಗಳೂರು ನಗರದ ವಾಯು ಗುಣಮಟ್ಟದಲ್ಲಿ ಈಗಾಗಲೇ ಕುಸಿತ ಕಂಡು ಬಂದಿದೆ. ಹಸಿರು ಹೊದಿಕೆ ಕ್ಷೀಣಿಸಿದೆ. ಇಡೀ ವಿಶ್ವವೇ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ಎದುರಿಸುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಇಲ್ಲಿರುವ 371 ಮರಗಳನ್ನು ಸಂರಕ್ಷಿಸುವುದು ಅತ್ಯಗತ್ಯವಾಗಿದೆ. ಹೀಗಾಗಿ ಈ ನಿರ್ಧಾರ ಐತಿಹಾಸಿಕವಾಗಿದೆ ಎಂದು ತಿಳಿಸಿದರು.

ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

BREAKING: ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್‌ ನೇಮಕ

ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ

Share. Facebook Twitter LinkedIn WhatsApp Email

Related Posts

BREAKING: ಡಿ.27, 28ರಂದು KPCL 622 ಹುದ್ದೆಗೆ ಮರು ಪರೀಕ್ಷೆ

26/12/2025 6:53 PM1 Min Read

ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

26/12/2025 5:24 PM2 Mins Read

ಬೆಂಗಳೂರು ಜನತೆ ಗಮನಕ್ಕೆ: ಡಿ.27, 28, 29ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

26/12/2025 5:18 PM2 Mins Read
Recent News

BREAKING: ಡಿ.27, 28ರಂದು KPCL 622 ಹುದ್ದೆಗೆ ಮರು ಪರೀಕ್ಷೆ

26/12/2025 6:53 PM

BREAKING : ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ ; 8 ಮಂದಿ ದುರ್ಮರಣ, ಹಲವರಿಗೆ ಗಾಯ

26/12/2025 6:53 PM

ಆಪರೇಷನ್ ಸಿಂಧೂರ್ ಸಮಯದಲ್ಲಿ ಸೈನಿಕರಿಗೆ ಚಹಾ, ಲಸ್ಸಿ ವಿತರಿಸಿದ 10 ವರ್ಷದ ಬಾಲಕನಿಗೆ ‘ಬಾಲ ಪುರಸ್ಕಾರ’!

26/12/2025 6:27 PM

Selling hair : ನೀವು ನಿಮ್ಮ ಕೂದಲು ಮಾರಾಟ ಮಾಡಿ ಪಾತ್ರೆ ಖರೀದಿಸ್ತಿದ್ದೀರಾ.? ಹಾಗಿದ್ರೆ, ಈ ವಿಷ್ಯ ತಿಳಿದಿಲ್ಲದಿರ್ಬೋದು!

26/12/2025 5:38 PM
State News
KARNATAKA

BREAKING: ಡಿ.27, 28ರಂದು KPCL 622 ಹುದ್ದೆಗೆ ಮರು ಪರೀಕ್ಷೆ

By kannadanewsnow0926/12/2025 6:53 PM KARNATAKA 1 Min Read

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು…

ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

26/12/2025 5:24 PM

ಬೆಂಗಳೂರು ಜನತೆ ಗಮನಕ್ಕೆ: ಡಿ.27, 28, 29ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

26/12/2025 5:18 PM

BREAKING : ಮೈಸೂರಲ್ಲಿ ಸ್ಪೋಟ ಕೇಸ್ : ಚಿಕಿತ್ಸೆ ಫಲಿಸದೆ ಹೂವಿನ ವ್ಯಾಪಾರಿ ಮಂಜುಳಾ ಸಾವು, ಸಾವಿನ ಸಂಖ್ಯೆ 2ಕ್ಕೆ ಏರಿಕೆ!

26/12/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.