ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಸಿಸಿಬಿಯಿಂದ ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿರೋದಾಗಿ ತಿಳಿದು ಬಂದಿದೆ.

ಸಿಸಿಬಿ ಪೊಲೀಸರಿಂದ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಶಂಕಿತರನ್ನು ಕರೆತಂದು ತೀವ್ರ ವಿಚಾರಣೆಯನ್ನು ನಡೆಸಲಾಗುತ್ತಿದೆ. ಈ ವಿಚಾರಣೆಯ ವೇಳೆಯಲ್ಲಿ ಅಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಈಶಾನ್ಯ ವಿಭಾಗ ಡಿಸಿಲಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಶುಕ್ರವಾರದಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಐದು ನಿಮಿಷಗಳಲ್ಲಿ ಎರಡು ಬಾರಿ ಸ್ಪೋಟ ಉಂಟಾಗಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

BREAKING: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಮಾಜಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್!

Breaking : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

Share.
Exit mobile version