ಬೆಂಗಳೂರು: ಬೆಸ್ಕಾಂ ಗ್ರಾಹಕರ ವಿವಿಧ ಸಮಸ್ಯೆಗಳನ್ನು ಪರಿಹರಿಸೋ ನಿಟ್ಟಿನಲ್ಲಿ, ಇಲಾಖೆಯಿಂದ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇನ್ಮುಂದೆ ಪ್ರತಿ ಮೂರನೇ ಶನಿವಾರದಂದು ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ಗ್ರಾಹಕರು ಭಾಗಿಯಾಗಿ, ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಕಾಲೇಜಿಗೆ ಚಕ್ಕರ್, ಅಂತರಗಂಗೆ ತಪ್ಪಲಿಗೆ ಹಾಜರ್‌ : ಪೊದೆ ಸೇರುತ್ತಿರುವ ಕೋಲಾರದ ವಿದ್ಯಾರ್ಥಿಗಳು

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3.30 ರಿಂದ 5.30ರವರೆಗೆ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ ಎಂದಿದೆ.

ಮಂಡ್ಯದಲ್ಲಿ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ರೋಡ್ ರಾಬರ್ಸ್: ಗನ್ ತೋರಿಸಿ ದರೋಡೆಗೆ ಇಳಿದವರಿಗೆ ಸಖತ್ ಗೂಸಾ

ಇನ್ನೂ ಬೆಸ್ಕಾಂ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಂಡು, ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ, ಪರಿಹರಿಸಿಕೊಳ್ಳಲು ಕೋರಿದೆ. ಈ ಮೂಲಕ ವಿವಿಧ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದ್ದಂತ ಬೆಸ್ಕಾಂ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಸೆಮಿಕಂಡಕ್ಟರ್ ಹಾಗೂ ಎಫ್‍ಎಂಸಿಜಿಗಳಿಗೆ ಪಿಎಲ್‍ಐ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ – ಸಿಎಂ ಬೊಮ್ಮಾಯಿ

Share.
Exit mobile version