Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ‘ಉಚಿತ ಚಿಕಿತ್ಸೆ’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ | Supreme Court

BIG NEWS : ದುಬಾರೆ ಬೆನ್ನಲ್ಲೆ, ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬೆಸ್ಕಾಂ ಗ್ರಾಹಕ’ರ ಗಮನಕ್ಕೆ: ಅ.5, 6ರಂದು ‘ಆನ್ ಲೈನ್ ಸೇವೆ’ ಅಲಭ್ಯ | BESCOM Service
KARNATAKA

‘ಬೆಸ್ಕಾಂ ಗ್ರಾಹಕ’ರ ಗಮನಕ್ಕೆ: ಅ.5, 6ರಂದು ‘ಆನ್ ಲೈನ್ ಸೇವೆ’ ಅಲಭ್ಯ | BESCOM Service

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‌ಲೈನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಐಟಿ ಅಪ್ಲಿಕೇಶನ್‌ಗಳ ಉನ್ನತೀಕರಣಕ್ಕೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಪ್ಲಿಕೇಶನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್‌ಎಪಿಡಿಆರ್‌ಪಿ ಅಪ್ಲಿಕೇಷನ್‌ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್‌ಟೈಮ್ ಅಕ್ಟೋಬರ್ 4ರ ರಾತ್ರಿ 9ರಿಂದ ಆರಂಭವಾಗಿ 7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ.

ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ.

2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್‌ಎಸ್‌ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್‌ಗ್ರೇಡ್ ಮಾಡುವುದರೊಂದಿಗೆ ಹಂತ-1 ಅನ್ನು ಹಂತ ಹಂತವಾಗಿ ನವೀಕರಿಸಲಾಗಿದೆ.

ಮುಂಬರುವ ಹಂತ-2ರಲ್ಲಿ, ಇಎಎಂ, ಜಿಐಎಸ್, ಐಡಿಎಎಂ, ಇಎಎಸ್ ಮಾಸ್ಟರ್ ಡೇಟಾ ನಿರ್ವಹಣೆ ಮತ್ತು ಮೊಬೈಲ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಪ್‌ಗ್ರೇಡ್ ಮಾಡಿದ ಅಪ್ಲಿಕೇಶನ್‌ಗಳು ರೋಲ್‌ಔಟ್ ಆಗಲಿದ್ದು, ಅಕ್ಟೋಬರ್ 7ರಿಂದ ಕಾರ್ಯಾಚರಣೆಗೆ ಮುಕ್ತವಾಗಲಿವೆ ಎಂದು ಬೆಸ್ಕಾಂ ಹೇಳಿದೆ.

“30,000 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣಗಳನ್ನು ಒಳಗೊಂಡಿರುವ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಭಾಗ-ಎ ಐಟಿ ಯೋಜನೆಯ ಅನುಷ್ಠಾನಕ್ಕೆ ಬೆಸ್ಕಾಂ ನೋಡಲ್ ಏಜೆನ್ಸಿಯಾಗಿದೆ. ಹೊಸ ಅಪ್ಲಿಕೇಶನ್‌ಗಳು ಅಕ್ಟೋಬರ್ 7ರ ಬೆಳಗ್ಗೆ 6ರವರೆಗೆ ಕಾರ್ಯನಿರ್ವಹಿಸಿದ ನಂತರ ಅಪ್ಲಿಕೇಶನ್‌ ದಕ್ಷತೆ ಹೆಚ್ಚಲಿದೆ. ಇದರಿಂದಾಗಿ, ಬಳಕೆದಾರರಿಗೂ ಉತ್ತಮ ಸೇವೆ ಲಭ್ಯವಾಗಲಿದೆ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

“ಸುಗಮ ಸ್ಥಿತ್ಯಂತರದ ಖಾತರಿಗಾಗಿ ಕ್ಷೇತ್ರ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಎಸ್ಕಾಂ ಅಧಿಕಾರಿಗಳಿಗೂ ಹೆಚ್ಚುವರಿ ತರಬೇತಿ ನಡೆದಿದೆ,” ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಸ್ಥಗಿತದ ಸಮಯದಲ್ಲಿ ಈ ಸೇವೆಗಳು ಅಲಭ್ಯ:

1. ಹೊಸ ಸಂಪರ್ಕಗಳ ಪ್ರಕ್ರಿಯೆ, ಹೆಸರು ಮತ್ತು ಸುಂಕ ಬದಲಾವಣೆಗಳು, ಹೆಸರು ವರ್ಗಾವಣೆ ಮತ್ತು ತಾತ್ಕಾಲಿಕ ಸಂಪರ್ಕಗಳಂತಹ ಕಾರ್ಯಾಚರಣೆಗಳಿಗೆ ‘ಆರ್‌ಎಪಿಡಿಆರ್‌ಪಿ’ ಅಪ್ಲಿಕೇಶನ್‌ ಲಭ್ಯವಿರುವುದಿಲ್ಲ.

2. ಬೆಸ್ಕಾಂ ಕ್ಯಾಶ್ ಕೌಂಟರ್‌ಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ.

3. ಹೊಸ ಸಂಪರ್ಕಗಳು, ಹೆಸರು ಮತ್ತು ವಿಳಾಸ ಬದಲಾವಣೆ ಸೇರಿದಂತೆ ಇನ್ನಿತರ ಸೇವೆಗಳಿಗಾಗಿ ಗ್ರಾಹಕ ಪೋರ್ಟಲ್ ಲಭ್ಯವಿರುವುದಿಲ್ಲ.

4. ಗ್ರಾಹಕ ಪೋರ್ಟಲ್ ಮತ್ತು ಥರ್ಡ್ ಪಾರ್ಟಿ ಪಾವತಿ ಚಾನಲ್‌ಗಳ ಮೂಲಕ ಆನ್‌ಲೈನ್ ಬಿಲ್ ಪಾವತಿಗಳು ಅಕ್ಟೋಬರ್ 4ರ ರಾತ್ರಿ 9ರಿಂದ ಅಕ್ಟೋಬರ್ 5ರ ಬೆಳಗ್ಗೆ 11ರವರೆಗೆ ಲಭ್ಯವಿರುವುದಿಲ್ಲ. ಅಕ್ಟೋಬರ್ 5ರ ಬೆಳಗ್ಗೆ 11ರ ನಂತರ ಬಿಲ್ ಪಾವತಿ ಕಾರ್ಯವನ್ನು ಮಾತ್ರ ಪುನರಾರಂಭಿಸಲಾಗುತ್ತದೆ.

5. ‘ಆರ್‌ಎಪಿಡಿಆರ್‌ಪಿ’ ಸೇವೆ ಇಲ್ಲದ ಕಾರಣ, ಮೊಬೈಲ್ ಅಪ್ಲಿಕೇಶನ್‌ಗಳ‌ ಸೇವೆಯೂ ಅಲಭ್ಯ.

6. ಡಬ್ಲ್ಯುಎಎಂಎಸ್ ಮೂಲಕ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ?

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು,ತಿಪಟೂರು ಹಾಗೂ ಗೌರಿಬಿದನೂರು.

ಹೆಚ್ಚಿನ ಮಾಹಿತಿಗಾಗಿ, ಗ್ರಾಹಕರು ಬೆಸ್ಕಾಂ ಸಹಾಯವಾಣಿ 1912 ಸಂಪರ್ಕಿಸಬಹುದು ಅಥವಾ ಬೆಸ್ಕಾಂ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

BREAKING: ದಕ್ಷಿಣ ಕನ್ನಡ ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಘೋಷಣೆ | MLC By-Election

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

1 Min Read

BIG NEWS : ದುಬಾರೆ ಬೆನ್ನಲ್ಲೆ, ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!

1 Min Read

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

3 Mins Read
Recent News

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

BIG NEWS : ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ‘ಉಚಿತ ಚಿಕಿತ್ಸೆ’ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ | Supreme Court

BIG NEWS : ದುಬಾರೆ ಬೆನ್ನಲ್ಲೆ, ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

State News
KARNATAKA

BIG NEWS :`ಅಂಗವಿಕಲರ ಮಾಸಾಶನ ಯೋಜನೆಯಡಿ’ ವಿಕಲಚೇತನರಿಗೆ ಸಿಗಲಿದೆ ಮಾಸಿಕ 2000 ರೂ. ಪಿಂಚಣಿ : ಹೀಗೆ ಅರ್ಜಿ ಸಲ್ಲಿಸಿ

By kannadanewsnow57 KARNATAKA 1 Min Read

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಅವರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ‘ಅಂಗವಿಕಲರ ಮಾಸಾಶನ ಯೋಜನೆ’ಯನ್ನು…

BIG NEWS : ದುಬಾರೆ ಬೆನ್ನಲ್ಲೆ, ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

ಅಧಿಕಾರದ ಸೊಕ್ಕು ಮತ್ತು ದುರಹಂಕಾರದ ಮಾತುಗಳು ನಿಮ್ಮ ಸ್ಥಾನಕ್ಕೆ ಕಿಂಚಿತ್ತು ಗೌರವ ತರುವುದಿಲ್ಲ : ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.