ಬೆಂಗಳೂರು: ಆಗಸ್ಟ್.15ರಂದು ದೇಶಾಧ್ಯಂತ ಸ್ವಾತಂತ್ರೋಯತ್ಸವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ತಿರಂಗದ ರಾಷ್ಟ್ರ ಧ್ವಜವನ್ನು ದೇಶದ ಹೆಮ್ಮೆಯ ಪ್ರತೀಕವಾಗಿ ಬಳಕೆ ಮಾಡಲಾಗುತ್ತದೆ. ಆದರೇ ಈ ಧ್ವಜ ಪ್ಲಾಸ್ಟಿಕ್ ನಿಂದ ಮಾಡಿದ್ದಾಗಿರುವಂತಿಲ್ಲ. ಬದಲಾಗಿ ಬಟ್ಟೆಯ ಧ್ವಜವನ್ನು ಬಳಸುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮ ಮೀರಿ ಬಳಕೆ ಮಾಡಿದ್ರೇ, ಅಂತವರ ವಿರುದ್ಧ ಕೇಸ್ ಫಿಕ್ಸ್ ಎಂಬುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ.
ಈ ಕುರಿತಂತೆ ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.
ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಖಡಕ್ ಆದೇಶದಲ್ಲಿ ಸೂಚಿಸಿದೆ.
ಒಂದು ವೇಳೆ ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧ ಸ್ವರೂಪಕ್ಕೆ ಅನುಗುಣವಾಗಿ ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಮೇಶ್ ವಿ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಸಚಿವ ‘ವಿ.ಸುನೀಲ್ ಕುಮಾರ್’ಗೆ ಬಿಗ್ ರಿಲೀಫ್: ‘ವಾರೆಂಟ್’ಗೆ ಹೈಕೋರ್ಟ್ ತಡೆ
54% ಪೋಷಕರು ಮಗುವಿನ ಪ್ರಶ್ನೆಗೆ ತಕ್ಷಣ ಉತ್ತರವನ್ನು ನೀಡುವುದಿಲ್ಲ: ಸಮೀಕ್ಷೆ