ವಿಜಯಪುರ : ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಇದೀಗ ಈ ಒಂದು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತ ಆರೋಪಿಗಳನ್ನ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ.
ಮದೀನಾ ನಗರದಲ್ಲಿ ಬಾಗಪ್ಪ ಹರಿಜನ ಭೀಕರ ಹತ್ಯೆಯಾಗಿತ್ತು. ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಬಾಡಿಗೆ ಮನೆ ಮಾಡಿ ನಗರದ ಹೊರ ವಲಯದ ರೇಡಿಯೋ ಕೇಂದ್ರದ ಬಳಿ ಬಾಗಪ್ಪ ವಾಸವಿದ್ದ. ಇನ್ನು ಫೆಬ್ರವರಿ 19 ರಂದು ವಿಜಯಪುರ ಕೋರ್ಟ್ಗೆ ಹಾಜರಾಗಿ, ಪ್ರಮುಖ ಸಾಕ್ಷಿ ಹೇಳುವವನಿದ್ದ ಆದ್ರೆ ಅಷ್ಟರಲ್ಲೇ ಇದೀಗ ಈ ಒಂದು ಕೊಲೆ ನಡೆದಿದೆ.
ಇನ್ನು ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್ಗೆ ಹೊರಬಂದಿದ್ದ ವೇಳೆ ಕರೆಂಟ್ ಕಟ್ ಮಾಡಿ, ಟಂಟಂನಲ್ಲಿ ಬಂದು ಅಟ್ಯಾಕ್ ಮಾಡಿದ್ದಾರೆ ಎನ್ನುವ ಮಾಹಿತಿ ಸದ್ಯ ಲಭ್ಯವಾಗಿದೆ. ಅಷ್ಟೇ ಅಲ್ಲದೆ, ಸ್ಥಳದಲ್ಲಿ ಮೂರು ಸುತ್ತು ಗುಂಡಿನ ಸದ್ದು ಕೂಡ ಕೇಳಿಬಂದಿದ್ದು, ಕೊಡಲಿಯಿಂದ ಕೊಚ್ಚಿ ಬಾಗಪ್ಪನ ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಎಡಗೈ ಕೂಡ ಕಟ್ ಆಗಿದ್ದು, ಗುಪ್ತಾಂಗವನ್ನೂ ಕತ್ತರಿಸಲಾಗಿದೆ ಎಂದು ಹೇಳಲಾಗಿದೆ.
2017 ರಲ್ಲೂ ದಾಳಿ!
2017 ಆಗಸ್ಟ್ 8 ರಂದು ಕೋರ್ಟ್ ಆವರಣದಲ್ಲಿ ತನ್ನ ಮೇಲೆ ನಡೆದಿದ್ದ ಫೈರಿಂಗ್ ಕೇಸ್ ನಲ್ಲಿ ಸಾಕ್ಷಿ ನುಡಿಯಲು ಬಂದಿದ್ದ ಬಾಗಪ್ಪನನ್ನೇ ಹತ್ಯೆಗೈಯಲಾಗಿದೆ. ಇನ್ನು ತಾನು ಸಾಕ್ಷಿ ನುಡಿಯಲು ಬರುತ್ತಿದ್ದೇನೆ ಎಂಬುದು ವಿರೋಧಿ ಗ್ಯಾಂಗ್ಗಳಿಗೆ ಗೊತ್ತಾಗದಿರಲಿ ಎಂದು ನಗರದ ಹೊರ ವಲಯದಲ್ಲಿ ಬಾಡಿಗೆ ಮನೆ ಮಾಡಿ ವಾಸವಿದ್ದ. ರಾತ್ರಿ ವಾಕಿಂಗ್ ಮಾಡಲು ಬಂದಾಗ ಹಂತಕರು ಬರ್ಬರವಾಗಿ ಹತ್ಯೆಗೈದಿದ್ದಾರೆ.