ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬ್ಲಿಗೇರಿ ಗ್ರಾಮದಲ್ಲಿ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಂದು ಮನೆಗೆ ಬೀಗ ಹಾಕಿ ಪತಿ ಪರಾರಿಯಾಗಿದ್ದಾರೆ.
HEALTH TIPS: ಚಳಿಗಾಲದಲ್ಲಿ ಮಗು ಅನಾರೋಗ್ಯ ತಡಯಲು 5 ಹಣ್ಣಿನ ರಸಗಳು ಅನುಸರಿಸಿ
58 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ಪತಿಯನ್ನು 65 ವರ್ಷದ ಪರಮೇಶ್ ಎಂದು ಗುರುತಿಸಲಾಗಿದೆ. ಸಂಬಂಧಿಕರು ಮನೆಗೆ ಆಮಂತ್ರಣ ಕೊಡಲು ಬಂದಾಗ ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಪುತ್ರನಿಗೆ ಫೋನ್ ಮಾಡಿ ತಿಳಿಸಿದ್ದು ಮನೆಯ ಬೀಗ ಒಡೆದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
HEALTH TIPS: ಚಳಿಗಾಲದಲ್ಲಿ ಮಗು ಅನಾರೋಗ್ಯ ತಡಯಲು 5 ಹಣ್ಣಿನ ರಸಗಳು ಅನುಸರಿಸಿ
ಮೂವತ್ತು ವರ್ಷಗಳ ಹಿಂದೆ ರತ್ನಮ್ಮ ಹಾಗೂ ಪರಮೇಶ್ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಇಬ್ಬರಿಗೂ ಮದುವೆ ಮಾಡಿದ್ದರು. ಮನೆಯಲ್ಲಿ ಗಂಡ ಹೆಂಡತಿ ಇಬ್ಬರೇ ಇದ್ದರು. ನಾಲ್ಕು ಎಕರೆ ಕಾಫಿ ತೋಟವಿದ್ದು, ದಂಪತಿ ಕಷ್ಟಪಟ್ಟು ದುಡಿಯುತ್ತಿದ್ದರು. ರತ್ನಮ ಹೊಸ ಮನೆ ಕಟ್ಟಬೇಕೆಂಬ ಮಹಾದಾಸೆ ಇಟ್ಟುಕೊಂಡಿದ್ದರು. ಕಾಫಿಯಲ್ಲಿ ಬಂದ ಹಣದಲ್ಲಿ ಹೊಸ ಮನೆ ನಿರ್ಮಾಣ ಮಾಡುತ್ತಿದ್ದರು. ಮದುವೆಯಾದಗಿನಿಂದಲೂ ಪರಮೇಶ್ ಸಣ್ಣಪುಟ್ಟ ವಿಚಾರಕ್ಕೆ ಜಗಳ ತೆಗೆದು ಪತ್ನಿಗೆ ಮನಸ್ಸೋ ಇಚ್ಛೆ ಹಲ್ಲೆ ಮಾಡುತ್ತಿದ್ದ. ಮಗ ಬೆಳಗಾವಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಮಕ್ಕಳಿಬ್ಬರು ಪ್ರತಿನಿತ್ಯ ಅಮ್ಮನಿಗೆ ಫೋನ್ ಮಾಡಿ ಮಾತನಾಡುತ್ತಿದ್ದರು.