ಅಡಿಲೇಡ್: ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಂಗಳವಾರ ನಡೆದ ಅಭ್ಯಾಸದ ವೇಳೆ ತಮ್ಮ ಮುಂಗೈಗೆ ಬಲವಾದ ಪೆಟ್ಟು ಮಾಡಿಕೊಂಢಿದ್ದಾರೆ ಎನ್ನಲಾಗಿದೆ. ಅಡಿಲೇಡ್ ಓವಲ್ನಲ್ಲಿ ತಂಡದ ಥ್ರೋಡೌನ್ ಎಕ್ಸ್ಪರ್ಟ್ ಎಸ್ ರಘು ಅವರನ್ನು ಎದುರಿಸುವಾಗ ಶಾರ್ಟ್ ಬಾಲ್ ಲೆಂಗ್ತ್ ಪ್ರದೇಶದಿಂದ ಜಿಗಿದು ಅವರ ಬಲ ಮುಂಗೈಗೆ ಬಡಿದಿದೆ ಎನ್ನಲಾಗಿದೆ.

ನೆಟ್ಸ್‌ನಿಂದ ನಿರ್ಗಮಿಸಿದ ರೋಹಿತ್ ಕೈಗೆ ಐಸ್‌ ಬಾಕ್ಸ್‌ ಕಟ್ಟಿದ್ದು, ದೂರದಲ್ಲಿ ಕುಳಿತು ಅವರು ಅಭ್ಯಾಸವನ್ನು ವೀಕ್ಷಿಸುತ್ತಿದ್ದರು. ಅವರು ಹೆಚ್ಚು ನೋವಿನಿಂದ ಬಳಲುತ್ತಿರುವುದು ಕಾಣುತ್ತಿದ್ದರು ಎನ್ನಲಾಗಿದೆ. ಮಾನಸಿಕ ಕಂಡೀಷನಿಂಗ್ ತರಬೇತುದಾರ ಪ್ಯಾಡಿ ಅಪ್ಟನ್ ಅವರೊಂದಿಗೆ ಸಾಕಷ್ಟು ಸಮಯದವರೆಗೆ ಮಾತನಾಡುತ್ತಿರುವುದು ಕಂಡುಬಂದಿದೆ. ಗುರುವಾರ ಇಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಸೆಣಸಲಿದ್ದು, ಬುಧವಾರ ಸಿಡ್ನಿಯಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

Share.
Exit mobile version