ನವದೆಹಲಿ: 1992 ರಲ್ಲಿ ಬಾಬ್ರಿ ಮಸೀದಿ ಧ್ವಂಸದಿಂದ ಉದ್ಭವಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ.
1992ರಲ್ಲಿ ಬಾಬರಿ ಮಸೀದಿ ಧ್ವಂಸದಿಂದ ಉದ್ಭವಿಸಿದ ಯುಪಿ ಸರ್ಕಾರ ಮತ್ತು ಅದರ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಗಳ ಒಂದು ಬ್ಯಾಚ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ತೆರೆ ಎಳೆದಿದೆ. 2002ರಲ್ಲಿ ಗುಜರಾತ್ ನಲ್ಲಿ ನಡೆದ ಗೋಧ್ರಾ ನಂತರದ ಕೋಮುಗಲಭೆಗಳ ಹಿನ್ನೆಲೆಯಲ್ಲಿ ಆರಂಭಿಸಲಾದ ಎಲ್ಲ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ.
ಸಮಯ ಕಳೆದಂತೆ ಮತ್ತು 2019 ರ ಅಯೋಧ್ಯೆ ಭೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗ ನಿಂದನೆ ಪ್ರಕರಣಗಳು ಉಳಿಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಗೋಧ್ರಾ ನಂತರದ ಕೋಮುಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ನ್ಯಾಯಾಲಯದ ಆದೇಶದ ಮೇರೆಗೆ ಎಸ್ಐಟಿ ವಿಚಾರಣೆ ನಡೆಸಿದ 9 ಪ್ರಮುಖ ಪ್ರಕರಣಗಳಲ್ಲಿ 8 ರಲ್ಲಿ ಸಮಯ ಮತ್ತು ವಿಚಾರಣೆಗಳು ಮುಗಿಯುವುದರೊಂದಿಗೆ ಪ್ರಕರಣಗಳು ನಿಷ್ಪ್ರಯೋಜಕವಾಗಿವೆ ಎಂದು ನ್ಯಾಯಾಲಯ ಹೇಳಿದೆ.