ಬೆಳಗಾವಿ: ಬೆಳಗಾವಿ ತಾಲೂಕಿನ ಹಾಲಭಾವಿ ಗ್ರಾಮದ ಹೊರವಲಯದಲ್ಲಿ ಐಟಿಬಿಟಿ ಕ್ಯಾಂಪ್ನಲ್ಲಿ ಕಳೆದ ಆ.17ರ ರಾತ್ರಿ ರೈಫಲ್ಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಬಿಗಿ ಪೊಲೀಸ್ ಭದ್ರತೆ ನಡುವೆಯೂ ಎಕೆ-47 ರೈಫಲ್ಗಳು ಕಳ್ಳತನವಾಗಿರುವುದು ಆತಂಕ ಮೂಡಿಸಿದ್ದು, ಘಟನ ಸ್ಥಳಕ್ಕೆ ಳಗಾವಿ ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ತಂಡ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದೆ ಅಂತ ತಿಳಿದು ಬಂದಿದೆ.
ಇದಲ್ಲದೇ ಕಾಕತಿ ಪೊಲೀಸ್ ಠಾಣೆಯಲ್ಲಿ ಐಟಿಬಿಪಿಯಿಂದ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನೂ ಕಳುವಾಗಿರುವ ಎಕೆ-47 ರೈಫಲ್ಗಳು ಇಂಡೋ ಟಿಬೆಟಿಯನ್ ಗಡಿ ಪೊಲೀಸರಾದ ರಾಜೇಶಕುಮಾರ, ಸಂದೀಪ ಮೀನಾ ಎಂಬುವವರಿಗೆ ಸೇರಿದ ಎರಡು ಎಕೆ – 47 ಆಗಿದೆ. ನಕ್ಸಲ್ ನಿಗ್ರಹ ತರಬೇತಿಗಾಗಿ ಮಧುರೈನ 45ನೇ ಬೆಟಾಲಿಯನ್ ಪೊಲೀಸ್ ಪಡೆಯು ಹಾಲಭಾವಿಗೆ ಆಗಮಿಸಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.
BIGG NEWS: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ನಾಳೆ ಬೆಳಗ್ಗೆ 6ರವರೆಗೂ ನಿಷೇದಾಜ್ಞೆ ಮುಂದುವರಿಕೆ