ನವದೆಹಲಿ : ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಲಡ್ಡು ವಿವಾದದ ಕುರಿತ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಸ್ವತಂತ್ರ ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಆದೇಶ ಹೊರಡಿಸಿದ್ದಾರೆ.
ಹೌದು ತಿರುಪತಿ ಲಡ್ಡು ವಿವಾದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಕೈಗೆತ್ತಿಕೊಂಡ ಜಡ್ಜ್ ಸ್ವತಂತ್ರ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿದೆ. ಒಟ್ಟು ಐವರ ವಿಶೇಷ ತನಿಖಾತಂಡ ರಚಿಸಿದ ಸುಪ್ರೀಂ ಕೋರ್ಟ್, ರಾಜ್ಯದ ಅಧಿಕಾರಿಗಳು ಸಿಬಿಐ, ಫುಡ್ ಸೇಫ್ಟಿ ಅಧಿಕಾರಿಗಳು ಈ ಒಂದು ತಂಡದಲ್ಲಿ ಇದ್ದಾರೆ. ಸಿಬಿಐನ ಇಬ್ಬರು ಅಧಿಕಾರಿಗಳು ರಾಜ್ಯದ ಇಬ್ಬರು ಅಧಿಕಾರಿಗಳು ಫುಡ್ ಸೇಫ್ಟಿ ಸಂಸ್ಥೆಯ ಓರ್ವ ಅಧಿಕಾರಿ ಒಳಗೊಂಡ ತನಿಖಾ ತಂಡ ಇದಾಗಿದೆ.
ಒಟ್ಟು ಐವರ ವಿಶೇಷ ತನಿಖಾ ತಂಡವನ್ನು ಸುಪ್ರೀಂ ಕೋರ್ಟ್ ರಚಿಸಿದೆ. ಆಂಧ್ರಪ್ರದೇಶ ಸರ್ಕಾರದ ಎಸ್ಐಟಿ ತನಿಖೆ ಬೇಡ ಸ್ವತಂತ್ರವಾದಂತಹ ವಿಶೇಷ ತನಿಕಾ ತಂಡ ರಚಿಸಿ, ಈ ಪ್ರಕರಣದ ಕುರಿತಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಈ ಒಂದು ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈಗಾಗಲೇ ಈ ವಿಷಯದ ಕುರಿತು 4 ಅರ್ಜಿಗಳನ್ನು ವಶಪಡಿಸಿಕೊಂಡಿದೆ. ಹಿಂದಿನ ಆಡಳಿತದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ವೇಳೆ ಸೆಪ್ಟೆಂಬರ್ 30ರಂದು, ದೇವರುಗಳನ್ನು ರಾಜಕೀಯದಿಂದ ದೂರವಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.