Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 4:55 AM

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಭಾರತೀಯ ರೈಲ್ವೆ ಇಲಾಖೆಯಲ್ಲಿ 12 ಲಕ್ಷ ಹುದ್ದೆಗಳು ಖಾಲಿ!
KARNATAKA

BIG NEWS : ಭಾರತೀಯ ರೈಲ್ವೆ ಇಲಾಖೆಯಲ್ಲಿ 12 ಲಕ್ಷ ಹುದ್ದೆಗಳು ಖಾಲಿ!

By kannadanewsnow5707/10/2024 12:23 PM

ಬಳ್ಳಾರಿ : ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ-ಚಿಕ್ಕಜಾಜೂರು ಮಾರ್ಗದ 185 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯಕ್ಕೆ 3,080 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಪ್ರಸ್ತಕ ವರ್ಷದಲ್ಲಿ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಇನ್ನೆರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅದೇರೀತಿಯಾಗಿ ಸ್ವಾಮಿಹಳ್ಳಿ-ರಾಯದುರ್ಗ ಮಾರ್ಗದ 52 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯಕ್ಕೆ ತಾಂತ್ರಿಕ ಪರಿಶೀಲನೆ ನಡೆಸಲಾಗಿದೆ. ನಂತರ ಡಿಪಿಆರ್ ಸಿದ್ದಪಡಿಸಲಾಗುವುದು ಎಂದು ತಿಳಿಸಿದರು.

ಬಳ್ಳಾರಿ-ಹೊಸಪೇಟೆ ಮಾರ್ಗದಲ್ಲಿ ನಾಲ್ಕು ಟ್ರಾö್ಯಕ್ ಹಳಿಯ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಡಿಪಿಆರ್ ಸಿದ್ದಗೊಳ್ಳುತ್ತಿದೆ. ಈ ಭಾಗದ ವಿವಿಧ ಕಾರ್ಖಾನೆಗಳಿಗೆ ರೈಲ್ವೆ ಅಭಿವೃದ್ಧಿಗೆ ಸುಮಾರು 3 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತದೆ. ವ್ಯಾಸನಕೆರೆ-ಅಮರಾವತಿ ಕಾಲೋನಿ ಮಾರ್ಗದ 20 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ, ತೋರಣಗಲ್ಲು-ರಣಜಿತ್‌ಪುರ ಮಾರ್ಗದ 29 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ 16.66 ಕೋಟಿ ರೂ. ಮತ್ತು ಹೊಸಪೇಟೆ ರೈಲ್ವೆ ನಿಲ್ದಾಣಕ್ಕೆ 15.17 ಕೋಟಿ ರೂ. ಅನುದಾನದಲ್ಲಿ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು, ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕು ಎಂದು ತಿಳಿಸಿದ ಸಚಿವರು, ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49 ಸಾವಿರ ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇ.27 ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ದೇಶದ ಎಲ್ಲ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ಏರ್‌ಪೋರ್ಟ್ಗಳ ಮಾದರಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟç ರಾಜ್ಯಗಳಲ್ಲಿ ಹಾದುಹೋಗಿರುವ 741 ಕಿ.ಮೀ ಉದ್ದದ ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆಯ ನೇರ ಆಡಳಿತಕ್ಕೆ ಒಳಪಡಿಸಲು ಮೂರು ರಾಜ್ಯಗಳು ತಾತ್ವಿಕ ಒಪ್ಪಿಗೆ ನೀಡಿದ್ದು, ಹಳಿಗಳ ಡಬ್ಲಿಂಗ್ ಮಾಡುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚಿಸಲಾಗಿದೆ ಎಂದರು.

ಅತೀ ಕಡಿಮೆ ಪ್ರಯಾಣದರದಲ್ಲಿ ಬಡವರು, ಸಣ್ಣ ಪುಟ್ಟ ವ್ಯಾಪಾರಿಗಳ ಅನುಕೂಲಕ್ಕಾಗಿ ಪ್ರಮುಖ ನಗರಗಳಿಗೆ ರೈಲು ಸಂಪರ್ಕ ಕಲ್ಪಿಸುವ ದೃಷ್ಠಿಯಿಂದ ಡೆಮೋ ರೈಲುಗಳನ್ನು ಓಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುವAತೆ ಕ್ರಮ ವಹಿಸಲಾಗುವುದು ಎಂದರು.

ಕನ್ನಡದಲ್ಲೆ ರೈಲ್ವೆ ಪರೀಕ್ಷೆ:
ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

BIG NEWS : ಭಾರತೀಯ ರೈಲ್ವೆ ಇಲಾಖೆಯಲ್ಲಿ 12 ಲಕ್ಷ ಹುದ್ದೆಗಳು ಖಾಲಿ! BIG NEWS: 12 Lakh Vacancies in Indian Railway Department!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 4:55 AM2 Mins Read

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM2 Mins Read

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM1 Min Read
Recent News

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

09/01/2026 4:55 AM

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM

BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

08/01/2026 9:08 PM
State News
KARNATAKA

BIG NEWS : ರಾಜ್ಯದ ಅನುದಾನಿತ ನಿವೃತ್ತ ಶಿಕ್ಷಕರು, ಸಿಬ್ಬಂದಿಗಳಿಗೆ `ಗಳಿಕೆ ರಜೆ ನಗಧೀಕರಣ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5709/01/2026 4:55 AM KARNATAKA 2 Mins Read

ಬೆಂಗಳೂರು : 2024-25 ಮತ್ತು 2025-26 ನೇ ಸಾಲಿನಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಶಿಕ್ಷಕ/ಸಿಬ್ಬಂದಿಗಳಿಗೆ ನಿವೃತ್ತಿ…

ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

08/01/2026 9:27 PM

BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ

08/01/2026 9:19 PM

BREAKING: ಮಂಡ್ಯದ ಮದ್ದೂರು ಬಳಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು.!

08/01/2026 9:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.