Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಶ್ಲೀಲ ಚಿತ್ರಗಳ ಪ್ರಕರಣ: ಮಸ್ಕ್ ಒಡೆತನದ ‘X’ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ: ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

08/01/2026 11:19 AM

ALERT : ಬಿಸಿನೀರಿಗಾಗಿ ‘ವಾಟರ್ ಹೀಟರ್’ ಬಳಸುವವರೇ ಎಚ್ಚರ : ಕರೆಂಟ್ ಶಾಕ್ ನಿಂದ ಅಕ್ಕ-ತಂಗಿ ದಾರುಣ ಸಾವು

08/01/2026 11:12 AM

BREAKING : ಭಾರತಕ್ಕೆ ಶೇ.500 ರಷ್ಟು ದಂಡ ವಿಧಿಸುವ ಮಸೂದೆಗೆ ಡೊನಾಲ್ಡ್ ಟ್ರಂಪ್ ಗ್ರೀನ್ ಸಿಗ್ನಲ್

08/01/2026 11:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 13.87 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ
KARNATAKA

BIG NEWS : ರಾಜ್ಯದಲ್ಲಿ 13.87 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

By kannadanewsnow0521/10/2024 9:32 PM

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಇಂದು ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು.

2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು ಪರಿಶೀಲಿಸಿದರೆ ಕನಿಷ್ಠ 10 ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆಯಾಗಬಹುದು. ಆನಂತರ ಅನರ್ಹ ಕಾರ್ಡುಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಕಾರ್ಡುಗಳನ್ನು ನೀಡಲು ಮುಂದಿನ ದಿನಗಳಲ್ಲಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.

‘ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ!

ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ.ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿತ್ತು.ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಟಿ ಜೊತೆಗೆ ಮತ್ತೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರದಿಂದ ಅದಕ್ಕೆ ಅಗತ್ಯವಿದ್ದಂತ ಅಕ್ಕಿ ನೀಡಲು ಹಿಂದೇಟು ಹಾಕಿದ ಕಾರಣ, 5 ಕೆಜಿ ಅಕ್ಕಿ ಬದಲಿಗೆ ಅದೇ ಬೆಲೆಯ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಡಿಬಿಟಿ ಮೂಲಕ ಹಣ ವರ್ಗಾವಣೆ ನಿಲ್ಲಿಸಿ, ಈಗ ಎಣ್ಣೆ, ಬೇಳೆ ಸೇರಿದಂತೆ ವಿವಿಧ ಆಹಾರ ಧಾನ್ಯಗಳನ್ನು ಒಳಗೊಂಡಂತ ಆಹಾರ ಕಿಟ್ ವಿತರಣೆಗೆ ಮುಂದಾಗಿದೆ.

Share. Facebook Twitter LinkedIn WhatsApp Email

Related Posts

SHOCKING : ಚಿತ್ರದುರ್ಗದಲ್ಲಿ ಮದ್ವೆ ಮಾಡದಿದ್ದಕ್ಕೆ ರಾಡ್ ನಿಂದ ಹೊಡೆದು, ಹೆತ್ತ ತಂದೆಯನ್ನೆ ಹತ್ಯೆಗೈದ ಪಾಪಿ ಮಗ!

08/01/2026 10:57 AM1 Min Read

ALERT : ಮೊಬೈಲ್ ಬಳಕೆದಾರರೇ ಎಚ್ಚರ : `OTP’ ಇಲ್ಲದೇ ಬ್ಯಾಂಕ್ ಖಾತೆ ಖಾಲಿ, ವಿಶ್ವದಾದ್ಯಂತ ನಡೆಯುತ್ತಿದೆ ಹೊಸ ವಂಚನೆ.!

08/01/2026 10:56 AM2 Mins Read

BIG NEWS : ಭಾರತದಲ್ಲಿ `ಮಹಿಳೆ’ಯರಿಗೆ ಅತ್ಯಂತ ಸುರಕ್ಷಿತ ಟಾಪ್-10 ನಗರಗಳ ಪಟ್ಟಿ ಪ್ರಕಟ : ಬೆಂಗಳೂರು ಸಿಟಿ ನಂ.1

08/01/2026 10:43 AM2 Mins Read
Recent News

ಅಶ್ಲೀಲ ಚಿತ್ರಗಳ ಪ್ರಕರಣ: ಮಸ್ಕ್ ಒಡೆತನದ ‘X’ ವಿರುದ್ಧ ಭಾರತ ಸರ್ಕಾರ ಕೆಂಡಾಮಂಡಲ: ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

08/01/2026 11:19 AM

ALERT : ಬಿಸಿನೀರಿಗಾಗಿ ‘ವಾಟರ್ ಹೀಟರ್’ ಬಳಸುವವರೇ ಎಚ್ಚರ : ಕರೆಂಟ್ ಶಾಕ್ ನಿಂದ ಅಕ್ಕ-ತಂಗಿ ದಾರುಣ ಸಾವು

08/01/2026 11:12 AM

BREAKING : ಭಾರತಕ್ಕೆ ಶೇ.500 ರಷ್ಟು ದಂಡ ವಿಧಿಸುವ ಮಸೂದೆಗೆ ಡೊನಾಲ್ಡ್ ಟ್ರಂಪ್ ಗ್ರೀನ್ ಸಿಗ್ನಲ್

08/01/2026 11:11 AM

BREAKING: ಸಾಲ್ಟ್ ಲೇಕ್ ಸಿಟಿ ಚರ್ಚ್ ಹೊರಗೆ ಗುಂಡಿನ ದಾಳಿ: ಇಬ್ಬರು ಸಾವು, ಹಲವರಿಗೆ ಗಾಯ

08/01/2026 11:10 AM
State News
KARNATAKA

SHOCKING : ಚಿತ್ರದುರ್ಗದಲ್ಲಿ ಮದ್ವೆ ಮಾಡದಿದ್ದಕ್ಕೆ ರಾಡ್ ನಿಂದ ಹೊಡೆದು, ಹೆತ್ತ ತಂದೆಯನ್ನೆ ಹತ್ಯೆಗೈದ ಪಾಪಿ ಮಗ!

By kannadanewsnow0508/01/2026 10:57 AM KARNATAKA 1 Min Read

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು ಮದುವೆ ಮಾಡದಿದ್ದಕ್ಕೆ ಹೆತ್ತ ತಂದೆಯನ್ನೇ ಭೀಕರವಾಗಿ ಮಗನೊಬ್ಬ ಕೊಲೆ ನಡೆದಿದ್ದು…

ALERT : ಮೊಬೈಲ್ ಬಳಕೆದಾರರೇ ಎಚ್ಚರ : `OTP’ ಇಲ್ಲದೇ ಬ್ಯಾಂಕ್ ಖಾತೆ ಖಾಲಿ, ವಿಶ್ವದಾದ್ಯಂತ ನಡೆಯುತ್ತಿದೆ ಹೊಸ ವಂಚನೆ.!

08/01/2026 10:56 AM

BIG NEWS : ಭಾರತದಲ್ಲಿ `ಮಹಿಳೆ’ಯರಿಗೆ ಅತ್ಯಂತ ಸುರಕ್ಷಿತ ಟಾಪ್-10 ನಗರಗಳ ಪಟ್ಟಿ ಪ್ರಕಟ : ಬೆಂಗಳೂರು ಸಿಟಿ ನಂ.1

08/01/2026 10:43 AM

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿ : ಓರ್ವ ಯುವಕ ಸಾವು, ನಾಲ್ವರಿಗೆ ಗಂಭೀರ ಗಾಯ!

08/01/2026 10:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.