Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

18/07/2025 9:02 PM

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸಿವಿಲ್ ಸೇವೆಗಳಲ್ಲಿನ `ಗ್ರೂಪ್-B ಮತ್ತು C’ ಹುದ್ದೆಗಳ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
KARNATAKA

BIG NEWS : ರಾಜ್ಯದ ಸಿವಿಲ್ ಸೇವೆಗಳಲ್ಲಿನ `ಗ್ರೂಪ್-B ಮತ್ತು C’ ಹುದ್ದೆಗಳ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

By kannadanewsnow5706/09/2024 5:58 AM
vidhana soudha
vidhana soudha

ಬೆಂಗಳೂರು : ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಬಿ ಮತ್ತು ಗ್ರೂಪ್- ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಸೀಮಿತವಾಗಿ ಮೂರು ವರ್ಷದಷ್ಟು ಹೆಚ್ಚಳ ಮಾಡಿ ವಯೋಮಿತಿ ಸಡಿಲಿಕೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿಯನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೀಡಿದರು. ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಬಿ ಮತ್ತು ಗ್ರೂಪ್- ಸಿ ಹುದ್ದೆಗಳಿಗೆ ಪ್ರಸ್ತುತ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರ.ವರ್ಗ 2ಎ, 2ಬಿ ಗಳಿಗೆ 38 ವರ್ಷ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ಕ್ಕೆ 40 ವರ್ಷ ಗರಿಷ್ಠ ವಯೋಮಿತಿ ಇದ್ದು, ಇದೀಗ 1 ವರ್ಷಕ್ಕೆ ಸೀಮಿತವಾಗಿ ವಯೋಮಿತಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಹದಾಯಿ ಕುಡಿಯುವ ನೀರು ಯೋಜನೆವಿಚಾರವಾಗಿ ವನ್ಯಜೀವಿ ಮಂಡಳಿ ನಡೆಯ ವಿರುದ್ಧ ದೂರು ನೀಡಲಾಗುತ್ತದೆ. ಸುಪ್ರೀಂ ಮೆಟ್ಟಿಲೇರೋಕೆ ರಾಜ್ಯದ ನಿರ್ಧಾರಿಸಿದೆ. ಸರ್ವಪಕ್ಷ ನಿಯೋಗ ಒಯ್ಯುವ ಬಗ್ಗೆ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು.

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಸಭೆ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ರಾಜಮಾತೆ ಪ್ರಮೋದಾದೇವಿ ಹೇಳಿಕೆ ನೀಡಿದ್ದರು. ಕಂಟೆಂಟ್ ಆಫ್ ಕೋರ್ಟ್ ಎಂದಿದ್ದರು. ಆದರೆ ಅದು ಅವರ ತಪ್ಪು ಗ್ರಹಿಕೆಯಾಗಿದೆ. ಇಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಇಲ್ಲಿ ಕೋರ್ಟ್ ಕಂಟೆಂಫ್ಟ್ ಆಗಿಲ್ಲ ಎಂಬುದಾಗಿ ಸಮರ್ಥನೆ ನೀಡಿದರು.

ಕೋವಿಡ್ ಹಗರಣದ ವರದಿ ಬಗ್ಗೆ ಚರ್ಚೆ ನಡೆಸಲಾಯಿತು. ನೂರಾರು ಕೋಟಿ ಅವ್ಯವಹಾರದ ಬಗ್ಗೆ ಪ್ರಸ್ತಾಪವಾಗಿದೆ. ಜಸ್ಟೀಸ್ ತಮ್ಮ‌ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ಹಲವು ಮಿಸ್ಸಿಂಗ್ ಫೈಲ್ಸ್ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಪಬ್ಲಿಕ್ ಅಕೌಂಟ್ ಕೊಟ್ಟ ವರದಿಯನ್ನ ಉಲ್ಲೇಖಿಸಿದೆ. ವಿವರವಾದ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ವರದಿ ಪರಿಶೀಲನೆಗೆ ಹಿರಿಯ ಅಧಿಕಾರಿಗಳಿ ಹೊಣೆ ನೀಡಲಾಗಿದೆ. ತಿಂಗಳೊಳಗೆ ಪರಿಶೀಲಿಸಿ ವರದಿ ಕೊಡುವಂತೆ ಸೂಚನೆ ನೀಡಲಾಗಿದೆ. ಇದು ಮಧ್ಯಂತರ ವರದಿ ಆಧರಿಸಿ ಸೂಚನೆ ನೀಡಲಾಗಿದೆ ಎಂದರು.

ಅತೀಕ್ ಸೇರಿ ಇಬ್ಬರು ಅಧಿಕಾರಿಗಳಿಗೆ ಹೊಣೆ ಮಾಡಲಾಗುತ್ತಿದೆ. ಮಧ್ಯಂತರ ವರದಿ ಪರಿಶೀಲಿಸುವ ಜವಾಬ್ದಾರಿ ನೀಡಲಾಗುವುದು. ಪರಿಶೀಲಿಸಿ ಕ್ರಮದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ನಿರ್ಧಿಷ್ಟ ವ್ಯಕ್ತಿಯ ಬಗ್ಗೆ ನಮಗೆ ಗೊತ್ತಿಲ್ಲ. ವರದಿಯನ್ನ ನಾನು ಪರಿಶೀಲಿಸಿಲ್ಲ ಎಂದು ಹೇಳಿದರು.

ನೂರಾರು ಕೋಟಿ ದುರ್ವವ್ಯವಹಾರ ಆಗಿದೆ. ಕೊಟ್ಟ ಮಧ್ಯಂತರ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಸಂಪೂರ್ಣ ಡಿಟೇಲ್ಸ್ ನಮಗೆ ಗೊತ್ತಿಲ್ಲ. ಇಂಟರಿಮ್ ರಿಪೋರ್ಟ್ ಟೇಬಲ್ ಮಾಡಬಹುದು. ಇಲ್ಲವೇ ಬೇಗ ವರದಿ ಕೊಟ್ಟರೆ ಬೇಗ ಮಾಡಬಹುದು ಎಂದು ತಿಳಿಸಿದರು.

ಕಾರ್ಕಳದಲ್ಲಿ ಟೆಕ್ಸ್ ಪಾರ್ಕ್ ಸ್ಥಾಪನೆ ಮಾಡಲಾಗುತ್ತಿದೆ. 27.29 ಲಕ್ಷದಲ್ಲಿ ಪ್ರಾರಂಭಕ್ಕೆ ಅನುಮೋದನೆ ನೀಡಲಾಗಿದೆ. ಉದಯೋನ್ಮುಕ ತಂತ್ರಜ್ಙಾನ ತರಬೇತಿ ನೀಡಲಾಗುತ್ತದೆ. ನಿಪುಣ ಕರ್ನಾಟಕ ಕಾರ್ಯಾಯೋಜನೆಗೆ ಒಪ್ಪಿಗೆ ನೀಡಲಾಗಿದೆ. 100 ಕೋಟಿ ಅನುದಾನದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಸ್ಥಳೀಯ ಉದ್ಯೋಗಾವಕಾಶ ಸುಧಾರಣೆಗೆ ಕ್ರಮವಹಿಸಲಾಗಿದೆ. ಜೈವಿಕ ತಂತ್ರಜ್ಙಾನ ನೀತಿ 2024-29ಗೆ ಅನುಮೋದನೆ ನೀಡಲಾಗಿದೆ. ಮೊರಾರ್ಜಿ ದೇಸಾಯಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು 18.54 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆ ಯಥಾಸ್ಥಿತಿ ಮುಂದುವರಿಕೆ ಮಾಡಲಾಗುತ್ತಿದೆ. ಡಿಬಿಟಿ ವ್ಯವಸ್ಥೆ ಮುಂದುವರಿಕೆಗೆ ಒಪ್ಪಿಗೆ ನೀಡಲಾಗಿದೆ. ಸಂಪುಟದ ಮುಂದೆ ಮೂರು ಪ್ರಸ್ತಾವನೆ ಬಂದಿದ್ದವು. ಅದರಲ್ಲಿ ಫುಡ್ ಕಿಟ್ ನೀಡುವ ಪ್ರಸ್ತಾಪವಿತ್ತು. ಅರ್ಧ ಕೆಜಿ ತೊಗರಿ, ಎಣ್ಣೆ, ಸಕ್ಕರೆ ಕೊಡುವ ಪ್ರಸ್ತಾವನೆ ಇತ್ತು. ಆದರೆ ಅದನ್ನ ಕೈಬಿಡಲಾಗಿದೆ. ಯಥಾಸ್ಥಿತಿ 170 ರೂ ಹಣ ವಿತರಣೆ ಮುಂದುವರಿಕೆ ಮಾಡಲಾಗುತ್ತಿದೆ ಎಂದರು.

59 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯಕ್ಕೆ ಒಪ್ಪಿಗೆ ನೀಡಲಾಗುತ್ತಿದೆ. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಭಾಗ್ಯ ನೀಡಲಾಗುತ್ತಿದೆ. ಇಂದಿನ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಮಿಕ ನೊಂದಣಿ ಶುಲ್ಕ ಪರಿಷ್ಕರಣೆಗೆ ಒಪ್ಪಿಗೆ ನೀಡಲಾಗಿದೆ. ಶೇ.35ರಷ್ಟು ಏರಿಕೆಗೆ ಸರ್ಕಾರದ ತೀರ್ಮಾನ ಕೈಗೊಂಡಿದೆ. ನ್ಯಾಯಾಂಗ ನೇಮಕಾತಿ ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡಲಾಗಿದೆ. ಕಿದ್ವಾಯಿ ಗ್ರಂಥಿ ಸಂಸ್ಥೆಗೆ ಉಪಕರಣ ಖರೀದಿಗಾಗಿ 70 ಕೋಟಿ ವೆಚ್ಚದಲ್ಲಿ ಖರೀದಿಗೆ ಒಪ್ಪಿಗೆ ನೀಡಲಾಗಿದೆ ಎಂದರು.

ಮೈಸೂರಿನ‌ ನೆಪ್ರೋ ಆಸ್ಪತ್ರೆ ಮೇಲ್ದರ್ಜೆಗೇರಿಕೆಗಾಗಿ 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಒಪ್ಪಿಗೆ ನೀಡಲಾಗಿದೆ. ಕಲಬುರಗಿಯಲ್ಲಿ ಮಕ್ಕಳ ಆರೋಗ್ಯ ಘಟಕ ನಿರ್ಮಿಸಲು 221 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರಿನ ನೆಪ್ರೋ ಸಂಸ್ಥೆಗೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ನೊಂದಣಿ ಮುದ್ರಾಂಕ ಇಲಾಖೆ ವರ್ಗಾವಣೆಗೆ ವಿಸ್ತರಣೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದರು.

32 ವಾಹನ ಚಾಲನಾ ಪರೀಕ್ಷಾ ಕೇಂದ್ರ ಸ್ಥಾಪನೆಯನ್ನು ರಾಜ್ಯದ 32 ಕಡೆಗಳಲ್ಲಿ ಸ್ಥಾಪನೆಗೆ ಅನುದಾನ ಕಲ್ಪಿಸಲಾಗುತ್ತಿದೆ. 15 ವರ್ಷಗಳ ಹಳೆಯ ವಾಹನ ನಾಶಕ್ಕೆ ಅವಕಾಶ ನೀಡಲಾಗಿದೆ. ದಂಡ ಶುಲ್ಕವಿಲ್ಲದೆ ನಾಶ ಪಡಿಸಲು ಸಮಯ ವಿಸ್ತರಣೆ ಮಾಡಲಾಗುತ್ತಿದೆ. ಒಂದು ವರ್ಷದವರೆಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.

ಸಾರಿಗೆ ಆಯುಕ್ತರ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ 10 ಕೋಟಿ ಅಂದಾಜು ಮೊತ್ತಕ್ಕೆ ಸಮ್ಮತಿ ನೀಡಲಾಗಿದೆ. ಹೊಸಪೇಟೆಯಲ್ಲಿ 50:50 ಮಾದರಿ ವಸತಿ ನಿವೇಶನಕ್ಕಾಗಿ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮಹದಾಯಿ ಪ್ರಾಧಿಕಾರ ಯೋಜನೆಗೆ 1.67 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ. ಬೈಲಹೊಂಗಲ ಏತನೀರಾವರಿಗೆ 149 ಕೋಟಿ ಅನುದಾನ ಒದಗಿಸಲಾಗಿದೆ. ವಿಧಾನಮಂಡಲ ಅನರ್ಹತಾ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ ಎಂದರು.

ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಎನ್ನುವಂತೆ ದಿನಾಂಕ 30-11-2024ರವರೆಗೆ ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆಗೆ ಸಂಪುಟ ಒಪ್ಪಿಗೆ ನೀಡಿದೆ. ಪೆರಿಪರಲ್ ರಸ್ತೆಗೆ ಬಂಡವಾಳ ಸಂಗ್ರಹಕ್ಕೆ ಕ್ರಮ ವಹಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಸಂಗ್ರಹಕ್ಕೆ ಸಮ್ಮತಿ ನೀಡಲಾಗಿದೆ ಎಂದು ಹೇಳಿದರು.

ರಾಜ್ಯಪಾಲರು 11 ಬಿಲ್ ವಾಪಸ್ ಕಳಿಸಿದ್ದರು. 5 ಬಿಲ್‌ಗಳಿಗೆ ನಾವು ಉತ್ತರ ಕೊಟ್ಟಿದ್ದೇವೆ. ಸಂಪೂರ್ಣ ಮಾಹಿತಿಯನ್ನ ಒದಗಿಸಿದ್ದೇವೆ. 6 ಬಿಲ್ ಗಳಿಗೆ ಮಾಹಿತಿ ಸಂಗ್ರಹಿಸಿ‌ ಕಳಿಸಬೇಕಿದೆ ಎಂದು ತಿಳಿಸಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BIG NEWS : ರಾಜ್ಯದ ಸಿವಿಲ್ ಸೇವೆಗಳಲ್ಲಿನ ಗ್ರೂಪ್-B ಮತ್ತು C ಹುದ್ದೆಗಳ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ BIG NEWS: 3 YEARS AGE RELAXATION FOR RECRUITMENT TO GROUP-B AND C POSTS IN STATE CIVIL SERVICES: STATE GOVERNMENT
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

18/07/2025 9:02 PM1 Min Read

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM1 Min Read

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM2 Mins Read
Recent News

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

18/07/2025 9:02 PM

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM
State News
KARNATAKA

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈಗ ಜಮೀನಿನ ದಾಖಲೆ ‘ಆನ್ ಲೈನ್’ನಲ್ಲಿ ಲಭ್ಯ, ಜಸ್ಟ್ ಹೀಗೆ ಮಾಡಿ

By kannadanewsnow0918/07/2025 9:02 PM KARNATAKA 1 Min Read

ಬೆಂಗಳೂರು: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ಈಗ ಜಮೀನಿನ ದಾಖಲೆಗು ಕುಳಿತಲ್ಲೇ ಆನ್ ಲೈನ್ ನಲ್ಲೇ ಲಭ್ಯವಾಗುವಂತೆ ಸರ್ಕಾರ…

ಪ್ರಾಮಾಣಿಕವಾಗಿ ಉನ್ನತ ಹುದ್ದೆಗೆರಿ ಆದರೆ ಆ ಹುದ್ದೆಯನ್ನು ಖರೀದಿ ಮಾಡಬೇಡಿ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

18/07/2025 8:48 PM

IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

18/07/2025 8:36 PM

ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

18/07/2025 8:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.