Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಯಕರು 75 ವರ್ಷಕ್ಕೆ ನಿವೃತ್ತಿ ಆಗಬೇಕು: ಭಾರಿ ಸಂಚಲನ ಮೂಡಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

11/07/2025 9:41 PM

ರಾತ್ರಿ ಮಲಗುವ ಮುನ್ನ ಇದೊಂದು ಹಚ್ಚಿ ನೋಡಿ ‘ತುಟಿ’ಗಳು ಕೆಂಪಾಗುತ್ವೆ!

11/07/2025 9:38 PM

ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

11/07/2025 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ 4.5 ಕೋಟಿ ಮಂದಿ `ಗ್ಯಾರಂಟಿ ಯೋಜನೆ’ಗಳ ನೇರ ಲಾಭ ಪಡೆಯುತ್ತಿದ್ದಾರೆ : CM ಸಿದ್ದರಾಮಯ್ಯ ಮಾಹಿತಿ.!
KARNATAKA

BIG NEWS : ರಾಜ್ಯದ 4.5 ಕೋಟಿ ಮಂದಿ `ಗ್ಯಾರಂಟಿ ಯೋಜನೆ’ಗಳ ನೇರ ಲಾಭ ಪಡೆಯುತ್ತಿದ್ದಾರೆ : CM ಸಿದ್ದರಾಮಯ್ಯ ಮಾಹಿತಿ.!

By kannadanewsnow5716/12/2024 5:15 AM

ಗದಗ : ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಜನ ಜಾಗೃತರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,20,000 ಕೋಟಿ ಹಣವನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ.

ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ. ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಆದರೆ ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ರಾಜಕಾರಣದಲ್ಲಿ ತೊಡಗಿದೆ.

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ.

ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ. ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶ ಇರುವ ಸಿರಿಧಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೀನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ.

ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್ ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಒತ್ತಾಯಿಸಿದ್ದಾರೆ. ಜೆ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

BIG NEWS : ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ : CM ಸಿದ್ದರಾಮಯ್ಯ ಮಾಹಿತಿ.! BIG NEWS: 4.5 crore people in the state are directly benefiting from guarantee schemes: CM Siddaramaiah
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

11/07/2025 9:19 PM1 Min Read

BREAKING: ಜು.17ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

11/07/2025 9:11 PM1 Min Read

ಜುಲೈ.17ರಿಂದ ವೈದ್ಯಕೀಯ ಕೋರ್ಸ್ ದಾಖಲಾತಿಗೆ ದಾಖಲೆ ಪರಿಶೀಲನೆ ಆರಂಭ

11/07/2025 8:46 PM1 Min Read
Recent News

ನಾಯಕರು 75 ವರ್ಷಕ್ಕೆ ನಿವೃತ್ತಿ ಆಗಬೇಕು: ಭಾರಿ ಸಂಚಲನ ಮೂಡಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

11/07/2025 9:41 PM

ರಾತ್ರಿ ಮಲಗುವ ಮುನ್ನ ಇದೊಂದು ಹಚ್ಚಿ ನೋಡಿ ‘ತುಟಿ’ಗಳು ಕೆಂಪಾಗುತ್ವೆ!

11/07/2025 9:38 PM

ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

11/07/2025 9:19 PM

BREAKING: ಜು.17ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

11/07/2025 9:11 PM
State News
KARNATAKA

ಚಿತ್ರದುರ್ಗ: SSLC, PUC ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By kannadanewsnow0911/07/2025 9:19 PM KARNATAKA 1 Min Read

ಚಿತ್ರದುರ್ಗ : ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದ ಹಿರಿಯೂರು ತಾಲೂಕಿನ…

BREAKING: ಜು.17ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

11/07/2025 9:11 PM

ಜುಲೈ.17ರಿಂದ ವೈದ್ಯಕೀಯ ಕೋರ್ಸ್ ದಾಖಲಾತಿಗೆ ದಾಖಲೆ ಪರಿಶೀಲನೆ ಆರಂಭ

11/07/2025 8:46 PM

ಯುಜಿಸಿಇಟಿ 25: ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ಸರ್ವರ್ ಸಮಸ್ಯೆಗೆ ಆತಂಕ ಬೇಡವೆಂದ ಕೆಇಎ

11/07/2025 8:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.