ಬೆಂಗಳೂರು : ನೀರಾವರಿ ಇಲಾಖೆ ಹುದ್ದೆ ಹಗರಣಕ್ಕೆ ಸಂಬಂಧಿಸಿದಂತೆ 3 ಸರ್ಕಾರಿ ನೌಕರರು ಸೇರಿ 48 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಕಲಿ ದಾಖಲೆ ನೀಡಿ ಉದ್ಯೋಗ ಗಿಟ್ಟಿಸಲು ಮುಂದಾದ 37 ಮಂದಿ ಸೇರು ಮೂವರು ಸರ್ಕಾರಿ ನೌಕರರು, 11 ಮಂದಿ ಬ್ರೋಕರ್ ಗಳು ಸೇರಿ 48 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದೆ.
ಜಲಸಂಪನ್ಮೂಲ ಇಲಾಖೆಯ 182 ಎಸ್ ಡಿ ಎ ಬ್ಯಾಗ್ ಲಾಗ್ ಹುದ್ದೆ ಭರ್ತಿಗೆ 2022 ರಲ್ಲಿ ಅರ್ಜಿ ಆಹ್ವಾನಿಸಿತ್ತು, ನೇರ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸ್ವೀಕಾರ ಮಾಡಿದ್ದು, ಗರಿಷ್ಟ ಅಂಕ ಪಡೆದವರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿತ್ತು . ಅರ್ಜಿ ಪರಿಶೀಲನೆ ವೇಳೆ 62 ಅಭ್ಯರ್ಥಿಗಳ ಅಂಕಪಟ್ಟಿ ನಕಲಿಯಾಗಿರುವುದು ಪತ್ತೆಯಾಗಿದೆ.
ಕಲಬುರ್ಗಿ ಜಿಲ್ಲೆ ಮುರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲ ಆನಂದ್, ಜೋಗ ಫಾಲ್ಸ್ ಕೆಪಿಟಿಸಿಎಲ್ ಕಚೇರಿ ಪ್ರಥಮ ದರ್ಜೆ ಸಹಾಯಕ ಕೃಷ್ಣ, ಹಾಸನ ಜಲಸಂಪನ್ಮೂಲ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪ್ರದೀಪ್ ಬಂಧಿತ ಸರ್ಕಾರಿ ನೌಕರರಾಗಿದ್ದಾರೆ.
ಏನಿದು ಪ್ರಕರಣ?
2022ರ ಅಕ್ಟೋಬರ್ನಲ್ಲಿ ಜಲಸಂಪನ್ಮೂಲ ಇಲಾಖೆಯಿಂದ 182 ಸಿ ವೃಂದದ ಎಸ್ ಡಿಎ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಸಂಬಂಧ ನೇರ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕೆ ಯಾವುದೇ ಲಿಖಿತ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿಯಲ್ಲಿ ಪಡೆದ ಅತಿ ಹೆಚ್ಚು ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ನೇರ ಅವಕಾಶ ಕಲ್ಪಿಸಲಾಗಿತ್ತು. ನೇಮಕಾತಿ ವೇಳೆ 62 ಅಭ್ಯರ್ಥಿಗಳ ಅಂಕಪಟ್ಟಿ ನಕಲಿಯಾಗಿರುವುದು ಪತ್ತೆಯಾಗಿತ್ತು.