ಬೆಂಗಳೂರು : ಬೆಂಗಳೂರಲ್ಲಿ ಏಳುಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಇದುವರೆಗೂ 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದ ಕಾನ್ಸ್ಟೇಬಲ್ ಸೇರಿದಂತೆ ಹಲವು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಇದುವರೆಗೂ ಪೊಲೀಸರು ಹಲವಾರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಆದರೆ ಈ ಒಂದು ಇದು ಕೋಟಿ ಎಪ್ಪತ್ತು ಲಕ್ಷ ಹಣ ಎಲ್ಲಿ ದೊರೆಯಿತು? ಪೊಲೀಸರ ಕಾರ್ಯಾಚರಣೆ ಹೇಗಿತ್ತು? ಆ ವಿಚಾರಕ್ಕೆ ಸಂಬಂಧಪಟ್ಟಂತೆ ಇಲ್ಲಿದೆ ಸಂಪೂರ್ಣ ಮಾಹಿತಿ.
7 ಕೋಟಿ ದರೋಡೆ ಮಾಡಿ ಆರೋಪಿಗಳು ಹೊಸಕೋಟೆಯ ಬಳಿ ಪಾಳು ಬಿದ್ದ ಮನೆಯಲ್ಲಿ ಹಣ ಇಟ್ಟಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ತಾಳ ಬಿದ್ದ ಮನೆಯಲ್ಲಿ ದರೋಡೆಕೋರ ಗ್ಯಾಂಗ್ ಹಣ ಇಟ್ಟಿದ್ದರು ಅನುಮಾನದ ಮೇಲೆ ಪೊಲೀಸರು ಪಾಲುಬಿದ್ದ ಮನೆಯ ಬಳಿ ತೆರಳಿದ್ದಾರೆ. ಮನೆಯ ಬಾಗಿಲು ಒಡೆದು ಒಳ ಹೋಗಿ ಪರಿಶೀಲಿಸಿದಾಗ 5 ಕೋಟಿ ಹಣ ಪತ್ತೆಯಾಗಿದೆ. ಪಾಳು ಬಿದ್ದ ಮನೆ ಒಂದರಲ್ಲಿ 5 ಕೋಟಿ 56 ಲಕ್ಷ ಹಣ ಪತ್ತೆಯಾಗಿದೆ.
ಸಾಲ ತೀರಿಸೋಕೆ ದರೋಡೆ
ದರೋಡೆಕೋರರ ದರೋಡೆ ಹಿಂದಿನ ಅಸಲಿ ಕಹನಿ ಬಯಲಾಗಿದೆ. ದರೋಡೆಯ ಮಾಸ್ಟರ್ಮೈಂಡ್ ಜೇವಿಯರ್ ಸೇರಿ ಗ್ಯಾಂಗ್ನಲ್ಲಿದ್ದ ಬಹುತೇಕರಿಗೆ ಮೈತುಂಬಾ ಸಾಲ ಇತ್ತು. ಇಸ್ಪೀಟು ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದರು. ಎಸಿಎಂ ಕಂಪನಿ ಕೊಡುವ 17,000 ರೂ. ಸಂಬಳದಲ್ಲಿ ಸಾಯುವತನಕ ಸಾಲ ತೀರಿಸುವುದಕ್ಕೆ ಆಗುವುದಿಲ್ಲ ಎಂದು ದೊಡ್ಡ ದರೋಡೆಗೆ ಗ್ಯಾಂಗ್ ಕೈಹಾಕಿತ್ತು.ದರೋಡೆ ಮಾಡಿ ಬಂದ ಹಣದಲ್ಲಿ ಮಾಡಿರುವಂತಹ ಸಾಲ ತೀರಿಸಿ ಮಿಕ್ಕ ಹಣದಲ್ಲಿ ವಿಲಾಸಿ ಜೀವನ ನಡೆಸಬಹುದೆಂದು ಆರೋಪಿಗಳು ದೊಡ್ಡ ದರೋಡೆಗೆ ಮಾಡಿದ್ದರೆಂಬ ಮಾಹಿತಿ ಪೊಲೀಸರ ತನಿಖೆಯಿಂದ ಬಯಲಾಗಿದೆ.
ಸದ್ಯ ದರೋಡೆಕೋರರನ್ನ ಬೆಂಗಳೂರು ಪೊಲೀಸರು ಬಂಧನ ಮಾಡಿದ್ದಾರೆ. ಸಿಎಂಎಸ್ ಸಂಸ್ಥೆ ಮಾಜಿ ನೌಕರ ಮಾಸ್ಟರ್ಮೈಂಡ್ ಜೇವಿಯರ್, ಗೋವಿಂದಪುರ ಪೊಲೀಸ್ ಠಾಣಾ ಕಾನ್ಸ್ಟೆಬಲ್ ಅಣ್ಣಪ್ಪನಾಯ್ಕ್, ಹಾಲಿ ಸಿಎಂಎಸ್ ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್ ಸೇರಿ ಒಟ್ಟು ಏಳು ದರೋಡೆಕೋರರನ್ನ ಬಂಧಿಸಲಾಗಿದೆ. ಬಂಧಿತ ದರೋಡೆಕೋರರಿಂದ 6.29 ಕೋಟಿ ಹಣ ರಿಕವರಿ ಮಾಡಲಾಗಿದೆ.








