ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕುಸಮಳಿ ಬಳಿ ತಾತ್ಕಾಲಿಕ ಸೇತುವೆ ಒಂದು ಕೊಚ್ಚಿಕೊಂಡು ಹೋಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸುಮಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಭಾರಿ ಮಳೆಯಿಂದಾಗಿ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಬೆಳಗಾವಿ ಮತ್ತು ಗೋವಾ ರಸ್ತೆ ಸಂಚಾರ ಮತ್ತೆ ಬಂದ್ ಮಾಡಲಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣವಾಗುತ್ತಿತ್ತು. ಸೇತುವೆ ಪಕ್ಕ ವಾಹನ ಸಂಚಾರಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಸಹ ಮಾಡಲಾಗಿತ್ತು. ಆದರೆ ಭಾರಿ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದಲ್ಲಿ ಗೋವಾಗೆ ಪ್ರಯಾಣ ಬೆಳೆಸಬಹುದಾಗಿದೆ.