ತುಮಕೂರು : ತುಮಕೂರಿನಲ್ಲಿ ಭಾರಿ ಅಪಘಾತ ಒಂದು ಸಂಭವಿಸಿದ್ದು, ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಟೈರ್ ಬ್ಲಾಸ್ಟ್ ಆಗಿದ್ದ ಪರಿಣಾಮ ಏಕಾಏಕಿ ನಿಯಂತ್ರಣ ಕಳೆದುಕೊಂಡು ಮನೆಗೆ ನುಗ್ಗಿರುವ ಘಟನೆ ತುಮಕೂರು ಜಿಲ್ಲೆಯ ಸಿದ್ದಾಪುರದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಹೌದು ಕೆಎಸ್ಆರ್ಟಿಸಿ ಬಸ್ ಒಂದು ನಿಯಂತ್ರಣ ಕಳೆದುಕೊಂಡು ಮನೆಗೆ ನುಗ್ಗಿದೆ. ಈ ವೇಳೆ ಮನೆಯ ಸದಸ್ಯರೆಲ್ಲರೂ ಶಾಕ್ ಆಗಿದ್ದಾರೆ. ಮಿಂಚಿನ ವೇಗದಲ್ಲಿ ಬಂದು ಕೆಎಸ್ಆರ್ಟಿಸಿ ಬಸ್ ಒಂದು ಮನೆಗೆ ನುಗ್ಗಿದೆ. ಚಲಿಸುತ್ತಿದ್ದ ಬಸ್ ಟೈಯರ್ ಬ್ಲಾಸ್ಟ್ ಆಗಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆದರೆ ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆಯ ಸಿದ್ದಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.