ಮೈಸೂರು : ಮೈಸೂರಲ್ಲಿ ಘೋರ ಘಟನೆ ನಡೆದಿದ್ದು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಭೋಗೇಶ್ವರ ಕಾಲೋನಿಯಲ್ಲಿ ವಾಸವಿದ್ದ ಮುಕುಂದ (38) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಭೋಗೇಶ್ವರ ಕಾಲೋನಿಯಲ್ಲಿ ಕಳೆದ 7 ವರ್ಷದಿಂದ ಮುಕುಂದ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡ್ಲೂರು ತಾಲೂಕಿನ ಪಂಡನತೋರಯ್ ಗ್ರಾಮದವನಾಗಿದ್ದು, ಜಮೀನು ಭೋಗ್ಯಕ್ಕೆ ಪಡೆದು ಮುಕುಂದ ಇಲ್ಲಿಯೇ ವ್ಯವಸಾಯ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮುಕುಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.
ಆತ್ಮಹತ್ಯೆಗು ಮುನ್ನ ತಾಯಿಗೆ ಕರೆ ಮಾಡಿ ವಾಪಸ್ ಕರೆಸಿಕೊಳ್ಳುವಂತೆ ಮುಕುಂದ ಮನವಿ ಮಾಡಿದ್ದ. ನನಗೆ ಇಲ್ಲಿರಲು ಆಗುತ್ತಿಲ್ಲ ವಾಪಸ್ ಕರೆದುಕೊಂಡು ಹೋಗಿ ಅಂತ ಹೇಳಿದ್ದ. ಆದರೆ ಮನೆಯವರು ಬರುವಷ್ಟರಲ್ಲಿ ಮುಕುಂದ ಜಮೀನಿನಲ್ಲಿ ಕತ್ತು ಕೊಯ್ದುಕೊಂಡಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮುಕುಂದ ಮೃತಪಟ್ಟಿದ್ದಾನೆ. ಘಟನೆ ಸಂಭಂದ ಹೆಚ್ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.