ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಆಸ್ತಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಹೌದು, ರಾಜ್ಯದಲ್ಲಿ ಜಮೀನು ಮಾಲೀಕತ್ವ ಸುರಕ್ಷತೆ ಹಾಗೂ ವಂಚನೆ ತಡೆಯಲು ಆಸ್ತಿ ನೋಂದಣಿಗೆ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ರಾಜ್ಯದ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಸ್ತಾವೇಜು ನೋಂದಣಿಗೆ ಆಧಾರ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
ರಾಜ್ಯದಲ್ಲಿ 256 ಸಬ್ ರಿಜಿಸ್ಟ್ರಾರ್ ಕಚೇರಿಗಳು ಸೇವೆ ಸಲ್ಲಿಸುತ್ತಿದ್ದು, ಪ್ರತಿ ಕಚೇರಿಯಲ್ಲಿ ವರ್ಷಕ್ಕೆ ಅಂದಾಜು 20 ರಿಂದ 24 ಲಕ್ಷ ದಸ್ತಾವೇಜುಗಳು ನೋಂದಣಿ ಆಗಲಿದೆ. ಇನ್ನು ಸಬ್ ರಿಜಿಸ್ಟ್ರಾರ್ ಕಚೇರಿ ಸಾಫ್ಟ್ವೇರ್ ಅನ್ನು ಕಾವೇರಿ 2.0 ತಂತ್ರಾಂಶಕ್ಕೆ ಅಪ್ ಗ್ರೇಡ್ ಮಾಡಿ ಅಕ್ರಮ ತಡೆಗೆ ಸುರಕ್ಷಿತ ಕ್ರಮಗಳು, ಆದಾಯ ಸೋರಿಕೆಗೆ ಸಾಕಷ್ಟು ಬದಲಾವಣೆ ತರಲಾಗಿದೆ.
ಆಸ್ತಿ ನೋಂದಣಿಗೆ ಅಧಿಕೃತ ಮೊಬೈಲ್ ನಂಬರ್ ಜೋಡಣೆ, ಬಯೋಮೆಟ್ರಿಕ್ ಆಸ್ಟ್ರೇಟ್, ಹೆಸರು ಹೊಂದಾಣಿಕೆ ಆಗಿರುವುದು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ, ಅಷ್ಟೇಟ್ ಮಾಡಿಕೊಂಡು ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಮುಗಿಸಿಕೊಳ್ಳಿ. ಇಲ್ಲವಾದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳಲು ಸಾಧ್ಯವಾಗದು.
ದಸ್ತಾವೇಜುಗಳಿಗೆ ಬರುವ ಪಕ್ಷಗಾರರು ಹಾಜರುಪಡಿಸುವ ಆಸ್ತಿಯ ದಾಖಲೆ ಪತ್ರಗಳ ಅಸಲಿತನ ಪರೀಕ್ಷೆ ಮಾಡುವ ಅಥವಾ ನೋಂದಣಿಗೆ ನಿರಾಕರಿಸುವ ಅಧಿಕಾರ ಸಬ್ ರಿಜಿಸ್ಟ್ರಾರ್ ಇಲ್ಲ, ವಂಚಕರು ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನಕಲಿ ದಾಖಲೆ ಸಲ್ಲಿಸಿ ಅಕ್ರಮವಾಗಿ ಮಾರಾಟ ಮಾಡುವ ವಂಚಕರಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಆಧಾರ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.