ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಆರೋಪದ ಬೆನ್ನಲ್ಲೆ ನಟ ದರ್ಶನ್ ಸೇರಿದಂತೆ ಹಲವರನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ನಟ ದರ್ಶನ್ ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಕುರಿತಂತೆ ಈಗಾಗಲೇ ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಕೋರ್ಟ್ ಅನುಮತಿಗಾಗಿ ಕಾಯುತ್ತಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಡಿ ಗ್ಯಾಂಗ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಲಿದೆ.
ನಟ ದರ್ಶನ್ ಸೇರಿ ಹಲವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಸಂಬಂಧ ಅಧಿಕೃತ ಆದೇಶಕ್ಕೆ ಜೈಲು ಅಧಿಕಾರಿಗಳು ಕಾಯುತ್ತಿದ್ದಾರೆ. ಈಗಾಗಲೇ ಹಿಂಡಲಗಾ ಜೈಲಿನಲ್ಲಿ ಅಂದೇರಿ ಸೆಲ್ ಗುರುತಿಸಿದ್ದಾರೆ ಎಂದು ಹೇಳಲಾಗಿದೆ.
ನಟೋರಿಯಸ್ ಕೈದಿಗಳನ್ನು ಇಡಲು 36 ಕತ್ತಲು ಕೋಣೆಯ ವ್ಯವಸ್ಥೆ ಬೆಳಗಾವಿ ಜೈಲಿನಲ್ಲಿದೆ. ಅದರಲ್ಲಿ 15 ಕೋಣೆಗಳು ಖಾಲಿ ಇದೆ. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.