ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ಅವರ ಮೇಲೆ ರಮ್ಯಾ ರಘುಪತಿ ಅವರು ಗಲಾಟೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಳೆದ ಒಂದು ವಾರದಿಂದ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ಅವರ ಸಂಬಂಧದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿದ್ದವು, ಇದಲ್ಲದೇ ಖುದ್ದು ಪವಿತ್ರ ಲೋಕೇಶ್ ಕೂಡ ನರೇಶ್ ಹಾಗೂ ತಮ್ಮ ನಡುವಿನ ಸಂಬಂಧ ಬಗ್ಗೆ ಸ್ಪಷ್ಟೀಕರಣ ನೀಡಿದ್ದರು.

ಈ ನಡುವೆ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ಇಂದು ಬೆಳಗ್ಗೆ ಮೈಸೂರಿನ ಹೋಟೆಲ್‌ ವೊಂದರ ರೂಮ್‌ನಲ್ಲಿ ತಂಗಿದ್ದ ವೇಳೆಯಲ್ಲಿ ರಮ್ಯಾ ರಮೇಶ್‌ ಅವರು ದಾಳಿ ನಡೆಸಿದ ಘಟನೆ ನಡೆದಿದೆ. ಇನ್ನೂ ಇದೇ ವೇಳೇ ರಮ್ಯಾ ರಘುಪತಿ, ಪತಿ ನರೇಶ್, ಪವಿತ್ರಾ ಹೊರ ಬರುತ್ತಿದ್ದಂತೆಯೇ ಚಪ್ಪಲಿಯಲ್ಲಿ ಹಲ್ಲೆ ನಡೆಸಲು ಮುಂದಾಗಿದ್ದರು ಎನ್ನುವ ಆರೋಪ ಕೇಳಿ ಬಂದಿದೆ.

Share.
Exit mobile version