Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಸೋಶಿಯಲ್ ಮೀಡಿಯಾ’ದಲ್ಲಿ ಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ `AI’ ನಿಗಾ: ಸಚಿವ ಸಂಪುಟ ಮಹತ್ವದ ನಿರ್ಧಾರ
KARNATAKA

BIG NEWS : `ಸೋಶಿಯಲ್ ಮೀಡಿಯಾ’ದಲ್ಲಿ ಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ `AI’ ನಿಗಾ: ಸಚಿವ ಸಂಪುಟ ಮಹತ್ವದ ನಿರ್ಧಾರ

By kannadanewsnow57

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ ಎಐ ನಿಗಾ ಇಡಲು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಸುದ್ದಿ, ತಪ್ಪು ಮಾಹಿತಿ ಮತ್ತು ದ್ವೇಷ ಪೂರಿತ ಪೋಸ್ಟ್ಗಳನ್ನು ಪತ್ತೆ ಮಾಡಲು ಅನುಕೂಲವಾಗುವಂತೆ ₹67.26 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಾಂಶ ಖರೀದಿಸಲು ತೀರ್ಮಾನಿಸಲಾಗಿದೆ.

ಹೀಗಿದೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುವ ಸುಳ್ಳು ಸುದ್ದಿ, ತಪ್ಪು ಮಾಹಿತಿ ಮತ್ತು ದ್ವೇಷ ಪೂರಿತ ಪೋಸ್ಟ್ಗಳನ್ನು ಪತ್ತೆ ಮಾಡಲು ಅನುಕೂಲವಾಗುವಂತೆ ₹67.26 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ತಂತ್ರಾಂಶ ಖರೀದಿಸಲು ತೀರ್ಮಾನ

2025- 26ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ತಿನ್ ಪ್ಯಾಡ್ಗಳು ಹಾಗೂ ಮುಟ್ಟಿನ ಕಪ್ಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಅನುದಾನಿತ ಶಾಲೆಗಳು, ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಹೆಣ್ಣು ಮಕ್ಕಳಿಗೆ ವಿತರಿಸಲು ಹೊರಡಿಸಿರುವ ಆದೇಶಗಳಿಗೆ ಘಟನೋತ್ತರ ಅನುಮೋದನೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ‘ಸಾರಥಿ’ ಯೋಜನೆಯಡಿ ಆಟೋ ರಿಕ್ಷಾ ಮತ್ತು ಕಾರುಗಳನ್ನು ಖರೀದಿಸಲು ₹19.18 ಕೋಟಿ ಸಹಾಯಧನ ಹಾಗೂ ಇ – ವೆಂಡಿಂಗ್ಯೋಜನೆಯಡಿ ಇ – ವೆಂಡಿಂಗ್ ವಾಹನಗಳನ್ನು ಖರೀದಿಸಲು ₹42.84 ಕೋಟಿ ಸಹಾಯಧನವನ್ನು ಅರ್ಹ ಫಲಾನುಭವಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಒದಗಿಸುವ ಯೋಜನೆಗೆ ಒಪ್ಪಿಗೆ.

ಕರ್ನಾಟಕ ಪೊಲೀಸ್ ಮಸೂದೆಗೆ ತಿದ್ದುಪಡಿ ತರಲು ನಿರ್ಧಾರ.

ರಾಜ್ಯದಲ್ಲಿ ಒತ್ತುವರಿಯಾಗಿರುವ 328 ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸಲು ಒತ್ತುವರಿ ತೆರವುಗೊಳಿಸಿ ಭೂ ವರಾಹ ಯೋಜನೆಯಡಿ ಈ ದೇವಾಲಯಗಳ ಸ್ಥಿರಾಸ್ತಿಗಳನ್ನು ದಾಖಲೀಕರಣಗೊಳಿಸುವ ₹15 ಕೋಟಿ ಯೋಜನೆಗೆ ಒಪ್ಪಿಗೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ₹37.80 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಲ್ಯಾಬ್ಗಳನ್ನು ಸ್ಥಾಪಿಸಲು ಅನುಮೋದನೆ.

ಬೆಂಗಳೂರಿನ ನೀರು ಸರಬರಾಜು ಮತ್ತು ಒಳಚರಂಡಿ ಮ೦ಡಳಿ ವತಿಯಿ೦ದ ಕೆಪಿಸಿಎಲ್ನ ಯಲಹಂಕ ಕಂಬೈನ್ಸ್ ಸೈಕಲ್ ಪವರ್ ಪ್ಲಾಂಟ್ಗೆ ತೃತೀಯ ಸಂಸ್ಕರಿಸಿದ ನೀರನ್ನು ಪೂರೈಸಲು ಜಕ್ಕೂರಿನಲ್ಲಿರುವ 15 ಎಂಎಲ್ಡಿ ತೃತೀಯ ಸ೦ಸ್ಕರಿಸಿದ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ₹39.10 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ.

ಚಿಕ್ಕಬಳ್ಳಾಪುರ, ಕೆಜಿಎಫ್ ಮತ್ತು ವಿಜಯಪುರ ಎಪಿಎಂಸಿಗಳಲ್ಲಿ ₹60 ಕೋಟಿ ವೆಚ್ಚದಲ್ಲಿ ನಬಾರ್ಡ್ ಅನುದಾನದೊ೦ದಿಗೆ ಮೂಲಸೌಕರ್ಯ ಕೈಗೊಳ್ಳಲು ಅನುಮೋದನೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಮಾನವ – ವನ್ಯಜೀವಿ ಸಂಘರ್ಷ ತಡೆಗಟ್ಟಲು ₹11.65 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುಮೋದನೆ.

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನೂತನ ಸೌಪರ್ಣಿಕಾ ಅತಿಥಿಗೃಹ ನಿರ್ಮಾಣ ಕಾಮಗಾರಿಯನ್ನು ₹16 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ.

ಕೆಕೆಆರ್ಡಿಬಿ ಯೋಜನೆಯಡಿ ಕಲಬುರಗಿ ವೃತ್ತದ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಹಾಗೂ ಬಳ್ಳಾರಿ ವೃತ್ತದ ಕೊಪ್ಪಳ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗಗಳ ₹100 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ #CabinetDecisions pic.twitter.com/dj5fulum08

— DIPR Karnataka (@KarnatakaVarthe) February 6, 2026

BIG NEWS: AI monitoring to prevent fake news hate propaganda and misinformation on social media: Cabinet takes important decision
Share. Facebook Twitter LinkedIn WhatsApp Email

Related Posts

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

2 Mins Read
Recent News

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

State News
KARNATAKA

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಸಾಗರ ತಾಲ್ಲೂಕಿಗೆ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ಅವರನ್ನು…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

ಸಾಗರದಲ್ಲಿ ಜೂನ್.1ರ ಶಾಲಾ ಆಚರಣೆಗೆ ಭರ್ಜರಿ ಸಿದ್ಧತೆ: ಮಕ್ಕಳ ಶೈಕ್ಷಣಿಕ ಹಕ್ಕಿಗೆ ಚ್ಯುತಿ ಬಂದರೆ ಸಹಿಸಲ್ಲ ಎಂದ ಬಿಇಒ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.