Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿನ ವಿದೇಶಿ ಸಂಸ್ಥೆಗಳಿಗೆ ತೆರಿಗೆ ವಿಧಿಸಲು ಕಾರ್ಯಾಚರಣೆಯ ನಿಯಂತ್ರಣ ಸಾಕು: ಸುಪ್ರೀಂ ಕೋರ್ಟ್

25/07/2025 8:43 AM

BIG NEWS : ನಾಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿನ `ಗ್ರೂಪ್-ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

25/07/2025 8:39 AM

ಸಿಗರೇಟು ಹೊಗೆಗಿಂತ ಅಗರಬತ್ತಿ ಹೊಗೆ ಹೆಚ್ಚು ಹಾನಿಕಾರಕವೇ? ಅಧ್ಯಯನ ಏನು ಹೇಳಿದೆ ? ಇಲ್ಲಿದೆ ಮಾಹಿತಿ

25/07/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ನೀಡುವ ಗುರಿ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ
KARNATAKA

BIG NEWS : ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ನೀಡುವ ಗುರಿ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ

By kannadanewsnow5714/09/2024 5:13 AM

ಬೆಂಗಳೂರು : ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್ 02 ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು.

ಕಂಪನಿಗಳು ಕೂಡ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕು. ಕೌಶಲ್ಯ ಆಧಾರಿತ ಅಭ್ಯರ್ಥಿಗಳ ಅವಶ್ಯಕತೆ ಇದ್ದಲ್ಲಿ ಕಂಪನಿಗಳು ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಿದರೆ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಕೌಶಲ್ಯ ತರಬೇತಿ ಕಲ್ಪಿಸಿಕೊಡಲಾಗುವುದು ಎಂದರು.

ಕೈಗಾರಿಕಾ ವಲಯದ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮನೆ ಮನೆಯ ಉದ್ಯೋಗಿಗಳ ಸರ್ವೆ ನಡೆಸಲಾಗುತ್ತಿದ್ದು, ಉದ್ಯೋಗ ಇಲ್ಲದ ಮನೆಗೆ ಒಂದು ಉದ್ಯೋಗ ಕೊಡಿಸುವ ಕೆಲಸ ಆರಂಭಗೊಂಡಿದೆ ಎಂದು ಸಚಿವರು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್ ಅವರು ಮಾತನಾಡಿ, ಪ್ರಧಾನಮಂತ್ರಿಯವರು 10 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ. ಮೂಲಸೌಕರ್ಯಕ್ಕೆ ಅನುದಾನ ನೀಡಿ, ಉದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ತಂದಿದ್ದಾರೆ. ಯುವಕರು ಕೇವಲ ಡಿಗ್ರಿ ಪಡೆದರೆ ಪ್ರಯೋಜನೆವಿಲ್ಲ, ಕೌಶಲ್ಯ ಭರಿತ ಶಿಕ್ಷಣ ಪಡೆದ್ರೆ ತಕ್ಷಣವೇ ಸಾಕಷ್ಟು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟೀಲ್ ಇಂಡಿಯಾ, ಪಿ.ಎಮ್ ವಿಶ್ವಕರ್ಮ ಸೇರಿದಂತೆ ಅನೇಕ ಜನಪರ ಯೋಜನೆ ಜಾರಿಗೆ ತಂದು ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಕಲ್ಪಿಸಿಕೊಡುತ್ತಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ತಯಾರಿಕಾ ಕೈಗಾರಿಕೆಗಳು ಹೆಚ್ಚು ಸ್ಥಾಪನೆಯಾಗುವಂತೆ ಕ್ರಮ ವಹಿಸಿ, ಯುವಕರಿಗೆ ಉದ್ಯೋಗ ಕೊಡಿಸುವ ಗ್ಯಾರಂಟಿಗೆ ಒತ್ತು ನೀಡುವ ಕೆಲಸ ಆಗಬೇಕಿದೆ ಎಂದು ಹೇಳಿದರು‌‌.

ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಯುವಕರಿಗೆ ವಿದ್ಯಾಭ್ಯಾಸವಷ್ಟೇ ನೀಡಿದರೇ ಸಾಕಾಗದು, ಅವರ ಶಿಕ್ಷಣಕ್ಕೆ ತಕ್ಕ ಉದ್ಯೋಗ ಕೊಡಿಸಿ, ಕುಟುಂಬದ ಆರ್ಥಿಕ ಸ್ಥಿತಿಗತಿ ಸುಧಾರಿಸುವ ಮೂಲಕ ಸಬಲರಾಗಿಸಬೇಕೆನ್ನುವ ಸದುದ್ದೇಶದಿಂದ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಸುಮಾರು 26 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡಲು 200 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ. ಜಿಲ್ಲೆ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಉದ್ಯಮಿಗಳಿದ್ದು, ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗವನ್ನು ನೀಡುತ್ತಾ ಸಾವಿರಾರು ಕುಟುಂಬಗಳಿಗೆ ನೆರವಾಗಲಿದ್ದಾರೆ. ರಾಜ್ಯ ಸರ್ಕಾರ ಯುವಕರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲು ಇಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಕೆಲಸ ಮಾಡಿದ್ರೇ ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮಾತನಾಡಿ, ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ದಲ್ಲಿ 163 ಕಂಪನಿಗಳು ಹಾಗೂ 12 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದವು. 1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. 3500 ಅಭ್ಯರ್ಥಿಗಳನ್ನು ಮುಂದಿನ ಸಂದರ್ಶನಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ ಮುನಿರಾಜು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ಜಿಲ್ಲಾಧ್ಯಕ್ಷ ರಾಜಣ್ಣ, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ದೊಡ್ಡಬಳ್ಳಾಪುರ ಮಾಜಿ ಶಾಸಕರಾದ ವೆಂಕಟರಮಣಯ್ಯ, ಜಿಲ್ಲಾ ಪಂಚಾಯಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪ್ರತಿಷ್ಠಿತ ಕಂಪನಿಗಳ ಮುಖ್ಯಸ್ಥರು, ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

BIG NEWS : ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ನೀಡುವ ಗುರಿ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ BIG NEWS: Aim to provide one job to every family: Minister KH Muniyappa
Share. Facebook Twitter LinkedIn WhatsApp Email

Related Posts

BIG NEWS : ನಾಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿನ `ಗ್ರೂಪ್-ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

25/07/2025 8:39 AM1 Min Read

BREAKING : ಕಾಡಿನೊಳಗೆ `ಅರಣ್ಯವಾಸಿಗಳ’ ಜಾನುವಾರುಗಳ ಮೇಯಿಸಲು ನಿರ್ಬಂಧ ಇಲ್ಲ : ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

25/07/2025 8:34 AM2 Mins Read

BREAKING : ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ನಟಿ ರಮ್ಯಾ ಪೋಸ್ಟ್ ವೈರಲ್

25/07/2025 8:26 AM1 Min Read
Recent News

ಭಾರತದಲ್ಲಿನ ವಿದೇಶಿ ಸಂಸ್ಥೆಗಳಿಗೆ ತೆರಿಗೆ ವಿಧಿಸಲು ಕಾರ್ಯಾಚರಣೆಯ ನಿಯಂತ್ರಣ ಸಾಕು: ಸುಪ್ರೀಂ ಕೋರ್ಟ್

25/07/2025 8:43 AM

BIG NEWS : ನಾಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿನ `ಗ್ರೂಪ್-ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

25/07/2025 8:39 AM

ಸಿಗರೇಟು ಹೊಗೆಗಿಂತ ಅಗರಬತ್ತಿ ಹೊಗೆ ಹೆಚ್ಚು ಹಾನಿಕಾರಕವೇ? ಅಧ್ಯಯನ ಏನು ಹೇಳಿದೆ ? ಇಲ್ಲಿದೆ ಮಾಹಿತಿ

25/07/2025 8:36 AM

BREAKING : ಕಾಡಿನೊಳಗೆ `ಅರಣ್ಯವಾಸಿಗಳ’ ಜಾನುವಾರುಗಳ ಮೇಯಿಸಲು ನಿರ್ಬಂಧ ಇಲ್ಲ : ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

25/07/2025 8:34 AM
State News
KARNATAKA

BIG NEWS : ನಾಳೆ ರಾಜ್ಯದ ವಿವಿಧ ಇಲಾಖೆಗಳಲ್ಲಿನ `ಗ್ರೂಪ್-ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5725/07/2025 8:39 AM KARNATAKA 1 Min Read

ರಾಜ್ಯದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜುಲೈ 26 ರಂದು ಮಧ್ಯಾಹ್ನ 2 ರಿಂದ…

BREAKING : ಕಾಡಿನೊಳಗೆ `ಅರಣ್ಯವಾಸಿಗಳ’ ಜಾನುವಾರುಗಳ ಮೇಯಿಸಲು ನಿರ್ಬಂಧ ಇಲ್ಲ : ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

25/07/2025 8:34 AM

BREAKING : ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ನಟಿ ರಮ್ಯಾ ಪೋಸ್ಟ್ ವೈರಲ್

25/07/2025 8:26 AM

BREAKING : ಚಿಕ್ಕಮಗಳೂರಿನಲ್ಲಿ ಘೋರ ಘಟನೆ : ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದು ತಾಯಿ ಆತ್ಮಹತ್ಯೆ.!

25/07/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.