Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Income Tax Refund : ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್ : `IT’ ಮರುಪಾವತಿಗೆ ಅರ್ಜಿ ಸಲ್ಲಿಸಿದವರಿಗೆ ಈ ಸಂದೇಶಗಳು.!

24/12/2025 1:32 PM

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM

ಮೆಹುಲ್ ಚೋಕ್ಸಿಗೆ ಬಿಗ್ ಶಾಕ್: ‘ದೇಶಭ್ರಷ್ಟ’ ಹಣೆಪಟ್ಟಿ ತಪ್ಪಿಸಿಕೊಳ್ಳುವ ಪ್ರಯತ್ನಕ್ಕೆ ಕೋರ್ಟ್ ಬ್ರೇಕ್!

24/12/2025 1:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿ. 3 ರಂದು `ವಿಶ್ವ ವಿಶೇಷ ಚೇತನರ ದಿನಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿ. 3 ರಂದು `ವಿಶ್ವ ವಿಶೇಷ ಚೇತನರ ದಿನಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

By kannadanewsnow5728/11/2025 5:15 AM

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ  ಡಿಸೆಂಬರ್-3, 2025 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ 47/3 ರಂತೆ ಪ್ರತಿ ವರ್ಷ ಡಿಸೆಂಬರ್ -03 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲು ನಿರ್ಣಯವಾಗಿರುವ ಹಿನ್ನೆಲೆಯಲ್ಲಿ ಈ ಕೆಳ ಕಾಣಿಸಿರುವ ವಿಶ್ವ ವಿಶೇಷ ಚೇತನರ ದಿನಾಚರಣೆಯ ಉದ್ದೇಶಗಳನ್ನು ಅರಿತು ಸರ್ಕಾರಿ ಶಾಲೆಗಳಲ್ಲಿ ಬಹಳ ಅರ್ಥ ಪೂರ್ಣವಾಗಿ ಆಚರಿಸುವುದು.

ವಿಶ್ವ ವಿಶೇಷ ಚೇತನರ ದಿನಾಚರಣೆಯ ಉದ್ದೇಶಗಳು:

ವಿಶೇಷ ಚೇತನರ ಸಮಸ್ಯೆಗಳನ್ನು ಅರಿಯುವುದು ಮತ್ತು ಇವರ ಆತ್ಮ ಗೌರವವನ್ನು ಹೆಚ್ಚಿಸುವ ಹಕ್ಕುಗಳನ್ನು ರಕ್ಷಿಸುವ ಮತ್ತು ಇವರ ಒಳಿತಿಗಾಗಿ ಕ್ರಮವಹಿಸುವುದಾಗಿದೆ.

ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ಸೇರಿಸುವ ಕುರಿತು ಜಾಗೃತಿ, ಸಮಾನ ಅವಕಾಶ, ಸೌಲಭ್ಯ ಕಲ್ಪಿಸುವುದು.

ವಿಶೇಷ ಚೇತನರಲ್ಲಿ ಆತ್ಮವಿಶ್ವಾಸ ಬೆಳೆಸುವುದು ಹಾಗೂ ಸಮಾಜದ ಇತರೆ ವ್ಯಕ್ತಿಗಳಂತೆ ಸಮಾನವಾದ ಅವಕಾಶಗಳನ್ನು ಒದಗಿಸುವುದು ಮತ್ತು ಅವರಿಗೆ ಯೋಗ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು.

ಪ್ರತಿ ವರ್ಷದಂತೆ, 2025-26ನೇ ಸಾಲಿನಲ್ಲಿಯೂ ಡಿಸೆಂಬರ್-03 ರಂದು ಶಾಲಾ, ಕ್ಲಸ್ಟರ್, ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವುದು.

ಶಾಲಾ ಹಂತದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಚಟುವಟಿಕೆಗಳು:

ಎಲ್ಲಾ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಮಾಡಿಕೊಳ್ಳುವುದು. PRASHAST 2.0 App ឥដ្ឋ ជ

ವಿಶೇಷ ಅಗತ್ಯವುಳ್ಳ ಮಕ್ಕಳನ್ನು(CwSN) Screening ಮಾಡಿ PRASHAST 2.0 App ನಲ್ಲಿ ನಮೂದಿಸುವುದು.

ಪೂರ್ವಭಾವಿಯಾಗಿ ಚಟುವಟಿಕೆ/ಕಾರ್ಯಕ್ರಮಗಳನ್ನು ಯೋಜಿಸಿ, ಅಗತ್ಯ ಸಿದ್ಧತೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸುವುದು.

ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವಿಧ ರೀತಿಯ ನ್ಯೂನತೆಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಸರ್ಕಾರದ ವತಿಯಿಂದ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ (CWSN) ನೀಡಲಾಗುವ ಸೌಲಭ್ಯ ಹಾಗೂ ಭತ್ಯೆಗಳ ಕುರಿತು ಅರಿವು ಮೂಡಿಸುವುದು.

ವಿದ್ಯಾರ್ಥಿಗಳಿಗೆ ಕಲಿಕಾ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ನೀಡಬೇಕಾದ ಸಹಕಾರದ ಕುರಿತು ಅರಿವು ಮೂಡಿಸುವುದು, ಈ ಕುರಿತು ಮುಕ್ತ ಚರ್ಚೆಗೆ ಅವಕಾಶ ಒದಗಿಸುವುದು.

ಶಾಲಾ ಹಂತದಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ಅವರ ಪ್ರತಿಭೆ ಅನಾವರಣಕ್ಕಾಗಿ ಸೂಕ್ತ ವೇದಿಕೆ ಒದಗಿಸಿ, ಅವರಿಗೆ ಅವಕಾಶ ನೀಡುವುದು. ಉದಾ: ಅವರಲ್ಲಿನ ಕಲೆ, ಸೃಜನಶೀಲತೆ, ನಾವಿನ್ಯತೆ, ಕ್ರೀಡೆ, ಸಾಹಿತ್ಯಕ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುವುದು, ಇದಕ್ಕೆ ಸ್ಥಳೀಯ ಸಂಸ್ಥೆಗಳ ದಾನಿಗಳ ಸಹಕಾರ ಪಡೆಯುವುದು.

ವಿಶೇಷ ಚೇತನರಿಗೆ ಸಮಾನ ಅವಕಾಶ ನೀಡುವ ಕುರಿತು ಎಲ್ಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು.

ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ಸಮಿತಿ ರಚನೆ ಹಾಗೂ ಹಮ್ಮಿಕೊಳ್ಳಬೇಕಾಗಿರುವ ಚಟುವಟಿಕೆಗಳು:

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು(ಆ) ರವರ ಅಧ್ಯಕ್ಷತೆಯಲ್ಲಿ ಮತ್ತು ಬ್ಲಾಕ್ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧಕ್ಷತೆಯಲ್ಲಿ ಸಮಿತಿ ರಚಿಸಿಕೊಂಡು ಸರ್ಕಾರಿ ಶಾಲೆಗಳಲ್ಲಿ ನಡೆಯುವಂತಹ ವಿಶ್ವ ವಿಶೇಷ ಚೇತನರ ದಿನಾಚರಣೆಯಲ್ಲಿ ಖುದ್ದು ಭಾಗವಹಿಸುವುದು ಹಾಗೂ ಇತರೆ ಮೇಲ್ವಿಚಾರಣಾಧಿಕಾರಿಗಳು ಭಾಗವಹಿಸುವಂತೆ ಸೂಚಿಸುವುದು. ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, RDPR ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸುವುದು. ಕ್ಲಸ್ಟರ್ ಹಂತದಲ್ಲಿಯೂ ಆಚರಿಸಲು ಕ್ರಮವಹಿಸುವುದು.

ಕ್ಲಸ್ಟರ್, ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ತಂದಿರುವ, ಅವರಿಗೆ ಅವಕಾಶಗಳನ್ನು ನೀಡಿರುವ ಸಂಸ್ಥೆಗಳ/ವ್ಯಕ್ತಿಗಳ ಯಶೋಗಾಥೆಯನ್ನು ಹಂಚಿಕೊಳ್ಳುವುದು, ಅವರನ್ನು ಗೌರವಿಸುವುದು.

ಸಮುದಾಯದವರಿಗೂ ಸಹ ವಿಶೇಷ ಅಗತ್ಯವುಳ್ಳವರ ಕುರಿತು ಮಾಹಿತಿ ನೀಡುವುದು, ಅವರಲ್ಲಿಯೂ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು.

BIG NEWS: All government schools in Karnataka to celebrate 'World Special Needs Day' on December 3rd: Education Department orders.!
Share. Facebook Twitter LinkedIn WhatsApp Email

Related Posts

Income Tax Refund : ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್ : `IT’ ಮರುಪಾವತಿಗೆ ಅರ್ಜಿ ಸಲ್ಲಿಸಿದವರಿಗೆ ಈ ಸಂದೇಶಗಳು.!

24/12/2025 1:32 PM2 Mins Read

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM1 Min Read

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM1 Min Read
Recent News

Income Tax Refund : ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್ : `IT’ ಮರುಪಾವತಿಗೆ ಅರ್ಜಿ ಸಲ್ಲಿಸಿದವರಿಗೆ ಈ ಸಂದೇಶಗಳು.!

24/12/2025 1:32 PM

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM

ಮೆಹುಲ್ ಚೋಕ್ಸಿಗೆ ಬಿಗ್ ಶಾಕ್: ‘ದೇಶಭ್ರಷ್ಟ’ ಹಣೆಪಟ್ಟಿ ತಪ್ಪಿಸಿಕೊಳ್ಳುವ ಪ್ರಯತ್ನಕ್ಕೆ ಕೋರ್ಟ್ ಬ್ರೇಕ್!

24/12/2025 1:24 PM

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM
State News
KARNATAKA

Income Tax Refund : ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್ : `IT’ ಮರುಪಾವತಿಗೆ ಅರ್ಜಿ ಸಲ್ಲಿಸಿದವರಿಗೆ ಈ ಸಂದೇಶಗಳು.!

By kannadanewsnow5724/12/2025 1:32 PM KARNATAKA 2 Mins Read

ನವದೆಹಲಿ : ಆದಾಯ ತೆರಿಗೆ ಮರುಪಾವತಿಗೆ ಅರ್ಜಿ ಸಲ್ಲಿಸಿದವರಿಗೆ ಐಟಿ ಇಲಾಖೆ ಶಾಕ್ ನೀಡಿದೆ. ಇತ್ತೀಚೆಗೆ, ಆದಾಯ ತೆರಿಗೆ ಇಲಾಖೆಯು…

BREAKING : `ವಿಜಯಲಕ್ಷ್ಮಿ’ಗೆ ಕೆಟ್ಟ ಕಾಮೆಂಟ್‌ : ಪೊಲೀಸರಿಗೆ ದೂರು ನೀಡಿದ ದರ್ಶನ್‌ ಪತ್ನಿ.!

24/12/2025 1:25 PM

BREAKING : ಸ್ಯಾಂಡಲ್ ವುಡ್ ನಲ್ಲಿ ನಿಲ್ಲದ `ಫ್ಯಾನ್ಸ್ ವಾರ್’ : ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್, ದೂರು ದಾಖಲು.!

24/12/2025 1:15 PM

BREAKING : ಮೈಸೂರಿನಲ್ಲಿ ಜ.25ಕ್ಕೆ `ಅಹಿಂದ ಸಮಾವೇಶ’ : ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ 

24/12/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.