ಮೈಸೂರು : ಮಹಿಷಾ ದಸರಾ ಆಚರಣೆಗೆ ಅವಕಾಶ ಇಲ್ಲ ಎಂದು ಈಗಾಗಲೇ ತಿಳಿಸಿತ್ತು. ಆದರೂ ಇಂದು ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ದಸರಾ ಸಮಿತಿಯ ಸದಸ್ಯರು ಮಹಿಷ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.
ಹೌದು ಮಹಿಷ ಮೂರ್ತಿ ಪುಷ್ಪಾರ್ಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಎಂದು ಭಾರಿ ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನ ಟೌನ್ ಹಾಲ್ನಲ್ಲಿ ಸಮಿತಿಯ ಸದಸ್ಯರಿಂದ ಹೈಡ್ರಾಮ ನಡೆದಿದೆ. ಈ ವೇಳೆ ಪೊಲೀಸರ ಜೊತೆ ಮತ್ತು ಮಹಿಷ ದಸರಾ ಸಮಿತಿ ಸದಸ್ಯರ ನಡುವೆ ಚಾಮುಂಡಿ ಬೆಟ್ಟದಲ್ಲಿ ವಾಗ್ವಾದ ನಡೆದಿದೆ.