ಬೆಂಗಳೂರು: ಅಹಿಂಸೆಯ ಹರಿಕಾರ ಗೌತಮ ಬುದ್ಧನ ಜನ್ಮದಿನವಾದ ‘ಬುದ್ಧ ಪೂರ್ಣಿಮಾ’ ಹಿನ್ನೆಲೆಯಲ್ಲಿ ನಾಳೆ (ಮೇ 1, ಶುಕ್ರವಾರ) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆದೇಶ ಹೊರಡಿಸಿದೆ.
ಹೌದು. ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಮೇ.1 ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (BBMP ವ್ಯಾಪ್ತಿ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟಕ್ಕೆ ಕಟ್ಟುನಿಟ್ಟಿನ ತಡೆ.
ಬುದ್ಧ ಪೂರ್ಣಿಮೆಯ ಪವಿತ್ರ ದಿನದಂದು ಶಾಂತಿ ಮತ್ತು ಅಹಿಂಸೆಯನ್ನು ಪಾಲಿಸುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಈ ನಿಯಮವನ್ನು ಜಾರಿಗೆ ತರಲಾಗಿದೆ. ಈ ಕುರಿತು ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದು, “ಶುಕ್ರವಾರದಂದು ನಗರದ ಎಲ್ಲಾ ಅಧಿಕೃತ ಕಸಾಯಿಖಾನೆಗಳು ಬಂದ್ ಆಗಿರಲಿವೆ. ಚಿಲ್ಲರೆ ಮಾಂಸ ಮಾರಾಟ ಮಳಿಗೆಗಳಲ್ಲಿಯೂ ಯಾವುದೇ ರೀತಿಯ ವ್ಯಾಪಾರ ಮಾಡುವಂತಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಎಚ್ಚರಿಕೆ: ಪ್ರಾಧಿಕಾರದ ಈ ಆದೇಶವನ್ನು ಉಲ್ಲಂಘಿಸಿ ಮಾಂಸ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
Ban on Animal Slaughter and Sale of Meat on the Occasion of "Buddha Purnima"
Within the jurisdiction of the Greater Bengaluru Authority, animal slaughter in slaughterhouses and the sale of meat in shops across the city will remain completely prohibited on Friday, May 01, in… pic.twitter.com/HLZYqvlTjd
— Greater Bengaluru Authority (@GBA_office) April 29, 2026








