ರಾಜಸ್ತಾನ : ಕರ್ನಾಟಕದ ಕೆಎಸ್ಆರ್ಟಿಸಿ ಸಂಸ್ಥೆಯು ಮತ್ತೊಂದು ಗರಿ ಪಡೆದಿದ್ದು, ರಾಜಸ್ಥಾನದ ಉದಯಪುರದಲ್ಲಿ ನಡೆದ 10ನೇ ಅಫೆಕ್ಸ್ ಇಂಡಿಯಾ Safety, Quality, HR & Business Excellence ಪ್ರಶಸ್ತಿ ಮತ್ತು ಸಮ್ಮೇಳನ- 2025 ಕಾರ್ಯಕ್ರಮದಲ್ಲಿ ಕರ್ನಾಟಕದ ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ಒಟ್ಟು ಎರಡು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮ ಗಳಿಗಾಗಿ ಚಿನ್ನದ ವರ್ಗದಲ್ಲಿ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಶ್ರೇಷ್ಠತೆ ಪ್ರಶಸ್ತಿ ಮತ್ತು 2600 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ, ತ್ವರಿತ, ತಂತ್ರಜ್ಞಾನ ಅವಲಂಬಿತ ಪ್ರಕ್ರಿಯೆಗೆ ಅಪೆಕ್ಸ್ ಇಂಡಿಯಾ ಮಾನವ ಸಂಪನ್ಮೂಲ ಧಾರಣಾ ಶ್ರೇಷ್ಠತೆ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿಗಳನ್ನು ಉದಯಪುರ (ರಾಜಸ್ಥಾನ) ದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಎಸ್ ಸಿ ಬಾಸಿನ್, ಮಾಜಿ ಪ್ರಧಾನ ವ್ಯವಸ್ಥಾಪಕರು SAIL ಮತ್ತು ರಾಯಲ್ ಹೌಸ್ ಆಪ್ ಮೇವಾರ್ ರಾಜಕುಮಾರಿ ಜಾನ್ಹವಿ ಕುಮಾರಿ ರವರು ಶ್ರೀ ಜಿ ಎನ್ ಲಿಂಗರಾಜು, ಮುಖ್ಯ ಭದ್ರತಾ & ಜಾಗೃತಾಧಿಕಾರಿ ಮತ್ತು ಶ್ರೀ ಜೆ ಅಂಥೋಣಿ ಜಾರ್ಜ್, ಮುಖ್ಯ ಸಂಚಾರ ವ್ಯವಸ್ಥಾಪಕರು ರವರಿಗೆ ಪ್ರದಾನ ಮಾಡಿದರು.








