Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

BREAKING : ಮಂಡ್ಯದಲ್ಲಿ ಆಘಾತಕಾರಿ ಘಟನೆ: ತಾಯಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court
KARNATAKA

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

By kannadanewsnow57

ಬೆಂಗಳೂರು: ಪ್ರಬಲ ಸಾಕ್ಷ್ಯಗಳು ಲಭ್ಯವಿರುವಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜಾತಿ ನಿಂದನೆ ಹಾಗೂ ಹಲ್ಲೆಯಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ ಪ್ರಕರಣದ ಪ್ರಮುಖ ಆರೋಪಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ.

ನಿರೀಕ್ಷಣಾ ಜಾಮೀನು ತಿರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೇವನಹಳ್ಳಿ ನಿವಾಸಿ ಅರುಣ್ ಅಲಿಯಾಸ್ ಚಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ವಜಾಗೊಳಿಸಿದೆ.

ಸಿಸಿಟಿವಿ ದೃಶ್ಯವೇ ಪ್ರಬಲ ಸಾಕ್ಷಿ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, “ಆರೋಪಿ ಹಾಗೂ ಆತ್ಮಹತ್ಯೆ ಮಾಡಿಕೊಂಡ ಯುವತಿಗೆ ಯಾವುದೇ ರೀತಿಯ ಪರಿಚಯವಿರಲಿಲ್ಲ” ಎಂದು ವಾದಿಸಿದ್ದರು. ಆದರೆ ಈ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, ಪ್ರಾಸಿಕ್ಯೂಷನ್ ಒದಗಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸಿತು.

ಸಿಸಿಟಿವಿ ದಾಖಲೆಗಳಲ್ಲಿ ಆರೋಪಿಯು ಯುವತಿಯ ಮೇಲೆ ಹಲ್ಲೆ ನಡೆಸಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಈ ಘಟನೆ ನಡೆದ ಮರುದಿನವೇ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಹಲ್ಲೆ ಮತ್ತು ಆತ್ಮಹತ್ಯೆಯ ನಡುವಿನ ನಂಟು ಸ್ಪಷ್ಟವಾಗಿ ಎದ್ದು ಕಾಣುತ್ತದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಇದರೊಂದಿಗೆ ಆರೋಪಿಯ ಹಳೆಯ ಅಪರಾಧ ಹಿನ್ನೆಲೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಯಿತು.

ಪ್ರಕರಣದ ಹಿನ್ನೆಲೆ ಏನು?
ದೇವನಹಳ್ಳಿ ನಿವಾಸಿಯಾಗಿದ್ದ 19 ವರ್ಷದ ವರ್ಷಿಣಿ ಎಂಬ ಯುವತಿ, ಕಳೆದ 2025ರ ಡಿಸೆಂಬರ್ 11ರಂದು ಸಂಜೆ ಅಂಗಡಿಯಿಂದ ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಆರೋಪಿ ಅರುಣ್, ಯುವತಿಯನ್ನು ಅಡ್ಡಗಟ್ಟಿದ್ದಾನೆ. ತನ್ನನ್ನು ಪ್ರೀತಿಸುವಂತೆ, ತನ್ನ ಫೋನ್ ಕರೆ ಹಾಗೂ ಸಂದೇಶಗಳಿಗೆ ಉತ್ತರಿಸುವಂತೆ ಪೀಡಿಸಿದ್ದಾನೆ. ಅಷ್ಟೇ ಅಲ್ಲದೆ, ಸಾರ್ವಜನಿಕವಾಗಿಯೇ ಆಕೆಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಜೀವಬೆದರಿಕೆ ಹಾಕಿದ್ದ.

ಮನನೊಂದು ಆತ್ಮಹತ್ಯೆ:

ಸಾರ್ವಜನಿಕವಾಗಿ ನಡೆದ ಈ ದೌರ್ಜನ್ಯ ಹಾಗೂ ತೀವ್ರ ಅಪಮಾನದಿಂದ ತೀವ್ರವಾಗಿ ಮನನೊಂದ ವರ್ಷಿಣಿ, ಮರುದಿನವೇ (ಡಿಸೆಂಬರ್ 12) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಘಟನೆಗೆ ಸಂಬಂಧಿಸಿದಂತೆ ನೆರೆಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿ ಅರುಣ್ ಎಸಗಿದ ಕೃತ್ಯ ಬೆಳಕಿಗೆ ಬಂದಿದೆ. ಮೃತ ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ದೇವನಹಳ್ಳಿ ಪೊಲೀಸರು ಆತ್ಮಹತ್ಯೆಗೆ ಪ್ರೇರಣೆ (IPC/BNS) ಹಾಗೂ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

BIG NEWS: Anticipatory bail cannot be granted in `SC-ST’ atrocities cases: High Court orders | Karnataka High Court
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

2 Mins Read

BREAKING : ಮಂಡ್ಯದಲ್ಲಿ ಆಘಾತಕಾರಿ ಘಟನೆ: ತಾಯಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ

1 Min Read

ಬೆಂಗಳೂರಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ, ಧರೆಗೆ ಉರುಳಿದ ಬೃಹತ್ ಮರ, ಕಾರು ಜಖಂ!

1 Min Read
Recent News

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

BREAKING : ಮಂಡ್ಯದಲ್ಲಿ ಆಘಾತಕಾರಿ ಘಟನೆ: ತಾಯಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ

ಬೆಂಗಳೂರಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ, ಧರೆಗೆ ಉರುಳಿದ ಬೃಹತ್ ಮರ, ಕಾರು ಜಖಂ!

State News
KARNATAKA

BREAKING : ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಜೀವಂತ ಗುಂಡುಗಳು ಪತ್ತೆ : ಆರೋಪಿ ಅರೆಸ್ಟ್

By ಸುರೇಶ್‌ KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿಯ ಲಾಡ್ಜ್ ಒಂದರಲ್ಲಿ ಅಮೆರಿಕ ನಿರ್ಮಿತ ಸಜೀವ ಗುಂಡುಗಳು (Live Bullets) ಪತ್ತೆಯಾಗಿದ್ದು, ರಾಜಧಾನಿಯಲ್ಲಿ ತೀವ್ರ ಸಂಚಲನ…

BIG NEWS : `SC-ST’ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ | Karnataka High Court

BREAKING : ಮಂಡ್ಯದಲ್ಲಿ ಆಘಾತಕಾರಿ ಘಟನೆ: ತಾಯಿ ಬೈದಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಇಬ್ಬರು ಅಪ್ರಾಪ್ತ ಸಹೋದರಿಯರು ನಾಪತ್ತೆ

ಬೆಂಗಳೂರಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ, ಧರೆಗೆ ಉರುಳಿದ ಬೃಹತ್ ಮರ, ಕಾರು ಜಖಂ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.